Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯ ಹೈಕಮಿಶನ್‌ನ 8 ಅಧಿಕಾರಿಗಳು...

ಭಾರತೀಯ ಹೈಕಮಿಶನ್‌ನ 8 ಅಧಿಕಾರಿಗಳು ಬುಡಮೇಲು ಚಟುವಟಿಕೆಗಳಲ್ಲಿ ಶಾಮೀಲು: ಪಾಕಿಸ್ತಾನ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Nov 2016 11:53 PM IST
share
ಭಾರತೀಯ ಹೈಕಮಿಶನ್‌ನ 8 ಅಧಿಕಾರಿಗಳು ಬುಡಮೇಲು ಚಟುವಟಿಕೆಗಳಲ್ಲಿ ಶಾಮೀಲು: ಪಾಕಿಸ್ತಾನ ಆರೋಪ

ಇಸ್ಲಾಮಾಬಾದ್, ನ. 3: ಇಲ್ಲಿನ ಭಾರತೀಯ ಹೈಕಮಿಶನ್‌ನ ಎಂಟು ಅಧಿಕಾರಿಗಳು ಭಾರತೀಯ ಗುಪ್ತಚರ ಸಂಸ್ಥೆಗಳ ಸದಸ್ಯರಾಗಿದ್ದಾರೆ ಹಾಗೂ ‘ಬುಡಮೇಲು ಚಟುವಟಿಕೆ’ಗಳಲ್ಲಿ ಶಾಮೀಲಾಗಿದ್ದಾರೆ ಎಂಬುದಾಗಿ ಪಾಕಿಸ್ತಾನ ಇಂದು ಆರೋಪಿಸಿದೆ.
ತನ್ನ ವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆಯೊಂದನ್ನು ಓದಿದ ಪಾಕಿಸ್ತಾನದ ವಿದೇಶ ಕಚೇರಿಯ ವಕ್ತಾರ ನಫೀಸ್ ಝಕಾರಿಯ, ಹಲವು ಭಾರತೀಯ ರಾಜತಾಂತ್ರಿಕರು ಹಾಗೂ ರಾಜತಾಂತ್ರಿಕ ಕಚೇರಿಯ ಸಿಬ್ಬಂದಿ, ರಾಜತಾಂತ್ರಿಕ ಕೆಲಸಗಳ ನೆಪದಲ್ಲಿ ಪಾಕಿಸ್ತಾನದಲ್ಲಿ ‘‘ಭಯೋತ್ಪಾದಕ ಮತ್ತು ಬುಡಮೇಲು ಚಟುವಟಿಕೆಗಳ ಸಮನ್ವಯ ಕಾರ್ಯ ನಡೆಸುತ್ತಿದ್ದಾರೆ’’ ಎಂದು ಆರೋಪಿಸಿದರು.
 
‘‘ಅವರ ಹೆಸರುಗಳು ಮತ್ತು ಹುದ್ದೆಗಳು ಹೀಗಿವೆ: ರಿಸರ್ಚ್ ಆ್ಯಂಡ್ ಎನಾಲಿಸಿಸ್ ವಿಂಗ್ (ರಾ)ನ ಅಧಿಕಾರಿಗಳು- ‘ರಾ’ದ ಕೇಂದ್ರೀಯ ಮುಖ್ಯಸ್ಥ ಅನುರಾಗ್ ಸಿಂಗ್, ಕಮರ್ಶಿಯಲ್ ಕೌನ್ಸೆಲರ್ ರಾಜೇಶ್ ಕುಮಾರ್ ಅಗ್ನಿಹೋತ್ರಿ, ವೀಸಾ ವಿಭಾಗದ ಅಮರ್‌ದೀಪ್ ಸಿಂಗ್, ಸಿಬ್ಬಂದಿ ಧರ್ಮೇಂದ್ರ ಸೋದಿ, ಸಿಬ್ಬಂದಿ ವಿಜಯಕುಮಾರ್ ವರ್ಮ ಮತ್ತು ಸಿಬ್ಬಂದಿ ಮಾಧವನ್ ನಂದ ಕುಮಾರ್’’ ಎಂದರು.
‘‘ಪ್ರೆಸ್ ಆ್ಯಂಡ್ ಇನ್‌ಫಾರ್ಮೇಶನ್ ಫಸ್ಟ್ ಸೆಕ್ರೆಟರಿ ಬಲ್ಬೀರ್ ಸಿಂಗ್ ಮತ್ತು ಸಹಾಯಕ ಸಿಬ್ಬಂದಿ ಕಲ್ಯಾಣ ಅಧಿಕಾರಿ ಜಯಾಲನ್ ಸೆಂದಿಲ್ ಭಾರತೀಯ ಗುಪ್ತಚರ ಬ್ಯೂರೋದ ಅಧಿಕಾರಿಗಳಾಗಿದ್ದಾರೆ’’ ಎಂದರು.
ಕೆಲವು ದಿನಗಳ ಹಿಂದೆ, ಪಾಕಿಸ್ತಾನದಿಂದ ‘ಅನಪೇಕ್ಷಿತ ವ್ಯಕ್ತಿ’ ಎಂಬುದಾಗಿ ಘೋಷಿಸಲ್ಪಟ್ಟಿದ್ದ ಸುರ್ಜೀತ್ ಸಿಂಗ್ ಕೂಡ ಭಾರತೀಯ ಗುಪ್ತಚರ ಸಂಸ್ಥೆಯ ಪ್ರತಿನಿಧಿಯಾಗಿದ್ದರು ಎಂದು ಅವರು ಆರೋಪಿಸಿದರು.
ತಾನು ಟೆಲಿಕಾಂ ಕಂಪೆನಿ ವಾರಿದ್‌ನ ಉದ್ಯೋಗಿ ಎಂಬುದಾಗಿ ತೋರಿಸುವ ನಕಲಿ ಗುರುತು ಚೀಟಿಯನ್ನು ಸುರ್ಜೀತ್ ಹೊಂದಿದ್ದರು ಎಂದು ಅವರು ಹೇಳಿಕೊಂಡರು.
ಭಾರತೀಯ ಪೊಲೀಸರು ಐಎಸ್‌ಐ ನಡೆಸುತ್ತಿದ್ದ ಬೇಹುಗಾರಿಕೆ ಜಾಲವೊಂದನ್ನು ಪತ್ತೆಹಚ್ಚಿದ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಹೈಕಮಿಶನ್‌ನ ಅಧಿಕಾರಿ ಮೆಹ್ಮೂದ್ ಅಖ್ತರ್ ವಿರುದ್ಧ ಭಾರತ ಕ್ರಮ ತೆಗೆದುಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಸುರ್ಜಿತ್‌ರನ್ನು ‘ಅನಪೇಕ್ಷಿತ ವ್ಯಕ್ತಿ’ ಎಂಬುದಾಗಿ ಪಾಕಿಸ್ತಾನ ಘೋಷಿಸಿತ್ತು.
‘‘ಭಾರತ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುವುದು ಹಾಗೂ ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸುವುದು ಮುಂತಾದ ಕೃತ್ಯಗಳಲ್ಲಿ ತೊಡಗಿಸಿ ಕೊಂಡಿರುವುದೇ ಅಲ್ಲದೆ, ತನ್ನ ಕುಕೃತ್ಯಗಳಿಗಾಗಿ ತನ್ನ ರಾಯಭಾರ ಕಚೇರಿಯನ್ನು ಬಳಸಿರುವುದರಿಂದ ನಮಗೆ ನಿರಾಶೆಯಾಗಿದೆ’’ ಎಂದರು.

‘ಬಲೂಚಿಸ್ತಾನ, ಸಿಂಧ್‌ಗಳಲ್ಲಿ ಅಸ್ಥಿರತೆ’

ಭಾರತೀಯ ಹೈಕಮಿಶನ್‌ನ ಅಧಿಕಾರಿಗಳು ಬೇಹುಗಾರಿಕೆ, ಬುಡಮೇಲು ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಾರೆ ಹಾಗೂ ಬಲೂಚಿಸ್ತಾನ ಮತ್ತು ಸಿಂಧ್, ಅದರಲ್ಲೂ ಮುಖ್ಯವಾಗಿ ಕರಾಚಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನೆ ನೀಡುತ್ತಿದ್ದಾರೆ. ಅವರು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ಗೆ ವಿಘ್ನ ಒಡ್ಡುತ್ತಿದ್ದಾರೆ ಹಾಗೂ ಈ ಎರಡು ರಾಜ್ಯಗಳಲ್ಲಿ ಅಸ್ಥಿರತೆ ಹುಟ್ಟುಹಾಕುತ್ತಿದ್ದಾರೆ ಎಂದು ಪಾಕಿಸ್ತಾನ ವಿದೇಶ ಕಚೇರಿಯ ವಕ್ತಾರ ನಫೀಸ್ ಝಕಾರಿಯ ಹೇಳಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X