Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಯಲಾದ ಗೀಲಾನಿ ದ್ವಂದ್ವ ನೀತಿ

ಬಯಲಾದ ಗೀಲಾನಿ ದ್ವಂದ್ವ ನೀತಿ

ವಾರ್ತಾಭಾರತಿವಾರ್ತಾಭಾರತಿ28 Oct 2016 11:52 PM IST
share

ಜಮ್ಮು, ಅ.28: ಕಾಶ್ಮೀರದಲ್ಲಿನ ಪರಿಸ್ಥಿತಿಯಿಂದಾಗಿ ಅಲ್ಲಿನ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲಾಗದೆ ಹಾಗೂ ಯುವಕರು ಉದ್ಯೋಗ ಸಿಗದೆ ತೊಂದರೆಗೀಡಾಗಿದ್ದರೂ ಅಲ್ಲಿನ ಪ್ರತ್ಯೇಕತಾವಾದಿ ನಾಯಕರುಗಳು ಮಾತ್ರ ತಮ್ಮ ಮಕ್ಕಳನ್ನು ವಿದೇಶಗಳಿಗೆ ಶಿಕ್ಷಣ ಹಾಗೂ ಉದ್ಯೋಗಗಳಿಗೆ ಕಳುಹಿಸಿ ಆರಾಮವಾಗಿದ್ದಾರೆಂಬ ದೂರುಗಳು ಆಗಾಗ ಕೇಳಿ ಬರುತ್ತವೆ. ಇಂತಹುದೇ ಇನ್ನೊಂದು ದ್ವಂದ್ವ ನೀತಿಯ ದೃಷ್ಟಾಂತದಲ್ಲಿ ಹಿಜ್ಬುಲ್ ಉಗ್ರ ಬುರ್ಹಾನ್ ವಾನಿ ಹತ್ಯೆಯ ನಂತರ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಕಾಶ್ಮೀರದ ಎಲ್ಲ ಶಾಲೆಗಳನ್ನು ಬಲವಂತವಾಗಿ ಮುಚ್ಚಿಸಿ ಕಡ್ಡಾಯವಾಗಿ ರಜೆ ನೀಡಿದ್ದರೆ, ಒಂದು ಶಾಲೆ ಮಾತ್ರ ಇದರಿಂದ ಹೊರತಾಗಿತ್ತು. ಈ ಶಾಲೆಯೇ ಶ್ರೀನಗರದಲ್ಲಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್. ಈ ಶಾಲೆಯ ಒಂಬತ್ತನೇ ಹಾಗೂ ಹತ್ತನೇ ತರಗತಿಯ 573 ಮಕ್ಕಳು ಇತ್ತೀಚೆಗೆ ಇಂಟರ್ನಲ್ ಪರೀಕ್ಷೆಗೆ ಹಾಜರಾಗಿದ್ದರು. ಈ ವಿದ್ಯಾರ್ಥಿಗಳಲ್ಲಿ ಹುರಿಯತ್ ಅಧ್ಯಕ್ಷ ಸಯ್ಯದ್ ಅಲಿ ಶಾ ಗೀಲಾನಿಯವರ ಮೊಮ್ಮಗಳೂ ಸೇರಿದ್ದಳು. ಈಕೆ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಗೀಲಾನಿಯವರ ಹಿರಿಯ ಪುತ್ರ ಡಾ ನಯೀಮ್ ಝಫರ್ ಗೀಲಾನಿಯವರ ಪುತ್ರಿ.

ನಯೀಮ್ ಹುರಿಯತ್ ಕಾನ್ಫರೆನ್ಸ್ ಸದಸ್ಯರಲ್ಲವಾಗಿದ್ದು ತಮ್ಮ ಕುಟುಂಬದೊಂದಿಗೆ ಪ್ರತ್ಯೇಕವಾಗಿ ಶ್ರೀನಗರದಲ್ಲಿ ವಾಸವಾಗಿದ್ದಾರೆ. ಶಾಲೆ ಪರೀಕ್ಷೆ ನಡೆಸುವುದಾಗಿ ಹೇಳಿದಾಗ ನನ್ನ ಪುತ್ರಿ ಕಡ್ಡಾಯವಾಗಿ ಅದಕ್ಕೆ ಹಾಜರಾಗಲೇ ಬೇಕಾಗಿತ್ತು. ಇಲ್ಲದೇ ಹೋದಲ್ಲಿ ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯುವ ಅಂತಿಮ ಪರೀಕ್ಷೆಗೆ ಆಕೆಗೆ ಹಾಜರಾಗುವುದು ಸಾಧ್ಯವಾಗುತ್ತಿರಲಿಲ್ಲ, ಎಂದು ನಯೀಮ್ ಹೇಳುತ್ತಾರೆ. ವರದಿಯೊಂದರ ಪ್ರಕಾರ ಪರೀಕ್ಷೆ ಅಕ್ಟೋಬರ್ 1 ರಿಂದ 5 ತಾರೀಕಿನ ತನಕ ನಗರದ ಸ್ಟೇಡಿಯಂ ಒಂದರಲ್ಲಿ ಅತ್ಯಧಿಕ ಭದ್ರತೆಯ ನಡುವೆ, ಜಮ್ಮು ಕಾಶ್ಮೀರ ಸರಕಾರದ ಸಹಕಾರದೊಂದಿಗೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X