Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈ, ಶಾರ್ಜಾ ವಿಮಾನನಿಲ್ದಾಣ 1 ತಾಸು...

ದುಬೈ, ಶಾರ್ಜಾ ವಿಮಾನನಿಲ್ದಾಣ 1 ತಾಸು ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ30 Oct 2016 11:01 PM IST
share
ದುಬೈ, ಶಾರ್ಜಾ ವಿಮಾನನಿಲ್ದಾಣ 1 ತಾಸು ಸ್ಥಗಿತ

ಇಸ್ಲಾಮಾಬಾದ್,ಅ,30: ಅನಧಿಕೃತ ಡ್ರೋನ್ ವಿಮಾನವೊಂದರ ಹಾರಾಟದ ಹಿನ್ನೆಲೆಯಲ್ಲಿ ದುಬೈ ಹಾಗೂ ಶಾರ್ಜಾಗಳ ಅಂತರಾಷ್ಟ್ರೀಯ ವಿಮಾನನಿಲ್ದಾಣಗಳಲ್ಲಿ ಶುಕ್ರವಾರ ರಾತ್ರಿ ಒಂದು ತಾಸಿಗೂ ಹೆಚ್ಚು ಕಾಲ ವಿಮಾನಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

  ‘‘ಅನಧಿಕೃತ ಡ್ರೋನ್ ವಿಮಾನವೊಂದರ ಚಟುವಟಿಕೆಯ ಹಿನ್ನೆಲೆಯಲ್ಲಿ ದುಬೈ ವಿಮಾನನಿಲ್ದಾಣದ ಸುತ್ತಮುತ್ತಲಿನ ವಾಯುಕ್ಷೇತ್ರವನ್ನು ಶುಕ್ರವಾರ ಸಂಜೆ 7.25ರಿಂದ ರಾತ್ರಿ 8.45ರವರೆಗೆ ಮುಚ್ಚುಗಡೆಗೊಳಿಸಲಾಗಿತ್ತು ಹಾಗೂ ವಿಮಾನನಿಲ್ದಾಣಕ್ಕೆ ಬರುತ್ತಿದ್ದ 22 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿತ್ತು’’ ದುಬೈ ವಿಮಾನನಿಲ್ದಾಣದ ಹೇಳಿಕೆಯು ತಿಳಿಸಿದೆ. ‘‘ಸುರಕ್ಷತೆಯು ನಮ್ಮ ಪ್ರಥಮ ಆದ್ಯತೆಯಾಗಿದೆ. ನಿಯಂತ್ರಣ ಪ್ರಾಧಿಕಾರಗಳ ಅನುಮತಿ ಪಡೆಯದೆ ಡ್ರೋನ್ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ವಿಮಾನ ನಿಲ್ದಾಣದ ಹಾಗೂ ವಿಮಾನ ಇಳಿಯುವ ಸ್ಥಳದ 5 ಕಿ.ಮೀ.ವ್ಯಾಪ್ತಿಯೊಳಗಿನ ಪ್ರದೇಶ ಸೇರಿದಂತೆ ನಿರ್ಬಂಧಿತ ಪ್ರದೇಶಗಳನ್ನು ಡ್ರೋನ್ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ’’ಎಂದು ದುಬೈ ವಿಮಾನನಿಲ್ದಾಣದ ಮೂಲಗಳು ತಿಳಿಸಿವೆ.

 ದುಬೈ ವಿಮಾನನಿಲ್ದಾಣದ ಬಳಿ ಡ್ರೋನ್ ಹಾರಾಟ ಪತ್ತೆಯಾದ ಹಿನ್ನೆಲೆಯಲ್ಲಿ ಶಾರ್ಜಾ ವಿಮಾನನಿಲ್ದಾಣದ ಎಂಟು ವಿಮಾನಗಳ ಹಾರಾಟಕ್ಕೂ ಅಡ್ಡಿಯುಂಟಾಗಿತ್ತು. ಶಾರ್ಜಾ ಹಾಗೂ ದುಬೈ ವಿಮಾನನಿಲ್ದಾಣಗಳು ಸಮಾನ ವಾಯುಮಾರ್ಗಗಳನ್ನು ಹಂಚಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಶಾರ್ಜಾದಲ್ಲಿ ಸುಮಾರು ರಾತ್ರಿ 8 ಗಂಟೆಯ ಹೊತ್ತಿಗೆ ವಿಮಾನನಿಲ್ದಾಣವನ್ನು ಮುಚ್ಚುಗಡೆಗೊಳಿಸಲಾಗಿದ್ದು, 9 ಗಂಟೆಯ ವೇಳೆ ಹಾರಾಟವನ್ನು ಪುನರಾಂಭಿಸಲಾಗಿತ್ತು.

   ಕಳೆದ ಜೂನ್‌ನಲ್ಲಿಯೂ ಡ್ರೋನ್ ವಿಮಾನವೊಂದರ ಹಾರಾಟದ ಹಿನ್ನೆಲೆಯಲ್ಲಿ ದುಬೈ ವಿಮಾನನಿಲ್ದಾಣವನ್ನು ಸುಮಾರು 55 ನಿಮಿಷಗಳ ಕಾಲ ಮುಚ್ಚುಗಡೆಗೊಳಿಸಲಾಗಿತ್ತು. ಯುಎಇನ ನಾಗರಿಕ ವಾಯುಯಾನ ಪ್ರಾಧಿಕಾರವು ದುಬೈ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸೇರದಂತೆ ನಾಲ್ಕು ವಿಮಾನನಿಲ್ದಾಣಗಳನ್ನು ಡ್ರೋನ್ ಹಾರಾಟ ನಿಷೇಧಿಸಿತ್ತು. ಅಲ್ ಮಖ್ತೂಮ್ ವಿಮಾನನಿಲ್ದಾಣ, ಅಲ್ ಮಿನ್‌ಹಾದ್ ವಾಯುನೆಲೆ ಹಾಗೂ ಪಾಮ್ ಜುಮೈರಾ ವಿಮಾನನಿಲ್ದಾಣ ಇವು ಯುಎಇನ ಇತರ ಮೂರು ಡ್ರೋನ್ ಹಾರಾಟ ನಿಷೇಧಿತ ವಲಯಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X