Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಏಕರೂಪ ನಾಗರಿಕ ಸಂಹಿತೆ...

ಮೂಡುಬಿದಿರೆ: ಏಕರೂಪ ನಾಗರಿಕ ಸಂಹಿತೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Nov 2016 3:34 PM IST
share
ಮೂಡುಬಿದಿರೆ: ಏಕರೂಪ ನಾಗರಿಕ ಸಂಹಿತೆ ಖಂಡಿಸಿ ಪ್ರತಿಭಟನೆ

ಮೂಡುಬಿದಿರೆ, ನ.2: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಸಮಾನ ನಾಗರಿಕ ಸಂಹಿತೆ ಮತ್ತು ತ್ರಿವಳಿ ತಲಾಖ್ ರದ್ದು ಪಡಿಸುವ ನೀತಿಯನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಮೂಡುಬಿದಿರೆಯ ನಾಡಕಚೇರಿಯ ಎದುರು ಪ್ರತಿಭಟನೆ ನಡೆಯಿತು.

ಮೂಡುಬಿದಿರೆ ಮುಲ್ಕಿ ವಿಧಾನಸಬಾ ಕ್ಷೇತ್ರದ ಎಸ್‌ಡಿಪಿಐ ಅಧ್ಯಕ್ಷ ಎ.ಕೆ. ಅಶ್ರಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ತ್ರಿವಳಿ ತಲಾಕ್ ಎಂಬುದು ಮುಸ್ಲಿಮರ ಆಂತರಿಕ ವಿಷಯವಾಗಿದೆ. ಅದೊಂದು ಧಾರ್ಮಿಕ ಆಚಾರ. ಅದನ್ನು ರದ್ದುಪಡಿಸುವಲ್ಲಿ ಕೇಂದ್ರ ಸರಕಾರ ಅತೀವ ಉತ್ಸಾಹ ತೋರಿಸುತ್ತಿರುವುದು ಹಾಸ್ಯಸ್ಪದವಾಗಿದೆ. ಮೋದಿ ಸರಕಾರ ಮುಸ್ಲಿಮರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿರುವ ಕಾನೂನನ್ನು ಜಾರಿಗೆ ತರುತ್ತಿದ್ದು, ಇದು ಸಂವಿಧಾನದ ಆಶಯಕ್ಕೆ ವಿರುದ್ಧವಾದುದಾಗಿದೆ. ತಲಾಖ್ ರದ್ದು ಹಾಗೂ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಲ್ಲಿ ಕೇಂದ್ರ ಸರಕಾರವು ಅದರ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.

ಮುಸ್ಲಿಂ ಮಹಿಳೆಯರ ಕಣ್ಣೀರು ಒರೆಸುವ ನಾಟಕವಾಡುತ್ತಿರುವ ಮೋದಿಯವರು ಮೊದಲಾಗಿ ಅಖ್ಲಾಕ್ ಕುಟುಂಬದ ಕಣ್ಣೀರು ಒರೆಸುವ ಪ್ರಯತ್ನ ಮಾಡಲಿ. ಕೇಂದ್ರ ಸರಕಾರ ಮುಸ್ಲಿಂ ವೈಯುಕ್ತಿಕ ಕಾನೂನಿಗೆ ತಿದ್ದುಪಡಿ ತರುವ ಮೂಲಕ ದೇಶದಾದ್ಯಂತ ಇರುವ ಮುಸ್ಲಿಂ ಸಮುದಾಯದ ಸಂವಿಧಾನದತ್ತ ಹಕ್ಕನ್ನು ಕಸಿಯುವ ಹುನ್ನಾರವನ್ನೆಸಗುತ್ತಿದೆ. ಕಾನೂನು ರಚನೆಯ ಈ ಆಯೋಗದಲ್ಲಿರುವ ಓರ್ವ ಸದಸ್ಯ ವಕೀಲರು ಗುಲ್ಬರ್ಗ ಸೊಸೈಟಿ ಹತ್ಯಾಕಾಂಡದ ಆರೋಪಿಯೆನಿಸಿಕೊಂಡಿದ್ದು, ಇಂತಹ ಸಮಿತಿಯಿಂದ ದೇಶದ ಮುಸ್ಲಿಮರು ಯಾವ ರೀತಿಯ ನ್ಯಾಯ ನಿರೀಕ್ಷಿಸಲು ಸಾಧ್ಯವಿದೆ? ಎಂದು ಪ್ರಶ್ನಿಸಿದರು.

ಮೂಡುಬಿದಿರೆ ತಹಶೀಲ್ದಾರ್ ಮುಹಮ್ಮದ್ ಇಸಾಕ್‌ರಿಗೆ ಮನವಿಯನ್ನು ಸಲ್ಲಿಸಲಾಯಿತು.

ಬೆಳುವಾಯಿ ಅಬೂಬಕರ್ ಸಿದ್ದೀಕಿ ಮಸೀದಿ ಉಪಾಧ್ಯಕ್ಷ ಅಮೀರ್ ಗೌಸ್, ಬೆಳುವಾಯಿ ಅಬ್ದುಸ್ಸಲೀಂ, ಅಬ್ದುರ್ರಹ್ಮಾನ್ ಬೆಳುವಾಯಿ, ಅಬೂಬಕರ್ ಸಿದ್ದೀಕ್ ಬೆಳುವಾಯಿ, ಮುಹಮ್ಮದ್ ಅಲೀಂ ಅಲಂಗಾರು, ಬೆಳುವಾಯಿ ಸೈಬಾಝ್ ಅಹ್ಮದ್, ಮಯ್ಯದ್ದಿ ಗುಂಡುಕಲ್ಲು, ಅಬ್ದುಲ್ ಖಯ್ಯೂಂ ಬೆಳುವಾಯಿ, ಅಬ್ದುಲ್ ಅಝೀಝ್ ಗುಂಡುಕಲ್ಲು, ಕೊಟೆಬಾಗಿಲು ರಿಝ್ವಾನ್ ಅಹ್ಮದ್ ಉಪಸ್ಥಿತರಿದ್ದರು.

ಅನ್ವರ್ ಕಾರ್ಯಕ್ರಮ ನಿರೂಪಿಸಿದರು. ಸೈಬಾಝ್ ಸ್ವಾಗತಿಸಿದರು. ಹಾಶಿರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X