Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾರಿಯ ನಂಬರ್ ನೀಡಿದರೆ ಸಾಕು, ಸಿಗುತ್ತದೆ...

ಲಾರಿಯ ನಂಬರ್ ನೀಡಿದರೆ ಸಾಕು, ಸಿಗುತ್ತದೆ ಒಡಿಶಾದ ಮರಳು ಸಾಗಾಟ ಪಾಸ್!

ಕೇರಳ-ಕರ್ನಾಟಕ ಗಡಿಯಲ್ಲಿ ಬೃಹತ್ ಮರಳು ಮಾಫಿಯಾ

ವಾರ್ತಾಭಾರತಿವಾರ್ತಾಭಾರತಿ28 Oct 2016 8:58 PM IST
share
ಲಾರಿಯ ನಂಬರ್ ನೀಡಿದರೆ ಸಾಕು, ಸಿಗುತ್ತದೆ ಒಡಿಶಾದ ಮರಳು ಸಾಗಾಟ ಪಾಸ್!

ಮಂಜೇಶ್ವರ, ಅ.28: ಮಂಜೇಶ್ವರದ ಹೊಸಂಗಡಿ ಬಳಿಯ ವಾಮಂಜೂರು ಚೆಕ್‌ಪೋಸ್ಟ್‌ನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದ್ದ ನಕಲಿ ಮರಳು ಸಾಗಾಟದ ಪಾಸ್ ಮಾರಾಟ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದ ಹಿಂದೆ ಮಾಫಿಯಾ ಇರುವುದಾಗಿ ಶಂಕೆ ಮೂಡಿದ್ದು, ಉನ್ನತಮಟ್ಟದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜೇಶ್ವರ ಪೊಲೀಸರಿಗೆ ಆದೇಶ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ವಾಮಂಜೂರು ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆೆದಾಗ ಅವರಲಿ ಒಡಿಶಾದ ನಕಲಿ ಮರಳು ಪಾಸ್‌ಗಳು ಕಂಡು ಬಂದಿತ್ತು. ಅದರ ಬೆನ್ನಲ್ಲೇ ವಶಕ್ಕೆ ಪಡೆದ ಲಾರಿಯಲ್ಲೂ ಇದೇ ರೀತಿಯ ಮರಳು ಪಾಸ್‌ಗಳು ಪತ್ತೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಕ್‌ಪೋಸ್ಟ್ ಪರಿಸರದಲ್ಲಿ ಕಾರ್ಯಾಚರಿಸುತ್ತಿರುವ ಬಾರಕ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಆನ್‌ಲೈನ್ ಡಿಕ್ಲರೇಶನ್‌ನ ಮಾಲಕ ಕುಂಡಂಕುಝಿ ಚೆಡಿಕುಂಡ್ ನಿವಾಸಿ ಮುಸ್ತಫಾ (40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೊಳಪಡಿಸಿದಾಗ ನಕಲಿ ಮರಳು ಪಾಸ್‌ಗಳ ಮಾಫಿಯಾ ಬೆಳಕಿಗೆ ಬಂದಿದೆ.

ಮಂಗಳೂರಿನ ಪ್ರೆಸ್ ಒಂದರಲ್ಲಿ ನಕಲಿ ಪಾಸ್‌ನ್ನು ಮುದ್ರಿಸುತ್ತಿರುವುದಾಗಿ, ಒಂದು ಪಾಸ್ ಗೆ 10 ಸಾವಿರ ರೂ. ಪಡೆದುಕೊಳ್ಳುತ್ತಿರುವುದಾಗಿ ಬಂಧಿತ ಆರೋಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈತನ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬೇವಿಂಜೆ, ಚೆಂಗಳ ಹಾಗೂ ಹೊಸಂಗಡಿಯಿಂದ ಮೂವರನ್ನು ಬಂಧಿಸಿದ್ದಾರೆ.

ಮುಸ್ತಫಾನ ಕಚೇರಿಗೆ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ ಒಡಿಶಾದ ನಕಲಿ ಬಿಲ್ ಹಾಗೂ ಪಾಸ್‌ಗಳು ಲಭಿಸಿವೆ. ಕೇರಳದ ತಪಾಸಣಾ ಕೇಂದ್ರಕ್ಕೆ ಮರಳು ಲಾರಿಗಳು ಆಗಮಿಸಿದರೆ ಅಲ್ಲಿ ಕೇವಲ 1,500 ರೂ. ಪಾವತಿಸಿ ಮರಳನ್ನು ಸಾಗಿಸಬಹುದಾಗಿತ್ತು. ಆದರೆ ಎರಡು ಲಾರಿಗಳನ್ನು ಪೊಲೀಸರು ವಶಕ್ಕೆ ತೆಗೆದು ವಿಚಾರಿಸಿದಾಗಲೇ ನಕಲಿ ಪಾಸ್‌ಗಳ ಮಾಫಿಯಾ ಬೆಳಕಿಗೆ ಬಂದಿದೆ. ಪಾಸ್ ಅವಶ್ಯವಿದ್ದವರಿಗೆ ಲಾರಿಯ ನಂಬರ್‌ಗಳನ್ನು ನೀಡಿದರೆ ಕೂಡಲೇ ಅವರಿಗೆ ಮುಸ್ತಫಾ ಹಾಗೂ ತಂಡ ಪಾಸ್‌ನ್ನು ನೀಡುತ್ತಿತ್ತು. ಬೇಡಿಕೆಯ ಹಣ ನೀಡಿದರೆ ಒಡಿಶಾದಿಂದ ಸಾಗಿಸುತ್ತಿರುವ ಮರಳು ಎಂಬುದಾಗಿ ಖಚಿತಪಡಿಸಿಕೊಳ್ಳಲು ದಾರಿ ಮಧ್ಯೆ ಇರುವ ಚೆಕ್ ಪೋಸ್ಟ್‌ಗಳ ನಕಲಿ ಸೀಲ್‌ನ್ನು ಕೂಡಾ ಹಾಕಿ ಕೊಡಲಾಗುತಿತ್ತು. ಕರ್ನಾಟಕ ಕೇರಳ ಗಡಿಪ್ರದೇಶಗಳಿಂದ ಲೋಡ್ ಆಗುತ್ತಿರುವ ಮರಳನ್ನು ಒಡಿಶಾದಿಂದ ಬರುತ್ತಿರುವ ಮರಳೆಂಬುದಾಗಿ ಬಿಂಬಿಸಲಾಗುತಿತ್ತು ಎಂದು ತಿಳಿದುಬಂದಿದೆ. 

ಆನ್‌ಲೈನ್ ಸೆಂಟರ್‌ನ್ನು ನಡೆಸುತಿದ್ದ ಮುಸ್ತಫಾ ಐಷಾರಾಮಿ ಕಾರುಗಳಲ್ಲಿ ತಿರುಗಾಡಿಕೊಂಡು ಆಡಂಬರದ ಜೀವನ ನಡೆಸುತ್ತಿದ್ದ. ಹಲವು ರಾಜಕೀಯ ನೇತಾರರ ಸಂಪರ್ಕವನ್ನಿಟ್ಟುಕೊಂಡಿದ್ದ ಎಂಬುದು ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ನಕಲಿ ಪಾಸ್‌ಗಳನ್ನು ನೀಡುತ್ತಿದ್ದ ತಂಡದ ಕುರಿತು ಉನ್ನತಮಟ್ಟದಲ್ಲಿ ತನಿಖೆ ನಡೆಸಿದರೆ ಖಂಡಿತವಾಗಿಯೂ ಇನ್ನಷ್ಟು ಅಕ್ರಮಗಳು ಬಯಲಾಗಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X