Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡ್ಡೆಮನೆ ಅಪ್ಪಯ್ಯಗೌಡರ ಸ್ಮಾರಕ...

ಗುಡ್ಡೆಮನೆ ಅಪ್ಪಯ್ಯಗೌಡರ ಸ್ಮಾರಕ ನಿರ್ಮಾಣಕ್ಕೆ ಸಹಕಾರ: ಸಚಿವ ಎಂ.ಕೃಷ್ಣಪ್ಪಭರವಸೆ

ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ31 Oct 2016 9:41 PM IST
share
ಗುಡ್ಡೆಮನೆ ಅಪ್ಪಯ್ಯಗೌಡರ ಸ್ಮಾರಕ ನಿರ್ಮಾಣಕ್ಕೆ ಸಹಕಾರ: ಸಚಿವ ಎಂ.ಕೃಷ್ಣಪ್ಪಭರವಸೆ

ಮಡಿಕೇರಿ,ಅ.31 : ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಹುತಾತ್ಮ ಗುಡ್ಡೆಮನೆ ಅಪ್ಪಯ್ಯಗೌಡರಂತಹ ಸ್ವಾತಂತ್ರ್ಯ ಸೇನಾನಿಯನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಗುಡ್ಡೆಮನೆ ಅಪ್ಪಯ್ಯಗೌಡರ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ವಸತಿ ಸಚಿವರಾದ ಎಂ.ಕೃಷ್ಣಪ್ಪ ಭರವಸೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣ ದಿನಾಚರಣೆ ಅಂಗವಾಗಿ ನಗರದ ಕೋಟೆ ಆವರಣದಲ್ಲಿ ಸೋಮವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಸಿಪಾಯಿ ದಂಗೆಗೂ ಮೊದಲೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಸಮರ ಸಾರಿದ ಗುಡ್ಡೆಮನೆ ಅಪ್ಪಯ್ಯಗೌಡರನ್ನು ಬ್ರಿಟಿಷರು ಗಲ್ಲಿಗೇರಿಸಿದರು. ಗುಡ್ಡೆಮನೆ ಅಪ್ಪಯ್ಯಗೌಡರ ಸ್ವಾತಂತ್ರ್ಯ ಹೋರಾಟ ಸ್ಮರಣೀಯ, ಇಂತಹ ಮಹಾನ್ ಸ್ವಾತಂತ್ರ್ಯ ಹೋರಟಗಾರರನ್ನು ಸದಾ ನೆನಪಿಸುವ ಅಗತ್ಯವಿದ್ದು, ಸ್ಮಾರಕ ನಿರ್ಮಾಣವಾಗಬೇಕೆಂದು ಅಭಿಪ್ರಾಯಪಟ್ಟರು.

 ದೇಶಕ್ಕಾಗಿ, ನಾಡಿಗಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರು ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಸದಾ ಸ್ಮರಿಸಬೇಕಿದೆ ಎಂದರು. ಶಾಸಕರಾದ ಕೆ.ಜಿ.ಬೋಪ್ಪಯ್ಯ ಅವರು ಮಾತನಾಡಿ, ಬ್ರಿಟಿಷರಿಂದ ನಾಡಿಗೆ ಸಂಕಷ್ಟ ಬಂದಾಗ ಗುಡ್ಡೆಮನೆ ಅಪ್ಪಯ್ಯಗೌಡರು ಕೆಚ್ಚೆದೆಯಿಂದ ಹೋರಾಡಿದರು. ಇಂತಹ ಮಹಾನ್ ಹೋರಾಟಗಾರರ ತ್ಯಾಗ ಬಲಿದಾನಗಳು ಶ್ಲಾಘನೀಯವೆಂದರು. ಅಪ್ಪಯ್ಯಗೌಡರ ದೇಶಪ್ರೇಮದ ಬಗೆಗಿನ ಪಾಠ ಇವತ್ತಿನ ಯುವ ಜನತೆಗೆ ಸಿಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕೊಡಗು, ಸುಳ್ಯ, ಪುತ್ತೂರು ಬೆಳ್ತಂಗಡಿ ಮತ್ತಿತರ ಭಾಗಗಳಲ್ಲಿ ಗುಡ್ಡೆಮನೆ ಅಪ್ಪಯ್ಯಗೌಡರು ತಮ್ಮ ಪ್ರಾಂತ್ಯಗಳ ಜನರ ರಕ್ಷಣೆಗಾಗಿ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಸಿಡಿದೆದ್ದು ಹೋರಾಟ ಮಾಡಿದರು ಎಂದು ಕೆ.ಜಿ.ಬೋಪಯ್ಯ ಸ್ಮರಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿದರು. ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿದರು, ರೇವತಿ ರಮೇಶ್ ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು, ಕುಡೆಕಲ್ ಸಂತೋಷ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X