Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ ರೈತರ ರಕ್ಷಣೆಗೆ ಸರಕಾರ ಮುಂದಾಗಲಿ

ದಲಿತ ರೈತರ ರಕ್ಷಣೆಗೆ ಸರಕಾರ ಮುಂದಾಗಲಿ

ಮುನಿಸ್ವಾಮಿ ನೇತೃತ್ವದಲ್ಲಿದಿನ್ನೂರು ಗ್ರಾಮಸ್ಥರ ಧರಣಿ

ವಾರ್ತಾಭಾರತಿವಾರ್ತಾಭಾರತಿ31 Oct 2016 11:00 PM IST
share
ದಲಿತ ರೈತರ ರಕ್ಷಣೆಗೆ ಸರಕಾರ ಮುಂದಾಗಲಿ

ಬೆಂಗಳೂರು, ಅ.31: ಅಹಿಂದ ಪರ ಎಂದು ಬಿಂಬಿಸಿಕೊಳ್ಳುವ ರಾಜ್ಯ ಸರಕಾರವು, ಕಾಡುಗುಡಿ ಪ್ಲಾಂಟೇಷನ್‌ನಲ್ಲಿ ಉಳುಮೆ ಮಾಡುತ್ತಿರುವ ದಲಿತ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಕಾಡುಗುಡಿ ಬಳಿಯಿರುವ ದಿನ್ನೂರು ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಮಾರು 70 ವರ್ಷದಿಂದ ದಲಿತ ರೈತರು ಕಾಡುಗುಡಿ ಪ್ಲಾಂಟೇಷನ್‌ನಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದರು.ಂಪ್ಯೂಟರ್ ಆಧಾರಿತ ಪಹಣಿ ಪತ್ರಗಳನ್ನು ಬಿಟ್ಟು, ಉಳಿದ ಎಲ್ಲ ರೀತಿಯ ದಾಖಲೆಗಳು ಈ ರೈತರ ಬಳಿಯಿದೆ. ಈ ಹಿಂದೆ ಕೆಐಎಡಿಬಿಯವರು ಕಂಟೇನರ್ ಹಾಗೂ ಗೂಡ್ಸ್ ಶೆಡ್ ಘಟಕಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡಾಗ ಇವರಿಗೆ 30-60 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರವನ್ನು ನೀಡಿರುವ ದಾಖಲೆಗಳು ಇವೆ ಎಂದು ಅವರು ಹೇಳಿದರು.
ಬಹುರಾಷ್ಟ್ರೀಯ ಕಂಪೆನಿಗಳು ಹಾಗೂ ಖಾಸಗಿಯವರಿಗೆ ಈ ಭೂಮಿಯನ್ನು ನೀಡಲು ರಾಜ್ಯ ಸರಕಾರವು, ಜಿಲ್ಲಾಧಿಕಾರಿ ಶಂಕರ್ ಮೂಲಕ ಇಲ್ಲಿನ ಕೋಟ್ಯಂತರ ರೂ.ಬೆಲೆ ಬಾಳುವ ಜಮೀನಿಗೆ ತಂತಿ ಬೇಲಿ ಹಾಕುತ್ತಿದ್ದಾರೆ. ಜಿಲ್ಲಾಡಳಿತವು ತೆರವು ಕಾರ್ಯಾಚರಣೆ ವೇಳೆ ಅತ್ಯಂತ ಅಮಾನವೀಯವಾಗಿ ವರ್ತಿಸಿದೆ ಎಂದು ಮುನಿಸ್ವಾಮಿ ಕಿಡಿಗಾರಿದರು.

ದಲಿತ ರೈತರನ್ನು ಭೂಗಳ್ಳರಂತೆ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಇಲ್ಲಿನ ರೈತರು ಭೂಗಳ್ಳರಲ್ಲ. ಯಾವುದೆ ನಕಲಿ ದಾಖಲೆಗಳನ್ನು ಸೃಷ್ಟಿಸಿಲ್ಲ. 1949-50ರಲ್ಲಿ ಅಂದಿನ ಜಿಲ್ಲಾಧಿಕಾರಿ ದಲಿತರಿಗೆ ಭೂಮಿ ಹಂಚಿಕೆ ಮಾಡಿದ ಪರಿಣಾಮ ಈ ಗ್ರಾಮ ಅಸ್ತಿತ್ವಕ್ಕೆ ಬಂದಿದೆ ಎಂದು ಅವರು ಹೇಳಿದರು.ಲ್ಲಿನ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಸರಕಾರ ಮುಂದಾದರೆ, ಗ್ರಾಮಸ್ಥರೊಂದಿಗೆ ಸೇರಿ ಜೈಲು ಭರೋ ಚಳವಳಿಯನ್ನು ಹಮ್ಮಿಕೊಳ್ಳಲಾಗುವುದು. ನಮ್ಮ ಭೂಮಿಯನ್ನು ವಶಪಡಿಸಿಕೊಂಡರೆ, ನಾವು ವಿಷ ಸೇವಿಸಿ ಸಾಯಲು ಸಿದ್ಧ ಎಂಬ ಭಾವನೆ ರೈತರಲ್ಲಿ ಮೂಡಿದೆ ಎಂದು ಮುನಿಸ್ವಾಮಿ ತಿಳಿಸಿದರು.ಾಡುಗುಡಿ ಪ್ಲಾಂಟೇಷನ್ ಹೋರಾಟ ಸಮಿತಿಯ ಸಂಚಾಲಕ ಮುನಿರಾಜು ಮಾತನಾಡಿ, ಕಳೆದ ಮಾ.11ರಂದು ಹಿಂದಿನ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಮ್ಮಾಂದಿಗೆ ಚರ್ಚೆ ಮಾಡಿ, ದಲಿತರು ವಾಸ ಮಾಡುತ್ತಿರುವ ಹಾಗೂ ಉಳುಮೆ ಮಾಡುತ್ತಿರುವ ಭೂಮಿಯನ್ನು ಸಕ್ರಮಗೊಳಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವ ಆಶ್ವಾಸನೆ ನೀಡಿದ್ದರು ಎಂದರು.ದರೆ, ಈಗ ನಮ್ಮ ಭೂಮಿಗೆ ತಂತಿ ಬೇಲಿ ಹಾಕುವ ಕೆಲಸ ನಡೆಯುತ್ತಿದೆ. ನಮ್ಮನ್ನು ಭೂಗಳ್ಳರು ಎಂದು ಬಿಂಬಿಸುತ್ತಿರುವುದು ಖಂಡನೀಯ. ನಮ್ಮ ಪ್ರಾಣ ಹೋದರು ಚಿಂತೆಯಿಲ್ಲ. ಭೂಮಿ ಮಾತ್ರ ಬಿಡುವುದಿಲ್ಲ. ಸರಕಾರ ಹಾಗೂ ಆಡಳಿತ ಯಂತ್ರದ ಮೇಲೆ ನಮಗೆ ನಂಬಿಕೆಯಿಲ್ಲದಂತಾಗಿದೆ ಎಂದು ಅವರು ಹೇಳಿದರು.ಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಗೌರಮ್ಮ, ಸಿಪಿಎಂ ಮುಖಂಡರಾದ ಗೋಪಾಲಗೌಡ, ಚನ್ನಸಂದ್ರ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X