Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಿವಾಸಿ ಭಾರತೀಯರನ್ನು ಮತದಾನಕ್ಕೆ...

ಅನಿವಾಸಿ ಭಾರತೀಯರನ್ನು ಮತದಾನಕ್ಕೆ ಉತ್ತೇಜಿಸಲು ಚುನಾವಣಾ ಆಯೋಗದಿಂದ ಕ್ರಮ

ವಾರ್ತಾಭಾರತಿವಾರ್ತಾಭಾರತಿ4 Nov 2016 8:23 PM IST
share
ಅನಿವಾಸಿ ಭಾರತೀಯರನ್ನು ಮತದಾನಕ್ಕೆ ಉತ್ತೇಜಿಸಲು ಚುನಾವಣಾ ಆಯೋಗದಿಂದ ಕ್ರಮ

ಹೊಸದಿಲ್ಲಿ, ನ.4: ವಿಶ್ವಾದ್ಯಂತವಿರುವ ಸುಮಾರು 1.14 ಕೋಟಿ ಅನಿವಾಸಿ ಭಾರತೀಯರಲ್ಲಿ ಕೇವಲ 16 ಸಾವಿರ ಜನರಷ್ಟೇ ದೇಶದಲ್ಲಿ ‘ಸಾಗರೋತ್ತರ ಭಾರತೀಯ ಮತದಾರರು’ ಎಂದು ನೋಂದಾಯಿಕೊಂಡಿದ್ದಾರೆ.

ಇನ್ನಷ್ಟು ಅರ್ಹ ಸಾಗರೋತ್ತರ ಭಾರತೀಯರನ್ನು ದೇಶದಲ್ಲಿ ಮತದಾರರೆಂದು ನೋಂದಾಯಿಸಿಕೊಳ್ಳುವಂತೆ ಮಾಡಲು ಚುನಾವಣಾ ಆಯೋಗವೀಗ ಅವರನ್ನು ತಲುಪಲಾರಂಭಿಸಿದೆ.

ತನ್ನ ತಲುಪುವಿಕೆ ಕಾರ್ಯಕ್ರಮದ ಭಾಗವಾಗಿ, ಅನಿವಾಸಿ ಭಾರತೀಯರಲ್ಲಿ ನೋಂದಣಿ ಹಾಗೂ ಮತದಾನದ ಕುರಿತಾಗಿರುವ ಜಾಗೃತಿಯನ್ನು ಅಂದಾಜಿಸಲು ಮತ್ತು ಅವರು ಆಯ್ಕೆ ಮಾಡುವ ಮತದಾನದ ವಿಧಾನದ ಬಗ್ಗೆ ತಿಳಿಯಲು ಆಯೋಗವು ಸಾಗರೋತ್ತರ ಭಾರತೀಯೆ ಆನ್‌ಲೈನ್ ಸಮೀಕ್ಷೆಯೊಂದನ್ನು ಆರಂಭಿಸಿದೆ.

ಈ ಸಮೀಕ್ಷೆಯು ಕೇವಲ ಮಾಹಿತಿಯ ಕಂದರವನ್ನು ಗುರುತಿಸಲು ಮಾತ್ರವಲ್ಲದೆ ಇಚ್ಛಿಸುವ ಮತದಾನ ಪದ್ಧತಿಯ ಕುರಿತಾಗಿ ತಿಳಿಯಲು ಸಹ ಆಯೋಗಕ್ಕೆ ಸಹಾಯ ಮಾಡಲಿದೆ. ಅದನ್ನು ಸರಕಾರ ಹಾಗೂ ಸಂಸತ್ತಿನೊಂದಿಗೆ ಹಂಚಿಕೊಳ್ಳಬಹುದೆನ್ನುವುದು ಅದರ ಅಭಿಪ್ರಾಯವಾಗಿದೆ.

ಗುರಿಯಿರಿಸಿರುವ ಜನರೊಂದಿಗೆ ತೊಡಗಿಸಿಕೊಳ್ಳುವ ಕಾರ್ಯಕ್ರಮದ ಭಾಗವಾಗಿ ಒಂದು ಆನ್‌ಲೈನ್ ಸ್ಪರ್ಧೆಯೂ ಇರುತ್ತದೆ.
ಸಮೀಕ್ಷೆಯು ನವೆಂಬರ್-ಡಿಸೆಂಬರ್‌ನಲ್ಲಿ ನಡೆದರೆ, ಆನ್‌ಲೈನ್ ಸ್ಪರ್ಧಿಯು ತಿಂಗಳ ಕೊನೆಗೆ ಮುಕ್ತಾಯಗೊಳ್ಳಲಿದೆ.

ಸಾಗರೋತ್ತರ ನಾಗರಿಕರು ಎದುರಿಸಬಹುದಾದ ಸವಾಲುಗಳನ್ನು ವ್ಯವಸ್ಥಿತವಾಗಿ ನಿವಾರಿಸಲು ಚುನಾವಣಾ ಆಯೋಗ ಬಯಸಿದೆ. ಅದಕ್ಕಾಗಿ ಆನ್‌ಲೈನ್ ಸಮೀಕ್ಷೆ ನಡೆಸಲಾಗುತ್ತಿದೆ. ಅದರಂತೆ ಮಧ್ಯಪ್ರವೇಶವನ್ನು ವಿನ್ಯಾಸಗೊಳಿಸಲು ಸಾಧ್ಯವಾಗಲಿದೆಯೆಂದು ಮುಖ್ಯ ಚುನಾವಣಾಯುಕ್ತ ನಸೀಂ ಝೈದಿ ಹೇಳಿದ್ದಾರೆ.

‘‘ನಿಮ್ಮ ಧ್ವನಿ ಕೇಳಿಸಲಿ. ನಿಮ್ಮ ಸೃಜನ ಶೀಲತೆಯನ್ನು ಅಭಿವ್ಯಕ್ತಿಸಿರಿ. ಕನಸುಗಳನ್ನು ಸಹ ನಾಗರಿಕರೊಂದಿಗೆ ಹಂಚಿಕೊಳ್ಳಿರಿ’’ ಎಂದು ಅವರು ಕರೆ ನೀಡಿದ್ದಾರೆ.
ವಿದೇಶಗಳಲ್ಲಿರುವ ಭಾರತೀಯ ನಾಗರಿಕರಿಗೆ ಪಾಸ್‌ಪೋರ್ಟ್‌ನಲ್ಲಿ ನಮೂದಿಸಲಾಗಿರುವ ಅವರ ಕ್ಷೇತ್ರದ ಮತದಾರರೆಂದು ನೋಂದಾಯಿಸಲು ಅನುಕೂಲವಾಗುವಂತೆ 1,950 ಜನ ಪ್ರಾತಿನಿಧ್ಯ ಕಾಯ್ದೆಗೆ 2013ರಲ್ಲಿ ತಿದ್ದುಪಡಿ ತರಲಾಗಿದೆ. ಆದರೆ, ಮತದಾನಕ್ಕಾಗಿ ಭಾರತಕ್ಕೆ ಬರುವುದು ಹಲವರಿಗೆ ಕಷ್ಟವೆನಿಸಿದೆ.

ಸಶಸ್ತ್ರ ಸೇನೆ ಹಾಗೂ ಕೇಂದ್ರೀಯ ಪೊಲೀಸ್ ಸಂಘಟನೆಗಳ ಸಿಬ್ಬಂದಿಯ ಅಂಚೆ ಮತಗಳನ್ನು ವಿದ್ಯುನ್ಮಾನ ಮಾಧ್ಯಮದ ಮೂಲಕ ಪಡೆಯಲು ಸರಕಾರ ಕಳೆದ ತಿಂಗಳಷ್ಟೇ ಅನುಮತಿ ನೀಡಿದೆ. ಆದರೆ, ಅನಿವಾಸಿ ಭಾರತೀಯ ಮತದಾರರಿಗಾಗಿ ಇನ್ನಷ್ಟೇ ಆ ಅನುಕೂಲ ಕಲ್ಪಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X