Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ 2019ರ ವಿಶ್ವಕಪ್ ತನಕ...

ಧೋನಿ 2019ರ ವಿಶ್ವಕಪ್ ತನಕ ಆಡುತ್ತಾರೆಯೇ?

ವಾರ್ತಾಭಾರತಿವಾರ್ತಾಭಾರತಿ31 Oct 2016 11:49 PM IST
share
ಧೋನಿ 2019ರ ವಿಶ್ವಕಪ್ ತನಕ ಆಡುತ್ತಾರೆಯೇ?

 ಹೊಸದಿಲ್ಲಿ, ಅ.31: ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿ ಗೆಲ್ಲಲು ತಂಡವನ್ನು ಮುನ್ನಡೆಸಿರುವ ಭಾರತದ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಗ್ಲೆಂಡ್‌ನಲ್ಲಿ 2019ರಲ್ಲಿ ನಡೆಯಲಿರುವ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸುವತ್ತ ಈಗಾಗಲೇ ತಯಾರಿ ನಡೆಸುತ್ತಿದ್ದಾರೆ.

2017ರ ಚಾಂಪಿಯನ್ಸ್ ಟ್ರೋಫಿಯ ಬಳಿಕ ಏಕದಿನ ವೃತ್ತಿಜೀವನದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ಮುಂದಿನ ವರ್ಷದ ಜೂನ್‌ಗೆ ಇಂಗ್ಲೆಂಡ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಿದೆ. ಜಾರ್ಖಂಡ್ ಕ್ರಿಕೆಟಿಗ ಧೋನಿ ತಕ್ಷಣವೇ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. 2016ರ ಅಂತ್ಯಕ್ಕೆ ತನ್ನ ಫಿಟ್‌ನೆಸ್ ಹಾಗೂ ಫಾರ್ಮ್‌ನ್ನು ಪರಿಶೀಲಿಸುವ ಬಯಕೆಯಲ್ಲಿದ್ದಾರೆ. ನ್ಯೂಝಿಲೆಂಡ್ ವಿರುದ್ಧ ಸರಣಿ ಜಯಿಸಿರುವ ಧೋನಿ ಇದೀಗ 2017ರ ಚಾಂಪಿಯನ್ಸ್ ಟ್ರೋಫಿಯತ್ತ ಗಮನ ಹರಿಸಿದ್ದಾರೆ.

2014ರಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದ ಧೋನಿ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಧೋನಿ 2019ರ ವಿಶ್ವಕಪ್ ತನಕ ಆಡಲಿದ್ದಾರೆ ಎಂದು ಸಹ ಆಟಗಾರ, ವೇಗದ ಬೌಲರ್ ಆಶೀಷ್ ನೆಹ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘‘2019ರ ವಿಶ್ವಕಪ್ ನಡೆಯುವ ವೇಳೆಗೆ ಧೋನಿಗೆ 38 ವರ್ಷವಾಗಿರುತ್ತದೆ. ಇಂದಿನ ದಿನಗಳಲ್ಲಿ ವಯಸ್ಸು ಅಷ್ಟೇನೂ ಮುಖ್ಯವಲ್ಲ. ಇದಕ್ಕೆ ಪಾಕಿಸ್ತಾನಿ ಆಟಗಾರರಾದ ಯೂನಿಸ್ ಖಾನ್ ಹಾಗೂ ಮಿಸ್ಬಾವುಲ್ ಹಕ್ ಅವರೇ ಪ್ರತ್ಯಕ್ಷ ಸಾಕ್ಷಿ. ಈ ಇಬ್ಬರು ಆಟಗಾರರು 40ರ ಪ್ರಾಯದಲ್ಲೂ ಕ್ರಿಕೆಟ್ ಆಡುತ್ತಿದ್ದಾರೆ. ನನ್ನ ಪ್ರಕಾರ ಧೋನಿ 2019ರ ವಿಶ್ವಕಪ್ ತನಕ ಆಡಲು ಸಂಪೂರ್ಣ ಫಿಟ್ ಆಗಿದ್ದಾರೆ’’ ಎಂದು ನೆಹ್ರಾ ಅಭಿಪ್ರಾಯಪಟ್ಟರು.

‘‘ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನನಗೆ ಯಾವುದೇ ಕಾರಣ ಸಿಗುತ್ತಿಲ್ಲ. ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಆಡಿರುವ ಧೋನಿ ಇನ್ನೂ ಎರಡು ತಿಂಗಳು ಅಧಿಕ ಸಮಯ ವಿಶ್ರಾಂತಿ ಪಡೆಯಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ತಂಡಕ್ಕೆ ವಾಪಸಾಗಲಿದ್ದಾರೆ. ಕಿವೀಸ್ ವಿರುದ್ಧ ಸರಣಿಯಂತೆಯೇ ಇಂಗ್ಲೆಂಡ್ ವಿರುದ್ಧ ಸರಣಿಯ ವೇಳೆಯೂ ಧೋನಿ ಫಿಟ್ ಇರುತ್ತಾರೆ’’ ಎಂದು ನೆಹ್ರಾ ಹೇಳಿದ್ದಾರೆ.

 ಧೋನಿ ಮುಂಬರುವ ಏಕದಿನ ವಿಶ್ವಕಪ್ ತನಕ ಆಡುತ್ತಾರೆ ಎಂದು ಹೇಳಿರುವ ಮಾಜಿ ಆಯ್ಕೆಗಾರ ವಿಕ್ರಂ ರಾಥೋರ್,‘‘ ಧೋನಿ ಬಯಸಿದರೆ ಖಂಡಿತವಾಗಿಯೂ ವಿಶ್ವಕಪ್‌ನಲ್ಲಿ ಆಡುತ್ತಾರೆ. ಅವರ ಫಿಟ್‌ನೆಸ್ ಬಗ್ಗೆ ಯಾವುದೇ ಸಮಸ್ಯೆ ಕಾಣುತ್ತಿಲ್ಲ. ನೆಹ್ರಾ 38ರ ಪ್ರಾಯದಲ್ಲಿ ತಂಡಕ್ಕೆ ವಾಪಸಾಗಿದ್ದರು. ಧೋನಿ ಕೂಡ ಹಾಗೇ ಮಾಡಬಹುದು. ನೆನಪಿಡಿ, ವಯಸ್ಸು ಕೇವಲ ನಂಬರ್ ಅಷ್ಟೇ’’ ಎಂದು ಹೇಳಿದರು.

‘‘ಧೋನಿ ಅವರು ಕಪಿಲ್‌ದೇವ್, ಸುನೀಲ್ ಗವಾಸ್ಕರ್ ಹಾಗೂ ಸಚಿನ್ ತೆಂಡುಲ್ಕರ್ ಅವರಂತಹ ಶ್ರೇಷ್ಠರ ಸಾಲಿಗೆ ನಿಲ್ಲಬಲ್ಲ ಆಟಗಾರ. ಅವರೊಬ್ಬ ಪ್ರಮುಖ ಆಟಗಾರ. ಅವರು 2019ರ ವಿಶ್ವಕಪ್ ತನಕ ಆಡಬಲ್ಲರು. ಅವರಿಗೆ ತಂಡವನ್ನು ಗೆಲುವಿನತ್ತ ಮುನ್ನಡೆಸುವ ಸಾಮರ್ಥ್ಯವಿದೆ’’ ಎಂದು ಭಾರತ ತಂಡದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ಹೇಳಿದ್ದಾರೆ.

‘‘ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಫಿಟ್‌ನೆಸ್ ಅತ್ಯಂತ ಮುಖ್ಯ ವಿಷಯ. ಧೋನಿ ಆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. 2019ರ ವರೆಗೆ ಅವರು ಕ್ರಿಕೆಟ್ ಆಡುವ ಉಜ್ವಲ ಅವಕಾಶವಿದೆ. ಭಾರತಕ್ಕೆ ಧೋನಿಯ ಅಗತ್ಯವಿದೆ. ಧೋನಿ ಕೂಡ ತಂಡವನ್ನು ಕೈಬಿಡಲಾರರು ಎಂದು ವಿಶ್ವಾಸ ಎಲ್ಲರಿಗಿದೆ’’ ಎಂದು ಮಾಜಿ ವಿಕೆಟ್‌ಕೀಪರ್ ಕಿರಣ್ ಮೋರೆ ಹೇಳಿದ್ದಾರೆ.

         2011ರ ವಿಶ್ವಕಪ್ ಹೀರೊಗಳಾದ ಯುವರಾಜ್ ಸಿಂಗ್ ಹಾಗೂ ಗೌತಮ್ ಗಂಭೀರ್ ಅವರು 2019ರ ವಿಶ್ವಕಪ್ ಆಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧೋನಿ ಕೂಡ ಮುಂಬರುವ ವಿಶ್ವಕಪ್‌ನಲ್ಲಿ ಭಾಗವಹಿಸಿದರೆ ಅಚ್ಚರಿ ಎನಿಸದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X