Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೀರ್ಗಲ್ಲು ಸರೋವರ ಖಾಲಿ ಮಾಡಿದ ನೇಪಾಳ

ನೀರ್ಗಲ್ಲು ಸರೋವರ ಖಾಲಿ ಮಾಡಿದ ನೇಪಾಳ

ಸಂಭಾವ್ಯ ಭಾರೀ ಜಲಪ್ರಳಯ ನಿವಾರಣೆ

ವಾರ್ತಾಭಾರತಿವಾರ್ತಾಭಾರತಿ31 Oct 2016 11:51 PM IST
share
ನೀರ್ಗಲ್ಲು ಸರೋವರ ಖಾಲಿ ಮಾಡಿದ ನೇಪಾಳ

ಕಠ್ಮಂಡು, ಅ. 31: ಸಾವಿರಾರು ಜನರ ಪ್ರಾಣಕ್ಕೆ ಬೆದರಿಕೆಯೊಡ್ಡಿದ್ದ ಸಂಭಾವ್ಯ ಭೀಕರ ಪ್ರವಾಹಕ್ಕೆ ಕಾರಣವಾಗಬಹುದಾಗಿದ್ದ ವೌಂಟ್ ಎವರೆಸ್ಟ್ ಸಮೀಪದ ನೀರ್ಗಲ್ಲು ಸರೋವರವನ್ನು ನೇಪಾಳ ಆಂಶಿಕವಾಗಿ ಬರಿದುಮಾಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
ಹವಾಮಾನ ಬದಲಾವಣೆಯಿಂದಾಗಿ ಹಿಮಾಲಯದ ನೀರ್ಗಲ್ಲುಗಳು ಅಪಾಯಕಾರಿ ವೇಗದಲ್ಲಿ ಕರಗುತ್ತಿದ್ದು ಬೃಹತ್ ನೀರ್ಗಲ್ಲು ಸರೋವರಗಳನ್ನು ಸೃಷ್ಟಿಸುತ್ತಿವೆ ಹಾಗೂ ಈ ಸರೋವರಗಳು ಕಟ್ಟೆಯೊಡೆದು ಪರ್ವತದ ತಳದಲ್ಲಿ ವಾಸಿಸುವ ಜನ ಸಮುದಾಯಗಳನ್ನು ನಾಶಪಡಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.
ಜಗತ್ತಿನ ಅತ್ಯಂತ ಎತ್ತರದ ಶಿಖರ ವೌಂಟ್ ಎವರೆಸ್ಟ್‌ನ ದಕ್ಷಿಣಕ್ಕೆ ಕೇವಲ 10 ಕಿಲೋಮೀಟರ್ ಅಂತರದಲ್ಲಿ 5,010 ಮೀಟರ್ ಎತ್ತರದಲ್ಲಿ ನೆಲೆಸಿರುವ ‘ಇಮ್ಜ ಟಶೊ’ ನೇಪಾಳದಲ್ಲಿ ಅತ್ಯಂತ ವೇಗವಾಗಿ ವೃದ್ಧಿಸುತ್ತಿರುವ ನೀರ್ಗಲ್ಲು ಸರೋವರವಾಗಿದೆ.
ಹಿಮಾಲಯನ್ ದೇಶದಲ್ಲಿ ಕಳೆದ ವರ್ಷ ವಿನಾಶಕಾರಿ ಭೂಕಂಪ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ನೀರ್ಗಲ್ಲು ಸರೋವರಗಳಿಂದಾಗಿ ದಿಢೀರ್ ಪ್ರವಾಹ ತಲೆದೋರುವ ಅಪಾಯಗಳು ಹೆಚ್ಚಾಗಿವೆ.
‘‘ನೀರ್ಗಲ್ಲು ಸರೋವರ ಒಡ್ಡಿರುವ ಬೆದರಿಕೆಯ ಹಿನ್ನೆಲೆಯಲ್ಲಿ ಅದನ್ನು ಬರಿದುಮಾಡುವುದು ಸರಕಾರದ ಆದ್ಯತೆಯಾಗಿತ್ತು. ಈ ಹಂತದಲ್ಲಿ ಅಪಾಯವೊಂದನ್ನು ನಾವು ಯಶಸ್ವಿಯಾಗಿ ನಿವಾರಿಸಿದ್ದೇವೆ’’ ಎಂದು ಪ್ರವಾಹ ಮತ್ತು ನೀರ್ಗಲ್ಲು ಸರೋವರ ಪ್ರವಾಹ ಅಪಾಯ ನಿವಾರಣಾ ಯೋಜನೆಯ ಯೋಜನಾ ನಿರ್ವಾಹಕ ತಾಪ್ ಬಹಾದುರ್ ಖತ್ರಿ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.
ಸುಮಾರು 150 ಮೀಟರ್ ಆಳದ ಸರೋವರದಿಂದ ಆರು ತಿಂಗಳ ಸತತ ಪ್ರಯತ್ನದ ಬಳಿಕ 50 ಲಕ್ಷ ಕ್ಯೂಬಿಕ್ ಮೀಟರ್ ನೀರನ್ನು ಬರಿದುಗೊಳಿಸಲಾಗಿದ್ದು, ಸರೋವರ ನೀರಿನ ಮಟ್ಟ 3.5 ಮೀಟರ್‌ನಷ್ಟು ತಗ್ಗಿದೆ ಎಂದು ಖತ್ರಿ ನುಡಿದರು.
ಸರೋವರದ ನೀರು ಬಸಿಯಲು ನೇಪಾಳ ಸರಕಾರವು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ)ದ ಜೊತೆಗೆ ಕೆಲಸ ಮಾಡಿತ್ತು.
ನೇಪಾಳ ಸೇನೆಯ 40 ಸಿಬ್ಬಂದಿ ಹಾಗೂ 100ಕ್ಕೂ ಅಧಿಕ ಎತ್ತರದಲ್ಲಿ ಕೆಲಸ ಮಾಡುವ ಕೆಲಸಗಾರರು ಎಪ್ರಿಲ್‌ನಿಂದ ಈ ಯೋಜನೆಯಲ್ಲಿ ತೊಡಗಿಸಿ ಕೊಂಡಿದ್ದರು.

ಪ್ರತಿಕೂಲ ಪ್ರಕೃತಿ; 3 ಗಂಟೆ ಮಾತ್ರ ಕೆಲಸ 

ಸರೋವರದ ನೀರು ಕೆಳಗೆ ಹರಿಯಲು ಸಾಧ್ಯವಾಗುವಂತೆ 45 ಮೀಟರ್ ಉದ್ದದ ಸುರಂಗವನ್ನು ನಿರ್ಮಿಸಲಾಯಿತು. ನೀರಿನ ಹರಿವನ್ನು ನಿಯಂತ್ರಿಸಲು ನಾವು ಮೆಕಾನಿಕಲ್ ದ್ವಾರವೊಂದನ್ನೂ ನಿರ್ಮಿಸಿದೆವು ಎಂದು ಸೇನಾ ತಂಡದ ನಾಯಕತ್ವ ವಹಿಸಿದ ಲೆಫ್ಟಿನೆಂಟ್ ಕರ್ನಲ್ ಭರತ್ ಲಾಲ್ ಶ್ರೇಷ್ಠ ಹೇಳಿದರು.
‘‘ಗಾಳಿ, ಮಂಜು ಮತ್ತು ತೆಳ್ಳನೆ ವಿರಳ ವಾಯುವಿನಿಂದಾಗಿ ನಮಗೆ ದಿನಕ್ಕೆ ಎರಡು ಅಥವಾ ಮೂರು ಗಂಟೆಗಳ ಕಾಲ ಮಾತ್ರ ಕೆಲಸ ಮಾಡಲು ಸಾಧ್ಯವಾಗುತ್ತಿತ್ತು. ಅದು ಸವಾಲಿನ ಕೆಲಸವಾಗಿತ್ತು’’ ಎಂದು ಅವರು ಎಎಫ್‌ಪಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X