ಭೋಪಾಲ್ ಎನ್ಕೌಂಟರ್ ವಿರುದ್ಧ ನ.4ರಂದು ಎಸ್ಡಿಪಿಐ ಪ್ರತಿಭಟನೆ
ಮಂಗಳೂರು, ನ.3: ಭೋಪಾಲ್ ಕಾರಾಗೃಹದಿಂದ ಪರಾರಿಯಾಗಿದ್ದಾರೆಂದು ನೆಪವೊಡ್ಡಿ 8 ಮಂದಿ ವಿಚಾರಣಾಧೀನ ಯುವಕರನ್ನು ನಕಲಿ ಎನ್ಕೌಂಟರ್ ಮೂಲಕ ಹತ್ಯೆಗೈದಿರುವ ವಿಚಾರ ಇಡೀ ದೇಶವು ತಲೆತಗ್ಗಿಸುವಂತೆ ಮಾಡಿದೆ. ಈ ಎನ್ಕೌಂಟರ್ ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಪೊಲೀಸರು ನೀಡುವ ಹೇಳಿಕೆಗಳು, ಮಧ್ಯಪ್ರದೇಶದ ಗೃಹಮಂತ್ರಿಯ ಮಾತುಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೊ ತುಣುಕುಗಳನ್ನು ನೋಡುತ್ತಿರುವಾಗ ಇದೊಂದು ಪೂರ್ವ ನಿಯೋಜಿತ ಕೃತ್ಯದಂತೆ ಗೋಚರಿಸುತ್ತಿದೆ. ಆದುದರಿಂದ ಇದರ ಹಿಂದಿರುವ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವುದಕ್ಕಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲೆಯ ವತಿಯಿಂದ ನ.4ರಂದು ಸಂಜೆ 4ಕ್ಕೆ ಮಂಗಳೂರಿನಲ್ಲಿರುವ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story