Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಸಿಕ್ ಹಿಂಸಾಚಾರಕ್ಕೆ ಜಾತಿ ಮೂಲ ಕಾರಣ

ನಾಸಿಕ್ ಹಿಂಸಾಚಾರಕ್ಕೆ ಜಾತಿ ಮೂಲ ಕಾರಣ

ಸತ್ಯಶೋಧನಾ ಸಮಿತಿ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ31 Oct 2016 11:56 PM IST
share

ನಾಸಿಕ್, ಅ.31: ಇತ್ತೀಚೆಗೆ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ನಡೆದಿರುವ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಗೆ ಸಾಮಾಜಿಕ ನ್ಯಾಯಕ್ಕಾಗಿನ ಜಂಟಿ ಕ್ರಿಯಾ ಸಮಿತಿಯ ಸತ್ಯಶೋಧನಾ ತಂಡ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಸಂತ್ರಸ್ತರು, ಸಾಕ್ಷಿಗಳ ಹೇಳಿಕೆ ಆಧರಿಸಿ ಒಂದು ವರದಿಯನ್ನು ಸಿದ್ಧಪಡಿಸಿದ್ದು, ಜಾತಿಯ ವಿಷಯ ಈ ಹಿಂಸಾಚಾರಕ್ಕೆ ಮೂಲ ಕಾರಣ ಎಂದು ಅಭಿಪ್ರಾಯಿಸಿದೆ. ನಾಸಿಕ್ ಜಿಲ್ಲೆಯ ತಲೆಗಾಂವ್ ಎಂಬಲ್ಲಿ ಮರಾಠ ಸಮುದಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ 16ರ ಹರೆಯದ ದಲಿತ ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು ಬಳಿಕ ಈ ಪ್ರಕರಣ ಜಿಲ್ಲೆಯಲ್ಲಿ ಸಾಕಷ್ಟು ಹಿಂಸಾಚಾರದ ಘಟನೆಗಳಿಗೆ ಹೇತುವಾಯಿತು. ಭೂಮಾಲಕರಾಗಿರುವ ಮರಾಠಾ ಸಮುದಾಯದವರು ಪರಿಶಿಷ್ಟ ಜಾತಿಯವರ ವಿರುದ್ಧ ವ್ಯಾಪಕ ದಾಳಿ ಮತ್ತು ಹಿಂಸಾಚಾರಕ್ಕೆ ಮುಂದಾದರು. ಜಾತಿಯನ್ನು ಕೇಂದ್ರೀಕರಿಸಿ ನಡೆದ ಹಿಂಸಾಚಾರವಿದು. ಪರಿಶಿಷ್ಟ ಜಾತಿಯವರು ವಾಸಿಸುವ ಕೊಳೆಗೇರಿಗಳನ್ನೇ ಗುರಿಯಾಗಿಸಿ ದಾಳಿಗಳನ್ನು ನಡೆಸಲಾಯಿತು. ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಯಿತು. ಸತ್ಯಶೋಧನಾ ಸಮಿತಿಯಲ್ಲಿ ಸಮಾಜದ ವಿವಿಧ ಸ್ತರದ ಸದಸ್ಯರಿದ್ದರು. ‘ಸಮತಾ ವಿದ್ಯಾರ್ಥಿ ಅಘಡಿ’ ಸಂಘಟನೆಯ ಸೃಷ್ಟಿ ಸಾಲ್ವೆ ಮತ್ತು ಸಾಗರ್ ಭಲೆರಾವ್, ಮುಂಬೈಯ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್‌ನ ವಿದ್ಯಾರ್ಥಿಗಳು, ಮುಂಬೈಯ ರಿಪಬ್ಲಿಕನ್ ಪ್ಯಾಂಥರ್ ಪಕ್ಷದ ದುರ್ಗೇಶ್ ಸೋಲಂಕಿ, ನಾಗೇಶ್ ದುರ್ವೆ, ಸುಧೀರ್ ಧವಳೆ, ರ್ಯಾಡಿಕಲ್ ಸ್ಟಡಿ ಸರ್ಕಲ್ ಹಾಗೂ ಇತರ ಕೆಲವು ಸಂಘಟನೆಗಳು, ಪತ್ರಕರ್ತರು ಈ ತಂಡದ ಜೊತೆಗಿದ್ದರು. ಈ ಸಮಿತಿ ಸಿದ್ಧಪಡಿಸಿದ 40 ಪುಟಗಳ ವರದಿಗೆ ‘ರಾಜ್ಯದ ಮುಂದಾಳತ್ವದಲ್ಲಿ ನಾಸಿಕ್‌ನಲ್ಲಿ ನಡೆದ ಜಾತೀಯ ಭಯೋತ್ಪಾದನೆ’ ಎಂದು ತಲೆಬರಹ ನೀಡಲಾಗಿದೆ. ಬಲಿಪಶುಗಳ ವಿವರ, ಬದುಕಿ ಉಳಿದವರು ಮತ್ತು ಸಮೀಪದ 10 ಜಿಲ್ಲೆಗಳ ನಿವಾಸಿಗಳು ಸಾಕ್ಷಿಗಳಾಗಿ ಹೇಳಿಕೆ ನೀಡಿರುವ 11 ಅಧ್ಯಾಯಗಳಿವೆ. ಪತ್ರಕರ್ತರು, ರಾಜಕಾರಣಿಗಳು, ಪೊಲೀಸರು ಸಾಕ್ಷಿ ಹೇಳಿದ್ದು ಜೊತೆಗೆ ಪರಿಸ್ಥಿತಿಯ ವಿಶ್ಲೇಷಣೆಯನ್ನೂ ಮಾಡಲಾಗಿದೆ. ಜಾತಿ ಆಧರಿಸಿ ಮತ್ತು ಬೌದ್ಧಧರ್ಮದ ಜೊತೆ ಗುರುತಿಸಿಕೊಂಡವರನ್ನು ಕೇಂದ್ರೀಕರಿಸಿ ಇಲ್ಲಿ ಆಕ್ರಮಣ ನಡೆಸಲಾಗಿದೆ ಎಂದು ವರದಿಯ ಒಟ್ಟಾರೆ ಸಾರಾಂಶದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X