Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಪ್ರಧಾನಿಗಳನ್ನು ಅವಮಾನಿಸಿದ...

ಮಾಜಿ ಪ್ರಧಾನಿಗಳನ್ನು ಅವಮಾನಿಸಿದ ರಾಮಗೋಪಾಲ್ ವರ್ಮಾ

ವಾರ್ತಾಭಾರತಿವಾರ್ತಾಭಾರತಿ30 Oct 2016 3:16 PM IST
share
ಮಾಜಿ ಪ್ರಧಾನಿಗಳನ್ನು ಅವಮಾನಿಸಿದ ರಾಮಗೋಪಾಲ್ ವರ್ಮಾ

ಮುಂಬೈ,ಅ.30: ಬಾಲಿವುಡ್ ನಿರ್ದೇಶಕ ರಾಮಗೋಪಾಲ್ ವರ್ಮಾಗೆ ವಿವಾದಗಳನ್ನು ಸೃಷ್ಟಿಸುವುದು ಅದೇಕೆ ಇಷ್ಟವೋ ಗೊತ್ತಿಲ್ಲ. ಇದೀಗ ಮತ್ತೆ ವಿವಾದವನ್ನು ಸೃಷ್ಟಿಸಿರುವ ಅವರು ಟ್ವಿಟರ್‌ನಲ್ಲಿ ಮಾಜಿ ಪ್ರಧಾನಿಗಳನ್ನು ಅವಮಾನಕ್ಕೆ ಗುರಿಯಾಗಿಸಿದ್ದಾರೆ. ತನ್ನ ಒರಟು ಟ್ವೀಟ್‌ಗಳಿಗಾಗಿ ಈ ಹಿಂದೆ ನೆಟ್ಟಿಗರಿಂದ ಸಾಕಷ್ಟು ಬೈಗುಳಗಳನ್ನು ತಿಂದಿರುವ ವರ್ಮಾ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಪಿ.ವಿ.ನರಸಿಂಹರಾವ್ ಮತ್ತು ಚಂದ್ರಶೇಖರ ಅವರ ವಿರುದ್ಧ ಅವಮಾನಕಾರಿ ಟ್ವೀಟ್‌ಗಳನ್ನು ಮಾಡುವ ಮೂಲಕ ಮತ್ತೊಮ್ಮೆ ಲಕ್ಷ್ಮಣ ರೇಖೆಯನ್ನು ಉಲ್ಲಂಘಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಸಾಕಷ್ಟು ಮುಜುಗರವನ್ನುಂಟು ಮಾಡಿದ್ದಾರೆ.

ವರ್ಮಾ ತನ್ನ ಸರಣಿ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿಗಳನ್ನು ಹಿಂದಿನ ಬೆಂಚಿನವರು, ಕೆಟ್ಟವರು ಮತ್ತು ಸ್ತ್ರೀಯರ ಬಗ್ಗೆ ಗೌರವವಿಲ್ಲದವರು ಎಂದು ಜರೆದಿದ್ದಾರೆ. ವಾಜಪೇಯಿ, ರಾವ್ ಮತ್ತು ಚಂದ್ರಶೇಖರ ಅವರು ಸಂಸತ್ತಿನಲ್ಲಿ ತಮಾಷೆಯ ಗಳಿಗೆಯೊಂದನ್ನು ಹಂಚಿಕೊಳ್ಳುತ್ತಿರುವ ಮತ್ತು ಅವರ ಮುಂದಿನ ಸಾಲಿನಲ್ಲಿ ಸೋನಿಯಾ ಆಸೀನರಾಗಿರುವ ಚಿತ್ರವೊಂದನ್ನೂ ಅವರು ಲೋಡ್ ಮಾಡಿದ್ದಾರೆ.

        ಶಾಲೆಯಲ್ಲಾಗಲೀ ಸಂಸತ್ತಿನಲ್ಲಾಗಲೀ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳುವವರು ಯಾವಾಗಲೂ ಕೆಟ್ಟವರೇ ಆಗಿರುತ್ತಾರೆ. ಈ ಮೂವರು ಯಾರೆಂದು ಗೊತ್ತಿಲ್ಲ. ಆದರೆ ಕೆಟ್ಟವರಂತೆ ಕಾಣುತ್ತಿದ್ದಾರೆ. ಈ ಚಿತ್ರವು ಮಹಿಳೆಯರನ್ನು ಅಗೌರವಿಸುವ ಭಾರತೀಯ ಪುರುಷರ ಆಂತರಿಕ ಮನಃಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಅವರು ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದು ವರ್ಮಾ ಟ್ವೀಟಿಸಿದ್ದಾರೆ.

ತನ್ನ ಟ್ವೀಟ್‌ನಲ್ಲಿ ಮುಗ್ಧನ ಸೋಗು ಹಾಕಿರುವ ಅವರು, ಈ ಮೂವರೂ ಯಾರೇ ಆಗಿರಲಿ, ಅವರು ತಮ್ಮ ಮುಂದೆ ಕುಳಿತಿರುವ ಗೌರವಸ್ಥ ಮಹಿಳೆಯ ಬಗ್ಗೆ ಪೋಲಿ ಜೋಕುಗಳನ್ನು ಮಾಡುತ್ತಿರುವುದು ತನಗೆ ಆಘಾತವನ್ನುಂಟು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ರಜನಿಕಾಂತ,ಎಲ್ಲರ ಇಷ್ಟದೈವ ಗಣೇಶ... ಇತ್ಯಾದಿ ವಿರುದ್ಧ ತನ್ನ ವಿವಾದಾತ್ಮಕ ಟ್ವೀಟ್‌ಗಳಿಂದ ವರ್ಮಾ ಸಾಕಷ್ಟು ತೊಂದರೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇದೀಗ ಮೂವರು ಮಾಜಿ ಪ್ರಧಾನಿಗಳ ವಿರುದ್ಧ ಮಾಡಿರುವ ಈ ಟ್ವೀಟ್ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿರುವ ಅವರ ಮುಂಬರುವ ಚಿತ್ರ ‘ಸರ್ಕಾರ್ 3’ರ ಪ್ರಚಾರ ತಂತ್ರವೇ ಎಂಬ ಅನುಮಾನ ಹಲವರನ್ನು ಕಾಡುತ್ತಿದೆ.

Back benchers r always bad whether in school or parliament .Dont know who these 3 r but they look badder than each pic.twitter.com/iJ9GgqKFlM

— Ram Gopal Varma (@RGVzoomin) October 29, 2016

This pic represents inner psyche of Indian men's disrespect for women ..Police shud investigate who they are pic.twitter.com/NRydI299M4

— Ram Gopal Varma (@RGVzoomin) October 29, 2016

Whoever these 3 men r am shocked they are cracking dirty jokes about such a classy dignified woman whoever she is pic.twitter.com/sbRJ07vpt7

— Ram Gopal Varma (@RGVzoomin) October 29, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X