Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೇಬಿ ಪೌಡರ್ ನಿಂದ ಕ್ಯಾನ್ಸರ್ : ಜಾನ್ಸನ್...

ಬೇಬಿ ಪೌಡರ್ ನಿಂದ ಕ್ಯಾನ್ಸರ್ : ಜಾನ್ಸನ್ ಎಂಡ್ ಜಾನ್ಸನ್ ಗೆ ಮತ್ತೆ ನ್ಯಾಯಾಲಯದಲ್ಲಿ ಸೋಲು

ದೂರುದಾರ ಮಹಿಳೆಗೆ ಏಳು ಕೋ.ಡಾ.ಪರಿಹಾರ !

ವಾರ್ತಾಭಾರತಿವಾರ್ತಾಭಾರತಿ28 Oct 2016 3:20 PM IST
share
ಬೇಬಿ ಪೌಡರ್ ನಿಂದ ಕ್ಯಾನ್ಸರ್ : ಜಾನ್ಸನ್ ಎಂಡ್  ಜಾನ್ಸನ್ ಗೆ ಮತ್ತೆ ನ್ಯಾಯಾಲಯದಲ್ಲಿ ಸೋಲು

ಸೇಂಟ್ ಲೂಯಿಸ್,ಅ.28: ಜಾನ್ಸನ್ ಆ್ಯಂಡ್ ಜಾನ್ಸನ್ ಮತ್ತೆ ನ್ಯಾಯಾಲಯದಲ್ಲಿ ಸೋಲನ್ನು ಕಂಡಿದೆ. ಕಂಪನಿಯ ಬೇಬಿ ಪೌಡರ್‌ನ ನಿರಂತರ ಬಳಕೆಯಿಂದಾಗಿ ತಾನು ಅಂಡಾಶಯದ ಕ್ಯಾನ್ಸರ್‌ಗೆ ತುತ್ತಾಗಿದ್ದೇನೆ ಎಂದು ದೂರಿದ್ದ ಕ್ಯಾಲಿಫೊರ್ನಿಯಾದ ಮಹಿಳೆಗೆ ಏಳು ಕೋಟಿ ಡಾ.ಪರಿಹಾರವನ್ನು ನೀಡುವಂತೆ ಸೇಂಟ್ ಲೂಯಿಸ್‌ನ ನ್ಯಾಯಾಲಯವು ಅದಕ್ಕೆ ಆದೇಶಿಸಿದೆ.

ಕ್ಯಾಲಿಫೋರ್ನಿಯಾದ ಮೊಡೆಸ್ಟೊ ನಿವಾಸಿ ಡೆಬೋರಾ ದಾಖಲಿಸಿದ್ದ ಮೊಕದ್ದಮೆಯ ವಿಚಾರಣೆ ಸೆ.26ರಂದು ಆರಂಭಗೊಂಡಿತ್ತು. ಆಕೆಗೆ ಅಂಡಾಶಯದ ಕ್ಯಾನ್ಸರ್ ಇರುವುದು 2012ರಲ್ಲಿ ಪತ್ತೆಯಾಗಿತ್ತು. ತನ್ನ ಬೇಬಿ ಪೌಡರ್‌ನ ತಯಾರಿಕೆ ಮತ್ತು ಮಾರಾಟದಲ್ಲಿ ಬಳಕೆದಾರರ ಹಿತವನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯು ಕಡೆಗಣಿಸುತ್ತಿದೆ ಎಂದು ಆಕೆ ಆರೋಪಿಸಿದ್ದಳು.ನ್ಯಾಯಾಲಯ ಸರಿಯಾದ ತೀರ್ಪು ನೀಡಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ. ತನ್ನ ಉತ್ಪನ್ನಗಳಿಗೂ ಅಂಡಾಶಯದ ಕ್ಯಾನ್ಸರ್‌ಗೂ ಸಂಬಂಧವಿದೆ ಎಂದು ಜಾನ್ಸನ್ ಆ್ಯಂಡ್ ಜಾನ್ಸನ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಅಗತ್ಯವಿದೆ ಎನ್ನುವುದನ್ನು ನ್ಯಾಯಾಲಯವು ಮತ್ತೊಮ್ಮೆ ದೃಢಪಡಿಸಿದೆ ಎಂದು ಡೆಬೋರಾ ಪರ ವಕೀಲ ಜಿಮ್ ಒಂಡರ್ ಹೇಳಿದರು.

ಅಂಡಾಶಯ ಕ್ಯಾನ್ಸರ್‌ಗೆ ಗುರಿಯಾಗಿರುವ ಮಹಿಳೆಯರು ಮತ್ತು ಅವರ ಕುಟುಂಬಗಳ ಬಗ್ಗೆ ನಮಗೆ ಸಹಾನುಭೂತಿಯಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿರುವ ಜಾನ್ಸನ್ ಆ್ಯಂಡ್ ಜಾನ್ಸನ್‌ನ ವಕ್ತಾರೆ ಕ್ಯಾರೋಲ್ ಗುಡ್‌ರಿಚ್ ಅವರು, ಕಂಪನಿಯ ಬೇಬಿ ಪೌಡರ್ ಸುರಕ್ಷಿತವಾಗಿದೆ ಎನ್ನುವದಕ್ಕೆ ವಿಜ್ಞಾನದ ಸಮರ್ಥನೆಯಿದೆ, ಹೀಗಾಗಿ ನಾವು ಈ ತೀರ್ಪಿನ ವಿರುದ್ಧ ವೆುೀಲ್ಮನವಿ ಸಲ್ಲಿಸಲಿದ್ದೇವೆ ಎಂದಿದ್ದಾರೆ.

ಈ ವರ್ಷದ ಆರಂಭದಲ್ಲಿ ಸೇಂಟ್ ಲೂಯಿಸ್‌ನ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿಯೂ ಜಾನ್ಸನ್ ಆ್ಯಂಡ್ ಜಾನ್ಸನ್ ಸೋಲು ಅನುಭವಿಸಿತ್ತು ಮತ್ತು ಒಟ್ಟೂ 12.70ಕೋ.ಡಾ.ಪರಿಹಾರ ನೀಡುವಂತೆ ನ್ಯಾಯಾಲಯವು ಆದೇಶಿಸಿತ್ತು.

ಅಮೆರಿಕದಲ್ಲಿ ಈ ವರ್ಷ ನಿರೀಕ್ಷಿಸಲಾಗಿರುವ 17 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಸುಮಾರು 22,000 ಪ್ರಕರಣಗಳು ಅಂಡಾಶಯ ಕ್ಯಾನ್ಸರ್‌ದ್ದಾಗಿರಲಿವೆ ಎನ್ನುವುದು ಒಂದು ಅಂದಾಜು.

ಸುಮಾರು 2,000 ಮಹಿಳೆಯರು ಅಮೆರಿಕದ ವಿವಿಧ ನ್ಯಾಯಾಲಯಗಳಲ್ಲಿ ಇಂತಹುದೇ ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಸಾವಿರಾರು ಇತರ ಪ್ರಕರಣಗಳನ್ನು ವಕೀಲರು ಪರಿಶೀಲಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X