Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ವಿಮಾನ ನಿಲ್ದಾಣದ ಸಮೀಪದ...

ದಿಲ್ಲಿ ವಿಮಾನ ನಿಲ್ದಾಣದ ಸಮೀಪದ ನಿವಾಸಿಗಳ ತಲೆಯ ಮೇಲೆ ಏನು ಬೀಳುತ್ತಿದೆ ಗೊತ್ತೇ?

ಹೆದರಬೇಕೇ....ಸಿಟ್ಟು ಮಾಡಿಕೊಳ್ಳಬೇಕೇ...ಅಲ್ಲ....?

ವಾರ್ತಾಭಾರತಿವಾರ್ತಾಭಾರತಿ28 Oct 2016 9:18 PM IST
share
ದಿಲ್ಲಿ ವಿಮಾನ ನಿಲ್ದಾಣದ ಸಮೀಪದ ನಿವಾಸಿಗಳ ತಲೆಯ ಮೇಲೆ ಏನು ಬೀಳುತ್ತಿದೆ ಗೊತ್ತೇ?

ಹೊಸದಿಲ್ಲಿ,ಅ.28: ‘ಭಗವಾನ್ ದೇತಾ ಹೈ ತೋ ಛಪ್ಪಡ್ ಫಾಡ್‌ಕೆ ದೇತಾ ಹೈ’ಎನ್ನುವುದು ಹಿಂದಿ ನಾಣ್ನುಡಿಯಾಗಿದ್ದರೂ ಎಲ್ಲ ಭಾಷಿಕರಿಗೂ ಸಾಮಾನ್ಯವಾಗಿ ಸುಪರಿಚಿತವೇ ಆಗಿದೆ. ದೇವರು ಕೊಡುವುದಿದ್ದರೆ ಸಮೃದ್ಧಿಯಾಗಿ ಕೊಡುತ್ತಾನೆ ಎನ್ನುವುದು ಇದರ ಸರಳ ಅರ್ಥ. ಇದೀಗ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಬಳಿಯ ನಿವಾಸಿಗಳಿಗೂ ಇಂತಹುದೇ ಅನುಭವವಾಗುತ್ತಿದೆ. ಆದರೆ ಇಲ್ಲಿ ಕೊಡುತ್ತಿರುವುದು ಮಾತ್ರ ದೇವರು ಅಲ್ಲ......ವಿಮಾನಯಾನ ಸಂಸ್ಥೆಗಳು. ಅಂದ ಹಾಗೆ ಇಲ್ಲಿ ಮೇಲಿಂದ ಬೀಳುತ್ತಿರುವುದು ಸಂಪತ್ತಲ್ಲ...ರಾಶಿ ರಾಶಿ ಮಾನವ ಮಲ!

  ಲೆಜ(ನಿವೃತ್ತ) ಸತ್ವಂತ್ ಸಿಂಗ್ ದಹಿಯಾ ಇದೀಗ ಈ ದೂರನ್ನು ಹಿಡಿದುಕೊಂಡು ಹಸಿರು ನ್ಯಾಯಾಧಿಕರಣ(ಎನ್‌ಜಿಟಿ)ದ ಮೊರೆ ಹೋಗಿದ್ದಾರೆ.ದಕ್ಷಿಣ ದಿಲ್ಲಿಯ ವಸಂತ್ ಎನ್‌ಕ್ಲೇವ್‌ನಲ್ಲಿನ ಅವರ ನಿವಾಸವನ್ನು ಮತ್ತು ಗೋಡೆಗಳ ಮೇಲೆ ಮಾನವ ಮಲವಿದೆಯೇ ಎನ್ನುವುದನ್ನು ಪರಿಶೀಲಿಸಲು ಹಿರಿಯ ಪರಿಸರ ಇಂಜಿನಿಯರ್ ಓರ್ವರನ್ನು ನಿಯೋಜಿಸುವಂತೆ ಕೇಂದ್ರ ಮಾಲಿನ್ಯ ನಿಯಂತರಣ ಮಂಡಳಿ(ಸಿಪಿಸಿಬಿ)ಗೆ ಎನ್‌ಜಿಟಿ ಅಧ್ಯಕ್ಷ ಸ್ವತಂತ್ರ ಕುಮಾರ್ ನೇತೃತ್ವದ ಪೀಠವು ಆದೇಶಿಸಿದೆ. ಗೋಡೆಗಳ ಮೇಲೆ ಮಾನವ ಮಲವು ಪತ್ತೆಯಾದರೆ ವಿಶ್ಲೇಷಣೆಗಾಗಿ ಸ್ಯಾಂಪಲ್‌ನ್ನು ಸಂಗ್ರಹಿಸುವಂತೆ ಮತ್ತು ವಿಶ್ಲೇಷಣಾ ವರದಿಯನ್ನು ತನಗೆ ಸಲ್ಲಿಸುವಂತೆ ಅದು ಸೂಚಿಸಿದೆ. ಪರಿಸರ ಮತ್ತು ಅರಣ್ಯ ಹಾಗೂ ನಾಗರಿಕ ವಾಯುಯಾನ ಸಚಿವಾಲಯಗಳು ಮತ್ತು ಸಿಪಿಸಿಬಿಗೆ ನೋಟಿಸುಗಳನ್ನೂ ಅದು ಹೊರಡಿಸಿದೆ.
ಇದು ಸ್ವಚ್ಛ ಭಾರತ ಅಭಿಯಾನದ ಉಲ್ಲಂಘನೆಯಾಗಿದೆ ಎಂದು ಬಣ್ಣಿಸಿರುವ ದಹಿಯಾ, ಸ್ಥಳೀಯ ನಿವಾಸಿಗಳ ಆರೋಗ್ಯಕ್ಕೆ ಅಪಾಯವನ್ನೊಡ್ಡುತ್ತಿರುವ ವಾಣಿಜ್ಯಿಕ ವಿಮಾನಯಾನ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮಗಳನ್ನು ಜರುಗಿಸುವಂತೆ ಮತ್ತು ಭಾರೀ ದಂಡವನ್ನು ಹೇರುವಂತೆ ತನ್ನ ಅರ್ಜಿಯಲ್ಲಿ ಕೋರಿದ್ದಾರೆ.
ವಿಮಾನಗಳ ಶೌಚಾಲಯಗಳಲ್ಲಿ ಮಾನವ ವಿಸರ್ಜನೆಯನ್ನು ವಿಶೇಷ ಟ್ಯಾಂಕುಗಳಲ್ಲಿ ಸಂಗ್ರಹಿಸಲಾಗುತ್ತದೆ. ಸಾಮಾನ್ಯವಾಗಿ ವಿಮಾನವು ನಿಲ್ದಾಣದಲ್ಲಿ ಇಳಿದ ಬಳಿಕ ಸ್ವಚ್ಛತಾ ಸಿಬ್ಬಂದಿಗಳು ಅದನ್ನು ವಿಲೇವಾರಿ ಮಾಡುತ್ತಾರೆ. ಆದರೆ ಕೆಲವೊಮ್ಮೆ ಈ ಟ್ಯಾಂಕುಗಳು ಆಕಾಶದಲ್ಲಿಯೇ ಸೋರಿಕೆಯಾಗುತ್ತವೆ ಎನ್ನುವುದನ್ನು ವಾಯುಯಾನ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಇದರಿಂದ ಭಾರತ ಸೇರಿದಂತೆ ಹಲವೆಡೆ ಜನರು ಗಾಯಗೊಂಡಿ ರುವ ನಿದರ್ಶನಗಳೂ ಇವೆ!
 ಕಳೆದೊಂದು ವಾರದಿಂದಲೂ ಬೆಳಗಿನ ಜಾವದಲ್ಲಿ ವಿಮಾನಗಳಲ್ಲಿನ ಮಲ ನಮ್ಮ ಮನೆಯ ತಾರಸಿಯಲ್ಲಿ ರಾಶಿ ರಾಶಿಯಾಗಿ ಬೀಳುತ್ತಿದೆ. ಗೋಡೆಗಳಿಗೆಲ್ಲ ಮಲ ಮೆತ್ತಿಕೊಳ್ಳುತ್ತಿದೆ. ಹಿಂದೆಯೂ ಹೀಗೆಯೇ ಆಗಿತ್ತು. ಆಗ 50,000 ರೂ.ಖರ್ಚು ಮಾಡಿ ಮನೆಗೆ ಹೊಸದಾಗಿ ಸುಣ್ಣಬಣ್ಣ ಮಾಡಿಸಿದ್ದೆ. ಈಗ ದೀಪಾವಳಿ ಎದುರಿನಲ್ಲಿರುವಾಗ ಮತ್ತೆ ಅದೇ ಕಥೆಯಾಗಿದೆ. ನಾನು ನಿವೃತ್ತ ವ್ಯಕ್ತಿ,ವಿಮಾನಯಾನ ಸಂಸ್ಥೆಗಳ ಈ ಹೊಲಸನ್ನು ಸ್ವಚ್ಛಗೊಳಿಸಲು ನಾನು ಪದೇಪದೇ ಎಲ್ಲಿಂದ ದುಡ್ಡು ತರಲಿ ಎಂದು ದಹಿಯಾ ಅಲವತ್ತುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X