Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರನೆ ಟೆಸ್ಟ್: ಗೆಲುವಿನ ಹೊಸ್ತಿಲಲ್ಲಿ...

ಮೂರನೆ ಟೆಸ್ಟ್: ಗೆಲುವಿನ ಹೊಸ್ತಿಲಲ್ಲಿ ವೆಸ್ಟ್‌ಇಂಡೀಸ್

ವಾರ್ತಾಭಾರತಿವಾರ್ತಾಭಾರತಿ2 Nov 2016 11:05 PM IST
share
ಮೂರನೆ ಟೆಸ್ಟ್: ಗೆಲುವಿನ ಹೊಸ್ತಿಲಲ್ಲಿ ವೆಸ್ಟ್‌ಇಂಡೀಸ್

ಶಾರ್ಜಾ, ನ.2: ಪಾಕಿಸ್ತಾನ ವಿರುದ್ಧ ಇಲ್ಲಿ ನಡೆಯುತ್ತಿರುವ ಮೂರನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ತಂಡ ಗೆಲುವಿನ ಹೊಸ್ತಿಲಲ್ಲಿದೆ.

 ನಾಲ್ಕನೆ ದಿನದಾಟವಾದ ಬುಧವಾರ ಮಂದ ಬೆಳಕಿನಿಂದಾಗಿ ಪಂದ್ಯ ಬೇಗನೆ ಕೊನೆಗೊಂಡಾಗ ವೆಸ್ಟ್‌ಇಂಡೀಸ್ 5 ವಿಕೆಟ್‌ಗಳ ನಷ್ಟಕ್ಕೆ 114 ರನ್ ಗಳಿಸಿತ್ತು. ಅಂತಿಮ ದಿನವಾದ ಗುರುವಾರ ಗೆಲುವಿಗೆ ಉಳಿದ 5 ವಿಕೆಟ್‌ಗಳ ನೆರವಿನಿಂದ 39 ರನ್ ಗಳಿಸಬೇಕಾದ ಅಗತ್ಯವಿದೆ.

ಗೆಲ್ಲಲು 153 ರನ್ ಗುರಿ ಪಡೆದಿದ್ದ ವಿಂಡೀಸ್‌ಗೆ ಆರಂಭಿಕ ಬ್ಯಾಟ್ಸ್‌ಮನ್ ಬ್ರಾತ್‌ವೈಟ್(ಅಜೇಯ 44, 88 ಎಸೆತ, 4 ಬೌಂಡರಿ) ಮತ್ತೊಮ್ಮೆ ಆಸರೆಯಾಗಿದ್ದಾರೆ. ಆರನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ ವಿಕೆಟ್‌ಕೀಪರ್ ಡೌರಿಚ್(ಅಜೇಯ 36) ಅವರೊಂದಿಗೆ 47 ರನ್ ಸೇರಿಸಿರುವ ಬ್ರಾತ್‌ವೈಟ್ ತಂಡಕ್ಕೆ ಗೆಲುವು ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

ಬ್ರಾತ್‌ವೈಟ್-ಡೌರಿಚ್ ಮೊದಲ ಇನಿಂಗ್ಸ್‌ನಲ್ಲಿ ಕೂಡ 6ನೆ ವಿಕೆಟ್‌ಗೆ 83ರನ್ ಜೊತೆಯಾಟ ನಡೆಸಿ ತಂಡಕ್ಕೆ ಉಪಯುಕ್ತ 56 ರನ್ ಮುನ್ನಡೆ ಸಾಧಿಸಲು ನೆರವಾಗಿದ್ದರು. ಬ್ರಾತ್‌ವೈಟ್ ಮೊದಲ ಇನಿಂಗ್ಸ್‌ನಲ್ಲಿ ಅಜೇಯ 142 ರನ್ ಗಳಿಸಿದ್ದರು.

ಗೆಲ್ಲಲು ಸುಲಭ ಸವಾಲು ಪಡೆದಿರುವ ವಿಂಡೀಸ್ 67 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಗ ಡೌರಿಚ್‌ರೊಂದಿಗೆ ಕೈಜೋಡಿಸಿರುವ ಬ್ರಾತ್‌ವೈಟ್ ತಂಡಕ್ಕೆ ಗೆಲುವು ತರುವ ವಿಶ್ವಾಸ ಮೂಡಿಸಿದ್ದಾರೆ. ಒಂದು ವೇಳೆ ವಿಂಡೀಸ್ ಈ ಪಂದ್ಯವನ್ನು ಗೆದ್ದುಕೊಂಡರೆ 13 ಪಂದ್ಯಗಳ ಸೋಲಿನಿಂದ ಹೊರ ಬರಲಿದೆ. ಮಾತ್ರವಲ್ಲ ಯುಎಇ ಪ್ರವಾಸದಲ್ಲಿ ಮೊದಲ ಜಯ ದಾಖಲಿಸಲಿದೆ. ವಿಂಡೀಸ್ ಕಳೆದ ವರ್ಷ ಮೇನಲ್ಲಿ ಇಂಗ್ಲೆಂಡ್ ವಿರುದ್ಧ ಸ್ವದೇಶದಲ್ಲಿ ನಡೆದ ಪಂದ್ಯದಲ್ಲಿ ಕೊನೆಯ ಬಾರಿ ಜಯ ಸಾಧಿಸಿತ್ತು.

 ಪಾಕಿಸ್ತಾನಕ್ಕೆ ಮೂರನೆ ಪಂದ್ಯವನ್ನು ಜಯಿಸಲು ಇನ್ನು 5 ವಿಕೆಟ್‌ಗಳ ಅಗತ್ಯವಿದೆ. ಲೆಗ್-ಸ್ಪಿನ್ನರ್ ಯಾಸಿರ್ ಷಾ(3-30) ಹಾಗೂ ವೇಗದ ಬೌಲರ್ ವಹಾಬ್ ರಿಯಾಝ್(2-30) ಐದು ವಿಕೆಟ್‌ಗಳನ್ನು ಹಂಚಿಕೊಂಡಿದ್ದು, ಕೊನೆಯ ದಿನದಾಟದಲ್ಲಿ ವಿಂಡೀಸ್ ದಾಂಡಿಗರನ್ನು ಕಾಡುವ ವಿಶ್ವಾಸದಲ್ಲಿದ್ದಾರೆ.

ಪಾಕಿಸ್ತಾನ 208 ರನ್‌ಗೆ ಆಲೌಟ್

ಇದಕ್ಕೆ ಮೊದಲು 4 ವಿಕೆಟ್‌ಗಳ ನಷ್ಟಕ್ಕೆ 87 ರನ್‌ನಿಂದ ಎರಡನೆ ಇನಿಂಗ್ಸ್ ಮುಂದುವರಿಸಿದ ಪಾಕಿಸ್ತಾನ 81.3 ಓವರ್‌ಗಳಲ್ಲಿ 208 ರನ್‌ಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು.

ಆರಂಭಿಕ ದಾಂಡಿಗ ಅಝರ್ ಅಲಿ(91 ರನ್, 234 ಎಸೆತ, 6 ಬೌಂಡರಿ, 1 ಸಿಕ್ಸರ್) ತಾಳ್ಮೆಯ ಇನಿಂಗ್ಸ್ ಆಡಿ ತಂಡದ ಸ್ಕೋರನ್ನು 200ರ ಗಡಿ ದಾಟಿಸಿದರು.

ವಿಕೆಟ್‌ಕೀಪರ್ ಸರ್ಫರಾಝ್ ಅಹ್ಮದ್ 42 ರನ್ ಗಳಿಸಿದರು. ಮುಹಮ್ಮದ್ ನವಾಝ್(19) ಹಾಗೂ ಸಮಿ ಇಸ್ಲಾಮ್(17) ಎರಡಂಕೆ ಸ್ಕೋರ್ ದಾಖಲಿಸಿದರು.

ಪಾಕಿಸ್ತಾನ ಲಂಚ್ ವಿರಾಮದ ಬಳಿಕ 33ರನ್ ಗಳಿಸುವಷ್ಟರಲ್ಲಿ ಕೊನೆಯ ಐದು ವಿಕೆಟ್‌ಗಳನ್ನು ಕಳೆದುಕೊಂಡು ದಿಢೀರ್ ಕುಸಿತ ಕಂಡಿತು.

 ಐದು ವಿಕೆಟ್ ಗೊಂಚಲು ಕಬಳಿಸಿದ ನಾಯಕ ಜೇಸನ್ ಹೋಲ್ಡರ್(5-30) ಹಾಗೂ ಸ್ಪಿನ್ನರ್ ದೇವೇಂದ್ರ ಬಿಶೂ(3-46) ಪಾಕ್‌ನ್ನು 208 ರನ್‌ಗೆ ಕಟ್ಟಿ ಹಾಕಿ ವಿಂಡೀಸ್‌ಗೆ ಸುಲಭ ಸವಾಲು ಲಭಿಸಲು ನೆರವಾದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ ಪ್ರಥಮ ಇನಿಂಗ್ಸ್: 281 ರನ್

ಪಾಕಿಸ್ತಾನ ದ್ವಿತೀಯ ಇನಿಂಗ್ಸ್: 208 ರನ್

(ಅಝರ್ ಅಲಿ 91, ಅಹ್ಮದ್ 42, ಹೋಲ್ಡರ್ 5-30)

ವೆಸ್ಟ್‌ಇಂಡೀಸ್ ಪ್ರಥಮ ಇನಿಂಗ್ಸ್: 337 ರನ್

ವೆಸ್ಟ್‌ಇಂಡೀಸ್ ದ್ವಿತೀಯ ಇನಿಂಗ್ಸ್: 114/5

(ಬ್ರಾತ್‌ವೈಟ್ 44, ಡೌರಿಚ್ ಅಜೇಯ 36, ಯಾಸಿರ್ ಷಾ 3-30)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X