Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭದ್ರಾ ಅಭಯಾರಣ್ಯದಲ್ಲಿ ಮೋಜು ಮಸ್ತಿ

ಭದ್ರಾ ಅಭಯಾರಣ್ಯದಲ್ಲಿ ಮೋಜು ಮಸ್ತಿ

ಕ್ರಮ ಕೈಗೊಳ್ಳದ ಭದ್ರಾ ವನ್ಯಜೀವಿ ಅಧಿಕಾರಿಗಳು: ಆರೋಪ

ವಾರ್ತಾಭಾರತಿವಾರ್ತಾಭಾರತಿ27 Oct 2016 10:17 PM IST
share
ಭದ್ರಾ ಅಭಯಾರಣ್ಯದಲ್ಲಿ ಮೋಜು ಮಸ್ತಿ

ಚಿಕ್ಕಮಗಳೂರು, ಅ.27: ಭದ್ರಾ ಅಭಯಾರಣ್ಯದ ಲಕ್ಕವಳ್ಳಿ ವಲಯ, ಭದ್ರಾ ಹಿನ್ನೀರು ವ್ಯಾಪ್ತಿಯ ಸಾವೆ ಬೇಟೆ ನಿಗ್ರಹ ಶಿಬಿರದಲ್ಲಿ ಅ.19ರಂದು ಲಕ್ಕವಳ್ಳಿ ಗ್ರಾಪಂ ಅಧ್ಯಕ್ಷ ಶಿವುಕಿರಣ್ ಮತ್ತು 10 ಮಂದಿ ಸ್ನೇಹಿತರ ತಂಡವೊಂದು ಬೇಟೆ ನಿಗ್ರಹ ಶಿಬಿರದಲ್ಲಿ ಪಾರ್ಟಿ ಮಾಡಿ, ಮೋಜು-ಮಸ್ತಿ ಮಾಡಿದ್ದಾರೆ ಎಂದು ಉಪ್ಪಾರಬೀರನಹಳ್ಳಿ, ಲಕ್ಕವಳ್ಳಿ ಭಾಗದ ನಿಸರ್ಗ ಪ್ರೇಮಿಗಳು, ವನ್ಯಜೀವಿ ಪ್ರೇಮಿಗಳು, ಗ್ರಾಮಸ್ಥರು ಆರೋಪಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

  ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯಿಂದಲೇ ಬಾಡೂಟ ತಯಾರಿಸಿ, ಮದ್ಯ ಸೇವಿಸುತ್ತಾ ದಿನವಿಡೀ ಪಾರ್ಟಿ ಮಾಡಿದ್ದಾರೆ. ಲಕ್ಕವಳ್ಳಿ ವಲಯದಲ್ಲಿ ಇತ್ತೀಚೆಗೆ 10 ಮಂದಿಯ ತಂಡ ವನ್ಯಜೀವಿ ವೀಕ್ಷಣೆಗೆ ಸಫಾರಿ ಹೋಗಲು ಸರಕಾರಿ ವಾಹನವನ್ನು ಬಳಸಿದ್ದು, ಅದರಲ್ಲಿ ಗ್ರಾಪಂ ಅಧ್ಯಕ್ಷರ ಮತ್ತು ಗೆಳೆಯರ ತಂಡವನ್ನು ವಲಯಾರಣ್ಯಾಧಿಕಾರಿಗಳಾದ ಚಂಗಪ್ಪಸಫಾರಿ ವೀಕ್ಷಣೆಗೆ ಮತ್ತು ಬೇಟೆ ನಿಗ್ರಹ ಶಿಬಿರದಲ್ಲಿ ಪಾರ್ಟಿ ವ್ಯವಸ್ಥೆ ಮಾಡಿ ಕಳುಹಿಸಿರುವುದು ದುರಂತಕ್ಕೆ ಕಾರಣವಾಗಿದೆ. ಸಫಾರಿ ವೀಕ್ಷಣೆ ಕೇವಲ 10 ಕಿ.ಮೀ. ವ್ಯಾಪ್ತಿ ನಿಗದಿಪಡಿಸಲಾಗಿದೆ. ಆದರೆ 25 ಕಿ.ಮೀ. ದೂರದಲ್ಲಿರುವ ಭದ್ರಾ ಹಿನ್ನೀರಿನ ಸಾವೆ ಬೇಟೆ ನಿಗ್ರಹ ಶಿಬಿರ ಕೋರ್‌ರೆನ್ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಸಾರ್ವಜನಿಕರಿಗೂ ಹಾಗೂ ಪ್ರವಾಸಿಗರಿಗೆ ನಿಷೇಧವಿದೆ. ಇಷ್ಟಾದರೂ ಶಿಬಿರದಲ್ಲಿ ಮದ್ಯಪಾನ, ಬಾಡೂಟ, ಮೋಜು-ಮಸ್ತಿಗೆ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದಿದ್ದಾರೆ. ಇಲಾಖಾ ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ:

  

ಸಾವೆ ಶಿಬಿರದಿಂದ ಹೊರಟ ಅಧ್ಯಕ್ಷರ ಗುಂಪು ನೇರವಾಗಿ ಅಭಯಾರಣ್ಯದ ಮಧ್ಯದಲ್ಲಿರುವ ಸುಕ್ಕಲಹಟ್ಟಿ ಇಲಾಖಾ ಬಂಗಲೆ ಮತ್ತು ಬೇಟೆ ನಿಗ್ರಹ ಶಿಬಿರಕ್ಕೆ ತೆರಳಿ ಅಲ್ಲಿದ್ದ ಬೇಟೆ ನಿಗ್ರಹ ಶಿಬಿರದ ಸಿಬ್ಬಂದಿಗೆ ಹಿಗ್ಗಾಮುಗ್ಗ ಹಲ್ಲೆ ಮಾಡಿರುತ್ತಾರೆ. ಅರಣ್ಯ ರಕ್ಷಕ ಬೀರೆಂದ್ರ, ವಾಚರ್‌ಗಳಾದ ಶಿವಮೂರ್ತಿ, ರಮೇಶ, ಸುನೀಲಾ ಮತ್ತು ವಾಹನ ಚಾಲಕ ಪ್ರತಾಪ ಹಲ್ಲೆಗೊಳಗಾಗಿರುತ್ತಾರೆ. ಇದಾದ ನಂತರ ಈ ಗುಂಪು ದಾಂಧಲೆ ಮುಂದುವರಿಸುತ್ತ ಭದ್ರಾ ಜಂಗಲ್ ರೆಸಾರ್ಟ್‌ಗೂ ಹೋಗಿ ಪೀಠೋಪಕರಣಗಳನ್ನು ಹೊಡೆದು ದಾಂಧಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ತನಿಖೆ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ: ಸಣ್ಣ ಸಣ್ಣ ವಿಚಾರಕ್ಕೂ ದೂರು ದಾಖಲಿಸುವ ಅರಣ್ಯ ಅಧಿಕಾರಿಗಳು ಇಷ್ಟು ದೊಡ್ಡ ಅಪರಾಧ ನಡೆದಿದ್ದರೂ ಕೂಡ ಅಪರಾಧಕ್ಕೆ ಸಹಕರಿಸಿ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷಿಸಿದ್ದಾರೆ ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ನಂತರ ವಲಯ ಅರಣ್ಯಾಧಿಕಾರಿ ಚಂಗಪ್ಪ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣುಬಸಪ್ಪಪ್ರಕರಣವನ್ನು ಮುಚ್ಚಿಹಾಕಿ ರಾಜಿ ಸಂಧಾನ ಮಾಡಿದ್ದಾರೆ. ಈ ಸಂಬಂಧ ತನಿಖೆಯಾಗಬೇಕು. ಅಭಯಾರಣ್ಯದ ನಿಷೇಧಿತ ಪ್ರದೇಶದಲ್ಲಿ ತೆರಳಿ ಪಾರ್ಟಿ ಮಾಡಲು ಅನುವು ಮಾಡಿಕೊಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮವಾಗಬೇಕು. ಕರ್ತವ್ಯನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಗ್ರಾಪಂ ಅಧ್ಯಕ್ಷ ಮತ್ತು ಅವರ ತಂಡದ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X