Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾದಕ ವಸ್ತುಗಳ ವಿರುದ್ಧ ಜಾಗೃತಿಗೆ...

ಮಾದಕ ವಸ್ತುಗಳ ವಿರುದ್ಧ ಜಾಗೃತಿಗೆ ವಿದ್ಯಾರ್ಥಿಗಳ ವಿಭಿನ್ನ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ30 Oct 2016 12:55 PM IST
share
ಮಾದಕ ವಸ್ತುಗಳ ವಿರುದ್ಧ ಜಾಗೃತಿಗೆ ವಿದ್ಯಾರ್ಥಿಗಳ ವಿಭಿನ್ನ ಪ್ರಯತ್ನ

ಕಾಸರಗೋಡು, ಅ.30:  ಹೊಸ ತಲೆಮಾರನ್ನು ಮದ್ಯ - ಮಾದಕ ವಸ್ತುಗಳ ಸೇವನೆಯಿಂದ  ಪೋಷಕರನ್ನು ಮುಕ್ತಿಗೊಳಿಸುವ ನಿಟ್ಟಿನಲ್ಲಿ ಕೇರಳ - ಕರ್ನಾಟಕ ಗಡಿ ಪ್ರದೇಶದ ಶಾಲಾ ವಿದ್ಯಾರ್ಥಿಗಳು ಸಾಕ್ಷ್ಯ ಚಿತ್ರವೊಂದನ್ನು ತಯಾರಿಸಿದ್ದು , ಮುಂದಿನ ತಿಂಗಳಾತ್ಯದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

'ಮೀರಾ' ಎಂಬ ಹೆಸರಿನ ಸಾಕ್ಷ್ಯ ಚಿತ್ರ  ದೇಲಂಪಾಡಿ ಗ್ರಾಮದ ಕುಗ್ರಾಮವಾದ ಅಡೂರು ಪಾಂಡಿಯ ಸರಕಾರಿ ಹಯರ್ ಸೆಕಂಡರಿ ಶಾಲೆಯ  ಮಕ್ಕಳು  ಮತ್ತು ಶಾಲಾ ಶಿಕ್ಷಕರ , ನಾಗರಿಕರ, ಸಂಘ ಸಂಸ್ಥೆಗಳ  ಪ್ರಯತ್ನದಿಂದ ಮೂಡಿ ಬಂದಿದೆ. 30 ನಿಮಿಷಗಳ ಈ ಸಾಕ್ಷ ಚಿತ್ರ   ದುಶ್ಚಟ ಹೊಂದಿರುವ ಕುಟುಂಬದ ದುಸ್ಥಿತಿಯನ್ನು ತೆರೆದಿಡುತ್ತಿದೆ.

ಕುಟುಂಬದಲ್ಲಿ ಹೆಚ್ಚುತ್ತಿರುವ ಮದ್ಯ - ಮಾದಕ ವಸ್ತುಗಳ ಬಳಕೆಯ ಅಪಾಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ  ಸಾಕ್ಷ ಚಿತ್ರ ನಿರ್ಮಾಣಗೊಂಡಿದ್ದು , ಇದು ಪೋಷಕರಿಗೆ ಸಂದೇಶ ನೀಡುತ್ತಿದೆ. ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಉತ್ತಮ ಸಮಾಜದ ಸಂದೇಶದೊಂದಿಗೆ ದುಶ್ಚಟ ಗಳಿಂದ  ಕುಟುಂಬ , ಸಮಾಜವನ್ನು ಪಾರು ಮಾಡುವ ಉದ್ದೇಶದಿಂದ  ಪಾಂಡಿ  ಹಿರಿಮೆ ಎಂಬ ಅಧ್ಯಾಪಕರ ಒಕ್ಕೂಟ  ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.  ಇಂದಿನ ದಿನಗಳಲ್ಲಿ ಕಂಡು ಬರುತ್ತಿರುವ  ಮದ್ಯ - ಮಾದಕ ವಸ್ತುಗಳ ಚಟಕ್ಕೆ ಹಿರಿಯರು , ಯುವಕರು ಬಲಿಯಾಗುತ್ತಿದ್ದಾರೆ. ಇದರಿಂದ ಹಲವು ಕುಟುಂಬಗಳು ಬೀದಿಪಾಲಾಗುತ್ತಿದೆ. ಮಹಿಳೆಯರು , ಮಕ್ಕಳು  ಇದರಿಂದ ನಲುಗುತ್ತಿದ್ದಾರೆ.  ಇದರ ವಿರುದ್ಧ ಮೂಡಿಸುವ ನಿಟ್ಟಿನಲ್ಲಿ ಚಿತ್ರ ನಿರ್ಮಾಣಗೊಂಡಿದ್ದು,  ಕೇವಲ  ಒಂದು ವಾರದಲ್ಲೇ ಈ ಚಿತ್ರ ನಿರ್ಮಾಣ ಪೂರ್ಣಗೊಳಿಸಲಾಗಿದೆ.

 ವಿಜಯನ್ ಶಂಕ್ರಪಾಡಿ ಎಂಬವರ ನಿರ್ದೇಶನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಹಗಲು ಮಾತ್ರವಲ್ಲ ರಾತ್ರಿ ದ್ರಶ್ಯವನ್ನು  ಕೂಡಾ ಈ ಚಿತ್ರ ಚಿತ್ರೀಕರಿಸಲಾಗಿದೆ. ಉಭಯ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಮಕ್ಕಳ ಪಾತ್ರದಲ್ಲಿ ಎರಡನೇ ತರಗತಿಯ ಅಭಿರಾಜ್, ಆರನೇ ತರಗತಿಯ ಆರತಿ, ತಾಯಿ ಜಾನಕಿ ಪಾತ್ರದಲ್ಲಿ ಶಿಕ್ಷಕಿ  ಅಂಜಲಿ  ಅಭಿನಯಿಸಿದ್ದಾರೆ. ಇವರಲ್ಲದೆ ರಜನಿ ಸೋನಿ , ರಂಜಿತ್ ಪೆರ್ಲ ನಟಿಸಿದ್ದು  ಶಾಲಾ ಪ್ರಾಂಶುಪಾಲ ವಿ. ರಾಜು ,   ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ  ದಿವಾಕರ , ಈಶ್ವರ ನಾಯ್ಕ್, ನಜ್ಮುನ್ನಿಸಾ, ರೇಖಾ ಸ್ಮಿತಾ, ಪ್ರಶಾಂತ್ ರೋಹಿತ್, ಕೃಷ್ಣಪ್ಪ ಹಾಗೂ ಶಾಲಾ ಶಿಕ್ಷಕರು  ನೆರವಾಗಿದ್ದು, ಒಂದು ಲಕ್ಷ ರೂ. ಚಿತ್ರ ನಿರ್ಮಾಣಕ್ಕೆ ವೆಚ್ಚವಾಗಿದ್ದು, ಸಂಘ ಸಂಸ್ಥೆಗಳು , ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು  ಸಹಕಾರ ನೀಡಿದ್ದಾರೆ.

ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಎಲ್ಲಾ ಶಾಲೆಗಳಲ್ಲಿ ಹಾಗೂ ಪರಿಸರದಲ್ಲಿ ಪ್ರದರ್ಶನ ಮಾಡುವ ನಿಟ್ಟಿನಲ್ಲಿ  ಗಮನಹರಿಸಿದ್ದು, ಪೊಲೀಸ್ , ಅಬಕಾರಿ,  ಶಿಕ್ಷಣ  ಇಲಾಖೆಗಳ ನೆರವು ಪಡೆದು, ರಾಜ್ಯವ್ಯಾಪಿ  ಪ್ರದರ್ಶನ ನಡೆಸುವ ನಿಟ್ಟಿನಲ್ಲಿ  ಚಿಂತನೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X