Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಾರಿಗೆ ಸಬ್‌ಜೈಲರ್, ಗಾರ್ಡ್‌ಗಳಿಂದಲೇ...

ಪರಾರಿಗೆ ಸಬ್‌ಜೈಲರ್, ಗಾರ್ಡ್‌ಗಳಿಂದಲೇ ವ್ಯವಸ್ಥೆ?

ಭೋಪಾಲ್ ಎನ್‌ಕೌಂಟರ್

ವಾರ್ತಾಭಾರತಿವಾರ್ತಾಭಾರತಿ4 Nov 2016 8:36 AM IST
share
ಪರಾರಿಗೆ ಸಬ್‌ಜೈಲರ್, ಗಾರ್ಡ್‌ಗಳಿಂದಲೇ ವ್ಯವಸ್ಥೆ?

ಭೋಪಾಲ್, ನ.4: ಎನ್‌ಕೌಂಟರ್ ಸಂತ್ರಸ್ತ ಕೈದಿಗಳು ದೀಪಾವಳಿ ದಿನ ರಾತ್ರಿ ಭೋಪಾಲ್ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಸಬ್‌ಜೈಲರ್ ಹಾಗೂ ಇಬ್ಬರು ಗಾರ್ಡ್‌ಗಳು ಸಹಕರಿಸಿದ್ದರೇ ಎಂಬ ಬಗ್ಗೆ ತನಿಖೆ ಇದೀಗ ಆರಂಭವಾಗಿದೆ. ಕೈದಿಗಳು ಪರಾರಿಯಾಗಲು ಒಳಗಿನವರೇ ಸಹಾಯ ಮಾಡಿರಬೇಕು ಎಂಬ ಅನುಮಾನ ದಟ್ಟವಾಗಿರುವ ಹಿನ್ನೆಲೆಯಲ್ಲಿ ಈ ಜೈಲ್‌ಬ್ರೇಕ್ ಪ್ರಕರಣದ ಬಗ್ಗೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಜೈಲ್‌ಬ್ರೇಕ್ ಪ್ರಕರಣದ ಸೂತ್ರಧಾರ ಎನ್ನಲಾದ ಸಿಮಿ ಮುಖಂಡನನ್ನು ಆತ ತಪ್ಪಿಸಿಕೊಳ್ಳುವ ಕೆಲವೇ ದಿನ ಮೊದಲು ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೇ ಎ ಬ್ಲಾಕ್‌ನಿಂದ ಬಿ ಬ್ಲಾಕ್‌ಗೆ ಏಕೆ ಸ್ಥಳಾಂತರಿಸಲಾಯಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಬಿ ಬ್ಲಾಕ್‌ನಲ್ಲಿ ಬಂಧನದಲ್ಲಿದ್ದ 17 ಕೈದಿಗಳ ಪೈಕಿ 8 ಮಂದಿ, ಜೈಲ್‌ಗಾರ್ಡ್ ರಾಮಶಂಕರ್ ಯಾದವ್‌ನನ್ನು ಹತ್ಯೆ ಮಾಡಿ, ಸಹೋದ್ಯೋಗಿ ಚಂದನ್ ಖಿಲಾಂಟೆ ಎಂಬಾತನನ್ನು ಕಟ್ಟಿಹಾಕಿ ಜೈಲಿನಿಂದ ತಪ್ಪಿಸಿಕೊಂಡಿದ್ದರು.

ಒಂಬತ್ತು ಮಂದಿ ಸಿಮಿ ಕಾರ್ಯಕರ್ತರು ತಪ್ಪಿಸಿಕೊಳ್ಳುವ ಸಂಚು ರೂಪುಗೊಂಡಿತ್ತು. ಆದರೆ ಒಬ್ಬ ಅಸ್ವಸ್ಥನಾಗಿದ್ದ ಕಾರಣ ಆತ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಪ್ರಕರಣದ ಸೂತ್ರಧಾರನಾಗಿದ್ದ ವ್ಯಕ್ತಿ, ಇತರರು ತಪ್ಪಿಸಿಕೊಳ್ಳಲು ಮಾರ್ಗ ಸೂಚಿಸಿದ್ದ ಎಂದು ಮೂಲಗಳು ಹೇಳಿವೆ.

ಪ್ರತಿದಿನ ಬೀಗವನ್ನು ಬದಲಿಸಲಾಗುತ್ತದೆ. ಅವರು ಬೀಗದ ಹತ್ತಿರವೂ ಸುಳಿಯಲು ಅವಕಾಶವಿಲ್ಲ. ಹಾಗಿದ್ದರೂ ನಕಲಿ ಕೀಲಿ ತಯಾರಿಸಲು ಹೇಗೆ ಸಾಧ್ಯ? ಆದ್ದರಿಂದ ಇದರಲ್ಲಿ ಒಳಗಿನವರ ಕೈವಾಡ ಇದ್ದೇ ಇದೆ ಎಂಬ ಶಂಕೆ ದಟ್ಟವಾಗಿದೆ.

ಯಾದವ್ ತನ್ನ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಎಂಟು ಮಂದಿ ಕೂಡಾ ಮುಕ್ತರಾಗಿದ್ದರು. ಅಷ್ಟಾಗಿಯೂ ಬ್ಲಾಕ್ ಗೇಟಿನ ಕೀಲಿ ಇಲ್ಲದ ಕಾರಣ ಅವರು ಅಲ್ಲೇ ಕತ್ತಲಲ್ಲಿ ಅವಿತುಕೊಂಡಿದ್ದರು. ಯಾದವ್ ಹಾಗೂ ಖಿಲಾಂಟೆ ಗಸ್ತು ತಿರುಗಲು ಬರುವವರೆಗೂ ಕಾದಿದ್ದು, ಹಠಾತ್ತನೇ ದಾಳಿ ಮಾಡಿದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮೂಲಗಳು ಹೇಳಿವೆ.

ಹೊಸದಾಗಿ ನೇಮಕಗೊಂಡ ಗಾರ್ಡ್, ಇವರು ಗೋಡೆ ಹತ್ತುತ್ತಿರುವುದನ್ನು ನೋಡಿದ್ದಾನೆ. ಕತ್ತಲಲ್ಲೇ ಎಚ್ಚರಿಕೆ ಸಂದೇಶವನ್ನೂ ನೀಡಿದ್ದಾನೆ. ಆದರೆ ತಪ್ಪಿಸಿಕೊಳ್ಳುತ್ತಿದ್ದವರು ಸಿಮಿ ವಿಚಾರಣಾಧೀನ ಕೈದಿಗಳು ಎನ್ನುವುದು ಆತನಿಗೆ ತಿಳಿಯುವ ಸಾಧ್ಯತೆ ಇದ್ದಿರಲಿಲ್ಲ. ತಕ್ಷಣ ತಪಾಸಣೆ ಆರಂಭವಾಯಿತು. ಆಗ ಯಾದವ್ ಶವ ಕಂಡುಬಂತು. ತಪ್ಪಿಸಿಕೊಳ್ಳುವ ಯತ್ನದಲ್ಲಿ ಒಬ್ಬನ ಕಾಲು ಮುರಿದದ್ದರಿಂದ ಅವರ ಮುಂದಿನ ಕಾರ್ಯತಂತ್ರ ನಿಧಾನವಾಯಿತು ಎನ್ನುವುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಮೂಲಗಳು ವಿವರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X