Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರಿನಲ್ಲಿ ರಸ್ತೆ ಬದಿಯ ವಾರದ...

ಪುತ್ತೂರಿನಲ್ಲಿ ರಸ್ತೆ ಬದಿಯ ವಾರದ ಸಂತೆಗೆ ಸಂಪೂರ್ಣ ತಡೆ

ಬಿಗಿ ಪೊಲೀಸ್ ಬಂದೋಬಸ್ತು, ಸಂತೆ ವ್ಯಾಪಾರಸ್ಥರ ತೆರವು

ವಾರ್ತಾಭಾರತಿವಾರ್ತಾಭಾರತಿ31 Oct 2016 5:17 PM IST
share
ಪುತ್ತೂರಿನಲ್ಲಿ ರಸ್ತೆ ಬದಿಯ ವಾರದ ಸಂತೆಗೆ ಸಂಪೂರ್ಣ ತಡೆ

ಪುತ್ತೂರು,ಅ.31 : ಪುತ್ತೂರಿನ ಕಿಲ್ಲೆ ಮೈದಾನ ಮತ್ತು ಅದರ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ಸೋಮವಾರ ನಡೆಯುತ್ತಿದ್ದ ವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಿದ ಬಳಿಕವೂ ನಗರದ ರಸ್ತೆಗಳ ಬದಿಗಳಲ್ಲಿ ಕೆಲವು ಸಣ್ಣ ವ್ಯಾಪಾರಿಗಳು ವ್ಯಾಪಾರ ಮುಂದುವರಿಸಿದ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗಿನಿಂದಲೇ ನಗರದ ವಿವಿದೆಡೆಗಳಲ್ಲಿ ಪೊಲೀಸರನ್ನು ನಿಯುಕ್ತಿಗೊಳಿಸಿ ರಸ್ತೆ ಬದಿಗಳಲ್ಲಿ ನಡೆಯುವ ಸಂತೆಯನ್ನು ತಡೆಯುವ ಕೆಲಸ ನಡೆಯಿತು. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಪೊಲೀಸ್ ಬಿಗುಭದ್ರತೆ ಏರ್ಪಡಿಸಲಾಗಿತ್ತು. ಇದರಿಂದಾಗಿ ಪುತ್ತೂರು ನಗರದಲ್ಲಿ ಸಂತೆ ವ್ಯಾಪಾರ ಸಂಪೂರ್ಣ ಬಂದ್ ಆಯಿತು.

 ಪುತ್ತೂರಿನ ಕಿಲ್ಲೆ ಮೈದಾನ ಮತ್ತು ಅದರ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ಸೋಮವಾರ ನಡೆಯುತ್ತಿದ್ದ ವಾರದ ಸಂತೆಯನ್ನು ಉಪವಿಭಾಗಾಧಿಕಾರಿಗಳ ಆದೇಶದಂತೆ ಒಂದೂವರೆ ತಿಂಗಳ ಹಿಂದೆ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿತ್ತು. ಆದರೂ ಕೆಲವೊಬ್ಬರು ವ್ಯಾಪಾರಿಗಳು ಎಪಿಎಂಸಿ ಪ್ರಾಂಗಣಕ್ಕೆ ಹೋಗದೆ ಈ ಹಿಂದಿನಂತೆಯೇ ನಗರದ ರಸ್ತೆ ಬದಿಗಳಲ್ಲಿ ವ್ಯಾಪಾರ ಮುಂದುವರಿಸಿದ್ದರು. ಎಪಿಎಂಸಿಯಲ್ಲಿ ವ್ಯಾಪಾರ ಆರಂಭಿಸಿದ್ದ ವ್ಯಾಪಾರಿಗಳು ಅಲ್ಲಿ ವ್ಯಾಪಾರವಿಲ್ಲದ ಕಾರಣ ಕಳೆದ ಸೋಮವಾರ ಸಂತೆ ವ್ಯಾಪಾರ ಸ್ಥಗಿತಗೊಳಿಸಿ ನಗರಸಭಾ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದರು. ನಗರದಲ್ಲಿಯೇ ತಮಗೆ ಸಂತೆ ವ್ಯಾಪಾರ ಮಾಡಲು ಅವಕಾಶ ಮಾಡಿ ಕೊಡಿ, ಇಲ್ಲದಿದ್ದರೆ ನಾವು ಮುಂದಿನ ಸೋಮವಾರ ಕಿಲ್ಲೆ ಮೈದಾನದಲ್ಲಿಯೇ ಸಂತೆ ವ್ಯಾಪಾರ ಆರಂಭಿಸುತ್ತೇವೆ ಎಂದು ಎಚ್ಚರಿಸಿದ್ದರು.

 ಈ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗಿನಿಂದಲೇ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಪೊಲೀಸ್ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ವಿವಿದೆಡೆಗಳಲ್ಲಿ ಪೊಲೀಸರನ್ನು ನಿಯುಕ್ತಿಗೊಳಿಸಿ, ರಸ್ತೆ ಬದಿಗಳಲ್ಲಿ ನಡೆಯುತ್ತಿದ್ದ ಸಂತೆ ವ್ಯಾಪಾರವನ್ನು ತಡೆಯುವ ಕೆಲಸ ಪೊಲೀಸ್ ಇಲಾಖೆಯಿಂದ ನಡೆಯಿತು. ಮುಂಜಾನೆ ವೇಳೆ ನಗರಕ್ಕೆ ಆಗಮಿಸಿದ್ದ ಕೆಲವು ವ್ಯಾಪಾರಿಗಳು ರಸ್ತೆ ಬದಿಗಳಲ್ಲಿ ವ್ಯಾಪಾರ ಆರಂಭಿಸುವ ಮುನ್ನವೇ ಅವರನ್ನು ಅಲ್ಲಿಂದ ತೆರವುಗೊಳಿಸಲಾಯಿತು. ದೀಪಾವಳಿ ಪ್ರಯುಕ್ತ ರಸ್ತೆ ಬದಿಗಳಲ್ಲಿ ಹೂವಿನ ವ್ಯಾಪಾರ ಮಾಡಲು ಬಂದಿದ್ದ ಹೋವಿನ ವ್ಯಾಪಾರಿಗಳಿಗೂ ಅವಕಾಶ ನೀಡದೆ ತೆರವುಗೊಳಿಸುವ ಕಾರ್ಯ ಪುತ್ತೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಪೊಲೀಸರಿಂದ ನಡೆಯಿತು.

ಎಪಿಎಂಸಿಯಲ್ಲೂ ವ್ಯಾಪಾರ ಕಡಿಮೆ

ನಗರದ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲು ಪೊಲೀಸರು ಅವಕಾಶ ನೀಡದ ಕಾರಣ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳು ಕೂಡ ಎಪಿಎಂಸಿ ಪ್ರಾಂಗಣಕ್ಕೇ ಹೋಗಬೇಕಾಯಿತು. ಇದರಿಂದಾಗಿ ಇಂದು ಎಪಿಎಂಸಿ ಪ್ರಾಂಗಣದಲ್ಲಿ ವ್ಯಾಪಾರಿಗಳ ಸಂಖ್ಯೆ ವೃದ್ಧಿಸುವಂತಾಯಿತು.ಆದರೆ ಸಂತೆ ವ್ಯಾಪಾರ ವೃದ್ಧಿಯಾಗಿಲ್ಲ. ಗ್ರಾಹಕರು ಇಲ್ಲಿಗೆ ಬರುತ್ತಿಲ್ಲ. ನಮಗೆ ವ್ಯಾಪಾರವಿಲ್ಲ . ನಗರಸಭೆಯವರು ಪುತ್ತೂರು ನಗರದಲ್ಲಿ ಸಂತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಸಂತೆ ವ್ಯಾಪಾರವನ್ನೇ ನಿಲ್ಲಿಸಬೇಕಾಗಿ ಬಂದಿದೆ ಎಂದು ಎಪಿಎಂಸಿಯಲ್ಲಿ ಸಂತೆ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳು ಅಳವತ್ತುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X