Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಡಿ ಜನರ ಕಗ್ಗತ್ತಲೆಯ ಜೀವನ:...

ಹಾಡಿ ಜನರ ಕಗ್ಗತ್ತಲೆಯ ಜೀವನ: ಜನಪ್ರತಿನಿಧಿಗಳು ಮೌನ

* ಮೂಲಭೂತ ಸೌಕರ್ಯಕ್ಕೆ ಹಾಡಿ ಜನರ ರೋದನ * ಬೀದಿಪಾಲಾಗಲಿವೆ 30ಕ್ಕೂ ಹೆಚ್ಚು ಕುಟುಂಬಗಳು

ವಾರ್ತಾಭಾರತಿವಾರ್ತಾಭಾರತಿ2 Nov 2016 10:15 PM IST
share
ಹಾಡಿ ಜನರ ಕಗ್ಗತ್ತಲೆಯ ಜೀವನ: ಜನಪ್ರತಿನಿಧಿಗಳು ಮೌನ

ಕುಶಾಲನಗರ, ನ.2: ಸಮೀಪದ ಕೂಪಾಡಿ ಮತ್ತು ಸೊಳೆಭಾವಿ ಗಿರಿಜನರ ಹಾಡಿಯ ನಿವಾಸಿಗಳು ಸರಕಾರದ ಯಾವ ಮೂಲಭೂತ ಸೌಕರ್ಯಗಳು ದೊರಕದೆ ಕಣ್ಣೀರಿಡುತ್ತಾ ಕಾಡನ್ನೇ ದೇವರೆಂಬಂತೆ ಕತ್ತಲೆಯ ಕೂಪದಲ್ಲಿ ಜೀವನ ನಡೆಸಿಕೊಂಡು ಬರುತ್ತಿದ್ದಾರೆ.
ಈ ಹಾಡಿಗಳಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಜೀವನ ಕಳೆಯುತ್ತಿದ್ದರೂ ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಇತ್ತ ಮುಖ ಮಾಡದೆ ಇರುವುದು ನಿವಾಸಿಗಳಲ್ಲಿ ಬೇಸರ ಹುಟ್ಟಿಸಿದೆ.
ಸರಕಾರದಿಂದ ಗಿರಿಜನರ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾದರೂ ಹಣ ಬಳಕೆಯಾಗದೆ ಅಭಿವೃದ್ಧಿ ಮರೀಚಿಕೆಯಾಗಿದೆ.
ಕೂಪಾಡಿ ಗಿರಿಜನ ಕಾಲನಿಗೆ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಅಂದಾಜು ವೆಚ್ಚವಾಗಿ 15.90 ಲಕ್ಷ ರೂ.ಗಳಲ್ಲಿ ಮಾಡಲಾಗಿದೆ ಎಂಬ ನಾಮಫಲಕ ಬಿಟ್ಟರೇ, ಹಾಡಿಯ ಜನರಿಗೆ ನಡೆದಾಡಲು ಇಂದಿಗೂ ರಸ್ತೆ ಸಂಪರ್ಕವಿಲ್ಲ. ಚರಂಡಿ ವ್ಯವಸ್ಥೆಯಂತು ಇವರಿಗೆ ಗಗನ ಕುಸುಮವಾಗಿದೆ.
 ಹಾರಂಗಿ ಜಲಾಶಯದಿಂದ ಸೋಮವಾರಪೇಟೆ ಪಟ್ಟಣಕ್ಕೆ ಕುಡಿಯುವ ನೀರಿನ ಪೈಪ್ ಲೈನ್ ಈ ಹಾಡಿಯ ಪಕ್ಕದಲ್ಲೇ ಹಾದು ಹೋಗಿದ್ದು ಈ ಪೈಪ್‌ನಿಂದ ಸೋರಿಕೆಯಾಗುವ ನೀರನ್ನು ಹಾಡಿಯ ಜನರು ಮಣ್ಣಿನ ಗುಂಡಿಯನ್ನು ತೆಗೆದು ನೀರು ಶೇಖರಿಸಿ ತಮ್ಮ ದಿನಬಳಕೆಗಾಗಿ ಉಪಯೋಗಕ್ಕಾಗಿ ಬಳಸಿಕೊಳ್ಳುವ ಪರಿಸ್ದಿತಿ ನಿರ್ಮಾಣವಾಗಿದೆ.
ಮಡಿಕೇರಿ ಕ್ಷೇತ್ರ ಶಾಸಕರ ಅನುದಾನದಿಂದ ಬಿಡುಗಡೆಯಾಗಿದ್ದ ನೀರು ಸರಬರಾಜು ಯೋಜನೆಗೆ ಸಂಬಂಧಿಸಿ 3.5ಲಕ್ಷ ರೂ.ಗಳಲ್ಲಿ ನಡೆದ ಕಾಮಗಾರಿ ಹಾಡಿಯ ಜನರ ಉಪಯೋಗಕ್ಕೆ ಬಾರದೆ ಮೂಲೆಗುಂಪಾಗಿದೆ.
ಗ್ರಾಮ ಪಂಚಾಯತ್ ವತಿಯಿಂದ ಗಿರಿಜನರಿಗಾಗಿ ನಿರ್ಮಾಣ ಮಾಡಿರುವ ಶೌಚಾಲಯ ಯಾವುದೆ ಉಪಯೋಗಕ್ಕೆ ಬಾರದೆ ಹಾಡಿ ಜನರ ಸಾಕುಪ್ರಾಣೆಗಳ ವಾಸ ಸ್ಥಾನವಾಗಿ ಮಾರ್ಪಟ್ಟಿದೆ.
ಹಾಡಿಯಲ್ಲಿ ಬೀದಿ ದೀಪವಿಲ್ಲದೆ ನಿವಾಸಿಗಳು ಪರದಾಡುವಂತಾಗಿದೆ. ರಾತ್ರಿ ಸಮಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಸಂಚರಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ. ಕಳೆದ 15 ದಿನಗಳ ಹಿಂದೆ ಇದೇ ಹಾಡಿಯ ಮಹಿಳೆಯೊಬ್ಬಳ ಮೇಲೆ ಕಾಡಾನೆ ದಾಳಿ ಮಾಡಿದ ಸಂದರ್ಭದಲ್ಲಿ ಆಕೆ ಮೃತಪಟ್ಟಿದ್ದಾಳೆ. ಅರಣ್ಯ ಇಲಾಖೆ ಅಧಿಕಾರಿಗಳು ಇಂತಹ ಕಾಡಿನಲ್ಲಿ ಜೀವನವನ್ನು ನಡೆಸುತ್ತಿರುವವರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ನಿವಾಸಿಗಳು ಆರೋಪಿಸುತ್ತಾರೆ.
ಜನಪ್ರತಿನಿಧಿಗಳು, ಅಧಿಕಾರಿಗಳು ಇಂತಹ ಮೂಲಭೂತ ಸೌಕರ್ಯ ವಂಚಿತ ಕಾಡಂಚಿನ ಗಿರಿಜನ ನಿವಾಸಿಗಳಿಗೆ ಭೇಟಿ ನೀಡಿ, ಸೌಕರ್ಯ ಕಲ್ಪಿಸಿ ಸಮಾಜದಲ್ಲಿ ಅವರಿಗೂ ಬದುಕುವ ಹಕ್ಕಿದೆ ಎಂಬುವುದನ್ನು ಸಾಬೀತು ಪಡಿಸುವರೆ ಎಂದು ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X