Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಮ್ಎಚ್ 370 ಪತನ : ಹೊಸ ಮಾಹಿತಿ ಬಹಿರಂಗ

ಎಮ್ಎಚ್ 370 ಪತನ : ಹೊಸ ಮಾಹಿತಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ2 Nov 2016 1:47 PM IST
share
ಎಮ್ಎಚ್ 370 ಪತನ : ಹೊಸ ಮಾಹಿತಿ ಬಹಿರಂಗ

ಸಿಡ್ನಿ, ನ.2:  ಮಲೇಷ್ಯಾ ಏರ್ ಲೈನ್ಸ್ ನ ಎಂಎಚ್ 370 ಪತನದ ವಿಚಾರವಾಗಿ ನಡೆಸಲಾದ ಹೊಸ ಅಧ್ಯಯನದಲ್ಲಿ ಬಹಿರಂಗಗೊಂಡ ಮಾಹಿತಿಯಂತೆ ಕೊನೆ ಕ್ಷಣದಲ್ಲಿ ವಿಮಾನ ಸಾಗರದಲ್ಲಿ ಪತನಗೊಳ್ಳುವಾಗ ಅದನ್ನು ಯಾರೂ ನಿಯಂತ್ರಿಸುತ್ತಿರಲಿಲ್ಲವೆಂದು ತಿಳಿದು ಬಂದಿದೆ. ಬುಧವಾರ ತನಿಖಾಕಾರರು ಈ ಬಗ್ಗೆ ಮಾಹಿತಿ ಹೊರಗೆಡಹಿದ್ದು ವಿಮಾನದ ಅವಶೇಷಗಳಿಗೆ ಹುಡುಕುವ ಯತ್ನಗಳಲ್ಲಿ ಯಾವುದೇ ಪ್ರಗತಿ ಸಾಧಿಸದ ಕುರಿತು ಚರ್ಚಿಸಲು ಕರೆಯಲಾದ ಸಭೆಯಲ್ಲಿ ಈ ಬಗ್ಗೆ ತಿಳಿಸಲಾಗಿತ್ತು.

ಆಸ್ಟ್ರೇಲಿಯನ್ ಟ್ರಾನ್ಸ್ ಪೋರ್ಟ್ ಸೇಫ್ಟಿ ಬ್ಯುರೋ ಬಿಡುಗಡೆಗೊಳಿಸಿರುವ ತಾಂತ್ರಿಕ ವರದಿಯಂತೆ ವಿಮಾನದಲ್ಲಿದ್ದ ಇಂಧನ ಮುಗಿದ ನಂತರ ಅದು ತೀವ್ರ ವೇಗದಲ್ಲಿ ಭೂಮಿಯತ್ತ ಸಾಗಿ ಪಶ್ಚಿಮ ಆಸ್ಟ್ರೇಲಿಯಾದ ಸಮೀಪ ಹಿಂದೂ ಮಹಾಸಾಗರದಲ್ಲಿ ಪತನಗೊಂಡಿತೆಂದು ತಿಳಿಸಲಾಗಿದೆ.

ವಿಮಾನವನ್ನು ಕೊನೆ ಕ್ಷಣದವರೆಗೂ ಯಾರೋ ನಿಯಂತ್ರಿಸುತ್ತಿದ್ದರು ಎಂದು ಇತ್ತೀಚಿನವರೆಗೂ ಕೆಲವರು ವಾದಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾದ ವರದಿ ಮಹತ್ವ ಪಡೆದುಕೊಂಡಿದೆ. ವಿಮಾನವನ್ನು ಯಾರೋ ನಿಯಂತ್ರಿಸುತ್ತಿದ್ದರು ಎಂಬುದು ನಿಜವಾಗಿದ್ದಿದ್ದರೆ ಅದು ಇನ್ನಷ್ಟು ಪಾತಾಳಕ್ಕೆ ಪತನಗೊಂಡು ಈಗಾಗಲೇ ಕಠಿಣವಾಗಿರುವ ಅದರ ಅವಶೇಷ ಪತ್ತೆ ಕಾರ್ಯ ಮತ್ತಷ್ಟು ಕಠಿಣಗೊಳ್ಳುತ್ತಿತ್ತು. ತಾಂಝಾನಿಯಾದ ಕಡಲ ತೀರದಲ್ಲಿ ಪತ್ತೆಯಾದ ವಿಮಾನದ ವಿಂಗ್ ಫ್ಲ್ಯಾಪ್ ನೋಡಿದಾಗ ವಿಮಾನವನ್ನು ಕೊನೆ ಕ್ಷಣದಲ್ಲಿಯೂ ಪೈಲಟ್ ನಿಯಂತ್ರಿಸುತ್ತಿದ್ದುದೇ ಆದಲ್ಲಿ ಅದು ಪತ್ತೆಯಾದಾಗ ಇದ್ದ ಸ್ಥಿತಿಯಲ್ಲಿ ಇರುತ್ತಿರಲಿಲ್ಲವೆಂದು ಹೇಳಲಾಗಿದೆ.

ನಾಪತ್ತೆಯಾದ ವಿಮಾನ ಸಂಬಂಧಿತ ಎಲ್ಲಾ ಮಾಹಿತಿಗಳನ್ನೂ ಆಸ್ಟ್ರೇಲಿಯ ಮತ್ತು ಅಂತಾರಾಷ್ಟ್ರೀಯ ತಜ್ಞರು ಕ್ಯಾನ್‌ಬರ್ರಾದಲ್ಲಿ ನಡೆಯಲಿರುವ ಮೂರು ದಿನಗಳಗೋಷ್ಠಿಯಲ್ಲಿ ಪ್ರಸ್ತುತ ಪಡಿಸಿ ಚರ್ಚಿಸುತ್ತಾರೆ ಎಂದು ತಿಳಿದು ಬಂದಿದೆ.

ನಾಪತ್ತೆಯಾದ ವಿಮಾನದ್ದೆಂದು ಹೇಳಲಾದ 20 ಕ್ಕೂ ಹೆಚ್ಚು ಅವಶೇಷಗಳು ಹಿಂದೂ ಮಹಾಸಾಗರದ ಹಲವು ತೀರಗಳಲ್ಲಿ ಪತ್ತೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X