Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಜೆಪಿ ಸ್ಥಾಪಕ ಪ್ರಸನ್ನ ಮೇಲೆ ಮಸಿ

ಕೆಜೆಪಿ ಸ್ಥಾಪಕ ಪ್ರಸನ್ನ ಮೇಲೆ ಮಸಿ

ಬಿಎಸ್ ವೈ - ಶೋಭಾ ಕುರಿತು ಪತ್ರಿಕಾಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ29 Oct 2016 12:12 AM IST
share
ಕೆಜೆಪಿ ಸ್ಥಾಪಕ ಪ್ರಸನ್ನ ಮೇಲೆ ಮಸಿ

ಬೆಂಗಳೂರು, ಅ. 28: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ವಿವಾಹವಾಗಿರುವ ಕುರಿತು ರಹಸ್ಯವನ್ನು ಬಹಿರಂಗಪ ಡಿಸಲು ಮುಂದಾದ ಕೆಜೆಪಿ ಸಂಸ್ಥಾಪಕ, ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಅವರಿಗೆ ಪತ್ರಕರ್ತರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ಮಸಿ ಬಳಿದ ಘಟನೆ ಶುಕ್ರವಾರ ನಡೆದಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಯವರನ್ನು ವಿವಾಹವಾಗಿದ್ದಾರೆ ಎಂದು ಆರೋಪಿಸಿ ಪ್ರಸನ್ನ ಕುಮಾರ್ ಸಾಕ್ಷವನ್ನು ಬಹಿರಂಗಗೊಳಿಸಲು ಮುಂದಾದಾಗ ಇದರಲ್ಲಿ ದೋಷವಿದೆ ಎಂದು ಆಕ್ಷೇಪ ವ್ಯಕ್ತಪಡಿ ಸುತ್ತಿದ ದುಷ್ಕರ್ಮಿಗಳ ತಂಡ ಏಕಾಏಕಿ ಎರಡು ಬಾಟಲಿಗಳಲ್ಲಿ ತಂದಿದ್ದ ಮಸಿಯನ್ನು ಅವರ ಮೇಲೆ ಸುರಿದರು.ಮಸಿ ಬಳಿದ ನಂತರ ದುಷ್ಕರ್ಮಿಗಳು ಭಾರತ ರಕ್ಷಣಾ ವೇದಿಕೆಗೆ ಜಯವಾಗಲಿ, ಭಾರತೀಯ ಹೆಣ್ಣಿನ ಬಗ್ಗೆ ಕೀಳಾಗಿ ಮಾತನಾಡುವವರಿಗೆ ಧಿಕ್ಕಾರವಿರಲಿ ಎಂದು ಘೋಷಣೆಗಳನ್ನು ಕೂಗಿ ಕ್ಷಣಾರ್ಧದಲ್ಲೇ ಸ್ಥಳದಿಂದ ಕಾಲ್ಕಿತ್ತರು.

ಯಡಿಯೂರಪ್ಪನವರ ಮೇಲೆ ಆರೋಪ: ಮಾಜಿ ಮುಖ್ಯಮಂತ್ರಿ ಯಡಿಯೂರ ಪ್ಪನವರೇ ಬಾಡಿಗೆ ಗೂಂಡಾಗಳನ್ನು ಬಿಟ್ಟು ಮಸಿ ಬಳಿಸಿದ್ದಾರೆ. ಈ ಹಿಂದೆಯೂ ಶಿವಮೊಗ್ಗ ದಲ್ಲಿ ಯಡಿಯೂರಪ್ಪ ಬೆಂಬಲಿಗರು ಹಲ್ಲೆ ನಡೆಸಲು ಯತ್ನಿಸಿದ್ದರು. ಯಡಿಯೂರಪ್ಪ ನವರಿಗೆ ನಾಚಿಕೆಯಾಗಬೇಕು. ಬೆನ್ನ ಹಿಂದೆ ಚೂರಿ ಹಾಕುವುದನ್ನು ಬಿಟ್ಟು ಧೈರ್ಯವಾಗಿ ನೇರವಾಗಿ ಬಂದು ಚೂರಿ ಹಾಕಿ ಎಂದು ಪ್ರಸನ್ನ ಕುಮಾರ್ ಸವಾಲೆಸೆದರು.
ಯಡಿಯೂರಪ್ಪನವರು ಬಿಜೆಪಿ ತೊರೆದು ಕೆಜೆಪಿ ಸೇರಿದ ನಂತರ ಏನೇನು ಮಾಡಿದರು ಎನ್ನುವುದು ನನಗೆ ಗೊತ್ತಿದೆ. ಯಡಿಯೂರಪ್ಪ ಮತ್ತು ಮಾಜಿ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ವಿವಾಹವಾಗಿದೆ ಎನ್ನುವುದಕ್ಕೆ ನನ್ನ ಬಳಿ ಸಿಡಿ ಇದೆ. ಸದ್ಯದಲ್ಲೇ ಇದನ್ನು ಬಹಿರಂಗಪಡಿಸುತ್ತೇನೆ. ಯಡಿಯೂರಪ್ಪನವರಿಂದ ನನಗೆ ಜೀವ ಬೆದರಿಕೆಯಿದ್ದು ನನಗೆ ಸರಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣ ಕುರಿತು ಕಬ್ಬನ್ ಪಾರ್ಕ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ವಿವಾಹ ಕುರಿತು ಹೇಳಿದ್ದು...
ನನಗೆ ವಿವಾಹವಾದರೆ ಅನ್ನ ಛತ್ರ ನಿರ್ಮಾಣ ಮಾಡುತ್ತೇನೆ ಎಂದು ಹರಕೆ ಹೊತ್ತು ಕೊಂಡಿದ್ದರು. ಮಾಜಿ ಸಚಿವೆ ಶೋಭಾ ಕರಂದ್ಲಾಜೆ ವಿವಾಹ ಆದ ನಂತರ ಹರಕೆಯನ್ನು ತೀರಿಸಲು ಕೇರಳದ ಮಡೇಕಾವು ಎಂಬಲ್ಲಿ ಮಹಾ ಕಾಳಿ ದೇವಸ್ಥಾನದಲ್ಲಿ ಅನ್ನ ಛತ್ರ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ದಾಖಲೆಯನ್ನು ಬಹಿರಂಗಗೊಳಿಸಿದರು.
ಈ ಕಟ್ಟಡದ ಸ್ಮರಣಾರ್ಥ ಕಲ್ಲಿನ ಮೇಲೆ ಶ್ರೀಮತಿ ಶೋಭಾ ಕರಂದ್ಲಾಜೆ ಮತ್ತು ಯಡಿಯೂರಪ್ಪನವರು ನಿರ್ಮಾಣ ಮಾಡಿದ್ದಾರೆ ಎಂದು ಕೆತ್ತಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ವಿವಾಹವಾಗಿದೆ ಎನ್ನಲು ಈ ಒಂದೇ ಸಾಕ್ಷಿ ಸಾಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X