Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ಸ್ತರಗಳಲ್ಲಿ ಶೇ.5ರಿಂದ 28ರಷ್ಟು...

ನಾಲ್ಕು ಸ್ತರಗಳಲ್ಲಿ ಶೇ.5ರಿಂದ 28ರಷ್ಟು ತೆರಿಗೆ ವಿಧಿಸಲು ಜಿಎಸ್‌ಟಿ ಮಂಡಳಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ3 Nov 2016 7:44 PM IST
share
ನಾಲ್ಕು ಸ್ತರಗಳಲ್ಲಿ ಶೇ.5ರಿಂದ 28ರಷ್ಟು ತೆರಿಗೆ ವಿಧಿಸಲು ಜಿಎಸ್‌ಟಿ ಮಂಡಳಿ ನಿರ್ಧಾರ

 ಹೊಸದಿಲ್ಲಿ,ನ.3: 5,12,18 ಮತ್ತು 28 ಶೇಕಡಾ ದರಗಳ ನಾಲ್ಕು ಸ್ತರಗಳಲ್ಲಿ ಸರಕು ಹಾಗೂ ಸೇವಾ ತೆರಿಗೆಯನ್ನು ವಿಧಿಸಲು ಇಂದಿಲ್ಲಿ ಸಭೆ ಸೇರಿದ್ದ ಜಿಎಸ್‌ಟಿ ಮಂಡಳಿಯು ನಿರ್ಧರಿಸಿದೆ. ಅಗತ್ಯ ವಸ್ತುಗಳಿಗೆ ಕಡಿಮೆ ತೆರಿಗೆಯಿದ್ದರೆ, ಐಷಾರಾಮಿ ವಸ್ತುಗಳಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುವುದು,ಜೊತೆಗೆ ಹೆಚ್ಚುವರಿ ಸೆಸ್‌ನ ಹೊರೆಯೂ ಇರುತ್ತದೆ.


ಹಣದುಬ್ಬರವನ್ನು ನಿಯಂತ್ರಣದಲ್ಲಿರಿಸುವ ಉದ್ದೇಶದಿಂದ ಆಹಾರ ಸೇರಿದಂತೆ ಬಳಕೆದಾರ ಹಣದುಬ್ಬರ ಸೂಚಿಯಲ್ಲಿ ಅರ್ಧದಷ್ಟಿರುವ ಅಗತ್ಯ ಸಾಮಗ್ರಿಗಳಿಗೆ ಶೂನ್ಯ ತೆರಿಗೆಯನ್ನು ನಿಗದಿಗೊಳಿಸಲು ಸಭೆಯು ನಿರ್ಧರಿಸಿದೆ.


ಸಾಮಾನ್ಯಬಳಕೆಯ ಸರಕುಗಳಿಗೆ ಶೇ.5ರ ಕನಿಷ್ಠ ತೆರಿಗೆಯನ್ನು ವಿಧಿಸಲಾಗುತ್ತದೆ. ಎರಡು ದಿನಗಳ ಜಿಎಸ್‌ಟಿ ಮಂಡಳಿಯ ಮೊದಲ ದಿನದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಪ್ರಕಟಿಸಿದ ವಿತ್ತಸಚಿವ ಅರುಣ್ ಜೇಟ್ಲಿ ಅವರು, ಪ್ರಸ್ತುತ ಶೇ.30-31ರ ತೆರಿಗೆ(ಅಬಕಾರಿ ಸುಂಕ ಮತ್ತು ವ್ಯಾಟ್ ಸೇರಿ)ಯಿರುವ ಸರಕುಗಳಿಗೆ ಅತ್ಯಧಿಕ ತೆರಿಗೆ ಸ್ತರ(ಶೇ.28)ವು ಅನ್ವಯವಾಗಲಿದೆ ಎಂದರು. ಜಿಎಸ್‌ಟಿ 2017 ಎಪ್ರಿಲ್ 1ರಿಂದ ಜಾರಿಗೊಳ್ಳಲಿದೆ.

ಐಷಾರಾಮಿ ಕಾರುಗಳು, ತಂಬಾಕು ಉತ್ಪನ್ನಗಳು ಮತ್ತು ಅನಿಲ ಸಂಸ್ಕರಿತ ಪಾನೀಯ ಗಳಿಗೆ ಗರಿಷ್ಠ ತೆರಿಗೆಯ ಜೊತೆಗೆ ಹೆಚ್ಚುವರಿ ಸೆಸ್‌ನ್ನೂ ಪಾವತಿಸಬೇಕಾಗುತ್ತದೆ. ಈ ಹೆಚ್ಚುವರಿ ಸೆಸ್ ಮತ್ತು ಮತ್ತು ಶುದ್ಧ ಇಂಧನ ಸೆಸ್ ಮೂಲಕ ಸಂಗ್ರಹವಾಗುವ ಹಣವು ಜಿಎಸ್‌ಟಿ ಜಾರಿಯ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಯಾವುದೇ ಆದಾಯ ನಷ್ಟವಾದರೆ ಪರಿಹಾರವನ್ನು ನೀಡಲು ಬಳಕೆಯಾಗಲಿದೆ. ಈ ಸೆಸ್ ಐದು ವರ್ಷಗಳ ಬಳಿಕ ರದ್ದುಗೊಳ್ಳುತ್ತದೆ ಎಂದು ಜೇಟ್ಲಿ ತಿಳಿಸಿದರು.


 ಅಬಕಾರಿ ಸುಂಕ,ಸೇವಾ ತೆರಿಗೆ ಮತ್ತು ವ್ಯಾಟ್‌ನಂತಹ ಹತ್ತು ಹಲವಾರು ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ನಿವಾರಿಸುವ ಜಿಎಸ್‌ಟಿ ಜಾರಿಯಿಂದಾಗಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಪರಿಹಾರವನ್ನು ವಿತರಿಸಲು ಸುಮಾರು 50,000 ಕೋ.ರೂ.ಬೇಕಾಗುತ್ತದೆ ಎಂದು ಅವರು ಹೇಳಿದರು.

ಕಳೆದ ತಿಂಗಳು ನಡೆದಿದ್ದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಶೇ.6ರಿಂದ ಶೇ.28ರವರೆಗೆ ತೆರಿಗೆಯನ್ನು ನಿಗದಿಗೊಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಇಂದಿನ ಸಭೆಯು ಇದನ್ನು ಕೊಂಚ ಪರಿಷ್ಕರಿಸಿ ಒಪ್ಪಿಕೊಂಡಿದೆ. ಬಂಗಾರದ ಮೇಲೆ ಶೇ.4 ಜಿಎಸ್‌ಟಿ ವಿಧಿಸಲು ಕೇಂದ್ರವು ಉದ್ದೇಶಿಸಿದೆಯಾದರೂ ಅಂತಿಮ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಜೇಟ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X