Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಟಿವಿ ವಿರುದ್ಧ ಕ್ರಮಕ್ಕೆ ಸಂಪಾದಕರ...

ಎನ್‌ಡಿಟಿವಿ ವಿರುದ್ಧ ಕ್ರಮಕ್ಕೆ ಸಂಪಾದಕರ ಮಂಡಳಿಯಿಂದ ಖಂಡನೆ

‘‘ಇದು ತುರ್ತು ಪರಿಸ್ಥಿತಿ ನೆನಪಿಸುವ ನಿರ್ಬಂಧ’’

ವಾರ್ತಾಭಾರತಿವಾರ್ತಾಭಾರತಿ4 Nov 2016 3:25 PM IST
share
ಎನ್‌ಡಿಟಿವಿ ವಿರುದ್ಧ ಕ್ರಮಕ್ಕೆ ಸಂಪಾದಕರ ಮಂಡಳಿಯಿಂದ ಖಂಡನೆ

ಹೊಸದಿಲ್ಲಿ,ನ.4: ನ.9ರಂದು ಒಂದು ದಿನದ ಮಟ್ಟಿಗೆ ಎನ್‌ಡಿಟಿವಿ ಇಂಡಿಯಾ ವಾಹಿನಿಯನ್ನು ನಿಷೇಧಿಸುವ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರವನ್ನು ಭಾರತೀಯ ಸಂಪಾದಕರ ಮಂಡಳಿ(ಇಜಿಐ)ಯು ಬಲವಾಗಿ ಖಂಡಿಸಿದೆ.

ಈ ನಿರ್ಧಾರವನ್ನು ತಕ್ಷಣ ಹಿಂದೆಗೆದುಕೊಳ್ಳುವಂತೆ ಹೇಳಿಕೆಯಲ್ಲಿ ಆಗ್ರಹಿಸಿರುವ ಮಂಡಳಿಯು, 2016,ಜ.2ರಂದು ಪಠಾಣಕೋಟ್ ವಾಯುನೆಲೆಯ ಮೇಲೆ ನಡೆದಿದ್ದ ಭಯೋತ್ಪಾದಕರ ದಾಳಿಯ ಕುರಿತು ಎನ್‌ಡಿಟಿವಿಯ ವರದಿಯಿಂದಾಗಿ ಭಯೋತ್ಪಾದಕರ ನಿರ್ವಾಹಕರಿಗೆ ಸೂಕ್ಷ್ಮ ಮಾಹಿತಿಗಳು ದೊರೆಯುವಂತಾಗಿತ್ತು ಎನ್ನುವುದು ನಿಷೇಧದ ಆದೇಶಕ್ಕೆ ಕಾರಣ ಎನ್ನಲಾಗಿದೆ. ದಾಳಿಯ ಕುರಿತಂತೆ ತನ್ನ ವರದಿಯು ಸಂಯಮದಿಂದ ಕೂಡಿತ್ತು ಮತ್ತು ಇತರ ಮಾಧ್ಯಮಗಳು ಬಹಿರಂಗಗೊಳಿಸಿದ್ದ ಯಾವುದೇ ಮಾಹಿತಿಗಳನ್ನು ಒಳಗೊಂಡಿರಲಿಲ್ಲ ಎಂದು ಎನ್‌ಡಿವಿ ಸಚಿವಾಲಯಕ್ಕೆ ನೀಡಿರುವ ತನ್ನ ಉತ್ತರದಲ್ಲಿ ಸ್ಪಷ್ಟಪಡಿಸಿದೆ ಎಂದು ಬೆಟ್ಟು ಮಾಡಿದೆ.

ವಾಹಿನಿಯನ್ನು ಒಂದು ದಿನದ ಅವಧಿಗೆ ನಿಷೇಧಿಸುವ ನಿರ್ಧಾರವು ಮಾಧ್ಯಮಗಳ ಸ್ಯಾತಂತ್ರದ ಮತ್ತು ತನ್ಮೂಲಕ ಭಾರತೀಯ ಪ್ರಜೆಗಳ ಸ್ವಾತಂತ್ರದ ನೇರ ಉಲ್ಲಂಘನೆ ಯಾಗಿದೆ ಮತ್ತು ಇದು ತುರ್ತು ಸ್ಥಿತಿಯನ್ನು ನೆನಪಿಸುವಂತಹ, ಸರಕಾರವು ಹೇರಿರುವ ಕಠೋರ್ ಸೆನ್ಸಾರ್ ಆಗಿದೆ. ಮಾಧ್ಯಮಗಳ ಕಾರ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಮತ್ತು ವರದಿಯು ತನಗೆ ಒಪ್ಪಿತವಲ್ಲದಿದ್ದರೆ ನಿರಂಕುಶವಾಗಿ ದಂಡನಾ ಕ್ರಮವನ್ನು ಕೈಗೊಳ್ಳುವ ಅಧಿಕಾರವನ್ನು ಸರಕಾರ ತನಗೆ ತಾನೇ ಕೊಟ್ಟುಕೊಂಡಿರುವಂತಿದೆ ಮತ್ತು ಈ ಬ್ಲಾಕ್‌ಔಟ್ ಆದೇಶವು ಇದನ್ನೇ ಸೂಚಿಸುತ್ತಿದೆ ಎಂದಿರುವ ಮಂಡಳಿಯು, ಯಾವುದೇ ಬೇಜವಾಬ್ದಾರಿ ಮಾಧ್ಯಮ ವರದಿಯ ವಿರುದ್ಧ ನಾಗರಿಕರಿಗೆ ಮತ್ತು ಸರಕಾರಕ್ಕೆ ನಮ್ಮ ನ್ಯಾಯವ್ಯವಸ್ಥೆಯಲ್ಲಿ ವಿವಿಧ ಕಾನೂನು ಪರಿಹಾರಾತ್ಮಕ ಕ್ರಮಗಳಿವೆ. ನ್ಯಾಯಾಂಗದ ಹಸ್ತಕ್ಷೇಪ ಅಥವಾ ನಿಗಾ ಕೋರದೇ ನಿಷೇಧವನ್ನು ಹೇರುವುದು ಸ್ವಾತಂತ್ರ ಮತ್ತು ನ್ಯಾಯದ ಮೂಲಭೂತ ತತ್ತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.

ನಿಷೇಧ ನಿರ್ಧಾರವನ್ನು ಪ್ರಸಾರ ಸಂಪಾದಕರ ಸಂಘವು ಕೂಡ ಖಂಡಿಸಿದೆ. ಸರಕಾರದ ನಿರ್ಧಾರದ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿರುವ ಅದು, ನಿಷೇಧ ಹೇರಿಕೆಯು ಅಭಿವ್ಯಕ್ತಿ ಸ್ವಾತಂತ್ರದ ಉಲ್ಲಂಘನೆಯಾಗಿದ್ದು,ಇದನ್ನು ತಕ್ಷಣವೇ ಹಿಂದೆಗೆದುಕೊಳ್ಳಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X