ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು
ಕಾಸರಗೋಡು, ನ.2: ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ದೋಣಿಯಿಂದ ಸಮುದ್ರಕ್ಕೆ ಬಿದ್ದು ಬೆಸ್ತರೋರ್ವರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಕೀಯೂರಿನ ಕೆ. ವಿ. ದಾಸ್(56) ಎಂದು ಗುರುತಿಸಲಾಗಿದೆ. ಬುಧವಾರ ಕೀಯೂರು ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದ ಸಂದರ್ಭ ಸಮುದ್ರಕ್ಕೆ ಬಿದ್ದು ಈ ಘಟನೆ ನಡೆದಿದೆ. ಜೊತೆಗಿದ್ದವರು ಶೋಧ ಮಾಡಿ ಅವರನ್ನು ಮೇಲಕ್ಕೆತ್ತಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಾಯಿಸಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
Next Story