Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್ ಪಂಪ್ ಗಳಲ್ಲಿ ಈ ರೀತಿ...

ಪೆಟ್ರೋಲ್ ಪಂಪ್ ಗಳಲ್ಲಿ ಈ ರೀತಿ ನಿಮ್ಮನ್ನು ವಂಚಿಸುತ್ತಾರೆ , ಜೋಕೆ !

ಎಚ್ಚರ ತಪ್ಪಿದರೆ ನಷ್ಟ ಖಚಿತ

ವಾರ್ತಾಭಾರತಿವಾರ್ತಾಭಾರತಿ4 Nov 2016 5:15 PM IST
share
ಪೆಟ್ರೋಲ್ ಪಂಪ್ ಗಳಲ್ಲಿ ಈ ರೀತಿ ನಿಮ್ಮನ್ನು ವಂಚಿಸುತ್ತಾರೆ , ಜೋಕೆ !

ಪುಣೆ,ನ.4: ಮಂಗಳವಾರ ಪುಣೆಯ ಬಾನೇರ್ ರಸ್ತೆಯಲ್ಲಿರುವ,ಸದಾ ಗ್ರಾಹಕರಿಂದ ಗಿಜಿಗಿಡುತ್ತಿರುವ ವೌಳಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದ ಮೋಹನ ಕದಂ ತನ್ನ ಕಾರಿಗೆ 1000 ರೂ.ಗಳ ಪೆಟ್ರೋಲ್ ತುಂಬಿಸುವಂತೆ ಅಲ್ಲಿಯ ಸಿಬ್ಬಂದಿಗೆ ಸೂಚಿಸಿದ್ದರು. ಮೀಟರ್ 310 ರೂ.ತೋರಿಸುತ್ತಿದ್ದಾಗ ಆತ ಪೆಟ್ರೋಲ್ ಸುರಿಯುವುದನ್ನು ನಿಲ್ಲಿಸಿದ್ದ. ಸಾಮಾನ್ಯವಾಗಿ ಪೆಟ್ರೋಲ್ ಸುರಿಯುವುದನ್ನು ನಿಲ್ಲಿಸಿದಾಗ ಗ್ರಾಹಕರು ತಮ್ಮ ವಾಹನಗಳೊಂದಿಗೆ ಅಲ್ಲಿಂದ ನಿರ್ಗಮಿಸುತ್ತಾರೆ. ಮೀಟರ್ ನೋಡುವ ಗೋಜಿಗೆ ಹೋಗುವುದಿಲ್ಲ. ಆದರೆ ಕದಂ ಮೀಟರ್ ನೋಡಿದ್ದು, ಅದು 310 ರೂ.ಗೇ ನಿಂತಿದ್ದನ್ನು ಬೆಟ್ಟು ಮಾಡಿದ್ದರು. ಸಿಬ್ಬಂದಿ ಮತ್ತೆ ಪೆಟ್ರೋಲ್ ಸುರಿಯಲು ಆರಂಭಿಸಿದನಾದರೂ 690 ರೂ.ಗೆ ನಿಲ್ಲಿಸಿಬಿಟ್ಟಿದ್ದ. ಆಗ ಸುರಿದಿದ್ದು 310 ರೂ.ಪೆಟ್ರೋಲ್,ಈಗ ಸುರಿದಿದ್ದು 690 ರೂ.ಪೆಟ್ರೋಲ್....ಅಲ್ಲಿಗೆ 1000 ರೂ.ಸರಿಯಾಗಿದೆ ಎಂದು ಬಿಂಬಿಸುವ ಮೂಲಕ ಕದಂ ಕಿವಿಯ ಮೇಲೆ ಹೂವಿಡಲು ಪ್ರಯತ್ನಿಸಿದ್ದ.

ತನಗೆ ಟೋಪಿ ಹಾಕಲಾಗುತ್ತಿದೆ ಎನ್ನುವುದು ಗೊತ್ತಾದಾಗ ಕದಂ ಏರುಧ್ವನಿಯಲ್ಲಿ ಮಾತನಾಡಿದ್ದರು. ಅಲ್ಲಿಗೆ ಕೊರತೆಯಾಗಿದ್ದ 390 ರೂ.ವೌಲ್ಯದ ಪೆಟ್ರೋಲ್ ತುಂಬಿಸುವುದು ಸಿಬ್ಬಂದಿಗೆ ಅನಿವಾರ್ಯವಾಗಿತ್ತು. ಕದಂ ಸರಿಯಾದ ಸಮಯದಲ್ಲಿ ಈ ವಂಚನೆಯನ್ನು ಪತ್ತೆಹಚ್ಚಿದ್ದರು. ಕಳೆದೆರಡು ದಿನಗಳಲ್ಲಿ ಬಿಪಿಸಿಎಲ್‌ನ ಫ್ರಾಂಚೈಸಿಯಾಗಿರುವ ಈ ಪಂಪ್‌ನ ಹಲವಾರು ಗ್ರಾಹಕರು ಇಂತಹ ಕಡಿಮೆ ಪೂರೈಕೆಯ ಪ್ರಕರಣಗಳನ್ನು ಬೆಳಕಿಗೆ ತಂದಿದ್ದಾರೆ.

ವೌಳಿ ಪಂಪ್ ಈ ಪ್ರದೇಶದಲ್ಲಿಯ ಅತ್ಯಂತ ದೊಡ್ಡ ಪೆಟ್ರೋಲ್ ಪಂಪ್‌ಗಳಲ್ಲೊಂದಾಗಿದೆ. ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ದಿನನಿತ್ಯ ಸಾವಿರಾರು ವಾಹನಗಳು ಇಲ್ಲಿಗೆ ಬರುತ್ತವೆ.

ಹೆಚ್ಚಿನ ಪ್ರಕರಣಗಳಲ್ಲಿ ವಂಚನಾ ವಿಧಾನ ಅತ್ಯಂತ ಸರಳ ಮತ್ತು ಒಂದೇ ರೀತಿಯಾಗಿದೆ. ಸಿಬ್ಬಂದಿಗಳು ಗ್ರಾಹಕರು ತಿಳಿಸಿದಷ್ಟು ಇಂಧನವನ್ನು ಸುರಿಯದೆ ಅವರನ್ನು ಸಾಗಹಾಕುತ್ತಾರೆ ಮತ್ತು ಇದು ಗ್ರಾಹಕರಿಗೆ ಗೊತ್ತೂ ಆಗುವುದಿಲ್ಲ. ಪ್ರಶ್ನಿಸಿದಾಗ ಮತ್ತೆ ಇಂಧನ ಸುರಿಯಲು ಆರಂಭಿಸುತ್ತಾರೆ,ಆದರೆ ಮೀಟರ್‌ನ್ನು ಝೀರೊ ಮಾಡಿರುವುದಿಲ್ಲ. ಹೀಗಾಗಿ ಗ್ರಾಹಕರು ಸಾಕಷ್ಟು ಇಂಧನದ ಜೊತೆಗೆ ಹಣವನ್ನೂ ಕಳೆದುಕೊಳ್ಳುತ್ತಾರೆ.

ಇಂತಹ ಎಲ್ಲ ಪ್ರಕರಣಗಳಲ್ಲಿ ಈ ಸಿಬ್ಬಂದಿಗಳು ಆಟೋಮ್ಯಾಟಿಕ್ ಆಗಿ ಮುದ್ರಿತ ಬಿಲ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಬೂಬು ನೀಡುತ್ತಾರೆ. ಏಕೆಂದರೆ ಇಂತಹ ಬಿಲ್ ವಂಚನೆಯನ್ನು ಬಹಿರಂಗಗೊಳಿಸುತ್ತದೆ. ಗ್ರಾಹಕ ಒತ್ತಾಯಿಸಿದರೆ ಕೈಯಿಂದ ಬರೆದ ಕ್ಯಾಷ್‌ಮೆಮೊ ನೀಡಿ ಸಾಗಹಾಕುತ್ತಾರೆ.

ಕದಂ ಈ ಮೋಸದ ಬಗ್ಗೆ ಬಿಪಿಸಿಎಲ್‌ನ ವೆಬ್‌ಸೈಟ್‌ನಲ್ಲಿ ದೂರು ಸಲ್ಲಿಸಿದ್ದು, ಕ್ರಮವನ್ನು ಕೈಗೊಳ್ಳುವ ಭರವಸೆಯನ್ನು ಅವರಿಗೆ ನೀಡಲಾಗಿದೆ.

 ಇಂತಹ ವಂಚನೆಗಳು ನಡೆಯುತ್ತಿರುವುದು ನಮಗೆ ಗೊತ್ತಿದೆ. ಗ್ರಾಹಕರು ದೂರಿಕೊಂಡಾಗಲೆಲ್ಲ ಅವರಿಗೆ ಪೂರ್ಣ ಮೊತ್ತದ ಇಂಧನ ದೊರೆಯುವಂತೆ ನಾವು ನೋಡಿಕೊಳ್ಳುತ್ತಿದ್ದೇವೆ. ಹಲವಾರು ಬಾರಿ ನಮ್ಮ ಸಿಬ್ಬಂದಿಗಳನ್ನು ದಂಡಿಸಿದ್ದೇವೆ. ಎಷ್ಟೋ ಜನರನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಪಂಪ್‌ನ ಮಾಲಕ ಸಂಜಯ ಮುರ್ಕುಟೆ ಸಮಜಾಯಿಷಿ ನೀಡಿದ್ದಾರೆ.

ಇಂತಹ ವಂಚನೆಗಳ ಕುರಿತು ನಮಗೆ ದೂರು ಸಲ್ಲಿಸಿದರೆ ತಕ್ಷಣ ಕ್ರಮ ಕೈಗೊಂಡು ಗ್ರಾಹಕರಿಗೆ ನ್ಯಾಯ ಒದಗಿಸುತ್ತಿದ್ದೇವೆ. ವಂಚನೆಗೊಳಗಾದಾಗ ಗ್ರಾಹಕರು ಸುಮ್ಮನಿರದೆ ನಮಗೆ ದೂರು ಸಲ್ಲಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಬಿಪಿಸಿಎಲ್‌ನ ಹಿರಿಯ ಮಾರಾಟ ಅಧಿಕಾರಿಯೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X