Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಸೆಂಬರ್ ಅಂತ್ಯದೊಳಗೆ ಎಲ್ಲ ರಸ್ತೆಗಳ...

ಡಿಸೆಂಬರ್ ಅಂತ್ಯದೊಳಗೆ ಎಲ್ಲ ರಸ್ತೆಗಳ ಹೊಂಡ ಮುಚ್ಚಿ: ಸಚಿವ ಪ್ರಮೋದ್ ಮಧ್ವರಾಜ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Nov 2016 9:35 PM IST
share
ಡಿಸೆಂಬರ್ ಅಂತ್ಯದೊಳಗೆ ಎಲ್ಲ ರಸ್ತೆಗಳ ಹೊಂಡ ಮುಚ್ಚಿ: ಸಚಿವ ಪ್ರಮೋದ್ ಮಧ್ವರಾಜ್ ಸೂಚನೆ

ಉಡುಪಿ, ನ.4: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ಜಿಪಂ, ಲೋಕೋಪಯೋಗಿ ಹಾಗೂ ನಗರಸಭೆಯ ರಸ್ತೆಗಳ ಹೊಂಡ ಮುಚ್ಚುವ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸಂಬಂಧಪಟ್ಟ ಇಲಾಖೆಗಳ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ.

ಉಡುಪಿ ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಇಂಜಿನಿಯರ್ಸ್‌ಗಳ ಸಭೆಯಲ್ಲಿ ಅವರು ಮಾತನಾಡುತಿದ್ದರು. ಜಿಲ್ಲಾ ಪಂಚಾ ಯತ್ ರಸ್ತೆಯ ಹೊಂಡಗಳನ್ನು ಡಿ.15ರೊಳಗೆ, ನಗರಸಭೆ ಡಿ.31ರೊಳಗೆ, ಮೀನುಗಾರಿಕಾ ರಸ್ತೆಯನ್ನು ಒಂದು ವಾರದೊಳಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಹೊಂಡ ಮುಚ್ಚುವ ಕೆಲಸವನ್ನು ನವೆಂಬರ್ ಅಂತ್ಯದೊಳಗೆ ನಡೆಸುವುದಾಗಿ ಇಂಜಿನಿಯರ್‌ಗಳು ಸಭೆಗೆ ತಿಳಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2013-14ರಿಂದ 2016-17 ರವರೆಗೆ ರಸ್ತೆ, ಸೇತುವೆ ಸೇರಿದಂತೆ ಒಟ್ಟು 438.76 ಕೋಟಿ ಮೊತ್ತದ 4014 ಕಾಮಗಾರಿಗಳು ಮಂಜೂರಾಗಿದ್ದು, ಅದರಲ್ಲಿ 297.11ಕೋಟಿ ರೂ. ಮೊತ್ತದ 2793 ಕಾಮ ಗಾರಿಗಳು ಪೂರ್ಣಗೊಂಡಿವೆ. 47.65ಕೋಟಿ ರೂ. ಮೊತ್ತದ 459 ಕಾಮಗಾರಿಗಳು ಪ್ರಗತಿಯಲ್ಲಿದ್ದು, 93.99ಕೋಟಿ ಮೊತ್ತದ 762 ಕಾಮಗಾರಿಗಳು ಬಾಕಿ ಇವೆ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.

ಮರಳು ಸರಬರಾಜು

ಇದೀಗ ನಾನ್‌ಸಿಆರ್‌ಝೆಡ್ ಪ್ರದೇಶದಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದ್ದು, ಅಗತ್ಯ ಇರುವ ಇಲಾಖೆಗಳ ಕಾಮಗಾರಿ ಗಳಿಗೆ ಮರಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಲೋಕೋಪ ಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಶೇಖರ್ ಸಭೆಗೆ ತಿಳಿಸಿದರು.

5,720ರೂ. ಮೊತ್ತದ ಡಿಡಿ ನೀಡಿದರೆ ಒಂದು ಲೋಡ್ ಮರಳನ್ನು ನೀಡ ಲಾಗುತ್ತಿದೆ. ಜನಸಾಮಾನ್ಯರಿಗೆ ಮರಳು ಸರಬರಾಜು ಮಾಡಲಾಗುತ್ತಿದೆ. ಈಗಾಗಲೇ 43ಡಿಡಿಗಳು ಬಂದಿವೆ ಎಂದರು. ಬಲ್ಕ್ ಬುಕ್ಕಿಂಗ್ ಮಾಡುವ ವರಿಗೆ ಮರಳನ್ನು ನೀಡಬೇಡಿ ಮತ್ತು ಯಾರು ಕೂಡ ಮರಳನ್ನು ಸಂಗ್ರಹಿಸಿ ಇಡದಂತೆ ನೋಡಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ 51.88ಕೋಟಿ ರೂ. ಮೊತ್ತದ 81 ಕಾಮಗಾರಿಗಳು ಪೂರ್ಣಗೊಂಡಿದ್ದು, ನೀಲಾವರ ಮತ್ತು ಕೂರಾಡಿ ಸೇತುವೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಚಂದ್ರಶೇಖರ್ ಮಾಹಿತಿ ನೀಡಿದರು.

ಕಳೆದ ಮೂರು ವರ್ಷಗಳಲ್ಲಿ ನಿರ್ಮಿತಿ ಕೇಂದ್ರದಿಂದ 23.42ಕೋಟಿ ರೂ. ಮೊತ್ತದ 202ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 7ಕೋಟಿ ರೂ. ಮೊತ್ತದ 18 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರದ ಇಂಜಿನಿಯರ್ ಮಾಹಿತಿ ನೀಡಿದರು.

ಮೀನು ಮಾರುಕಟ್ಟೆ ಸಿದ್ಧ 

ಉಡುಪಿ ನಗರದ ಮೀನು ಮಾರುಕಟ್ಟೆ ಕಾಮಗಾರಿಗಳು ಪೂರ್ಣಗೊಂಡಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಉದ್ಘಾಟನೆಗೆ ಸಮಯ ನೀಡುವಂತೆ ಅಧಿಕಾರಿಗಳು ಸಚಿವರಲ್ಲಿ ಕೇಳಿಕೊಂಡರು. ಸಮುದ್ರ ಕೊರತೆದ ತಡೆಗೋಡೆ ನಿರ್ಮಿಸುವ 12 ಕಾಮಗಾರಿ ಗಳಲ್ಲಿ 11 ಪೂರ್ಣಗೊಂಡಿದೆ. ಮಲ್ಪೆ ಬಂದರು ಮೂರನೆ ಹಂತದ ಕಾಮಗಾರಿಗೆ ಕೇಂದ್ರ ಸರಕಾರದಿಂದ ಎಂಟು ಕೋಟಿ ರೂ. ಬರಲು ಬಾಕಿ ಇದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಡೆಲ್ಟಾ ಯೋಜನೆಯಲ್ಲಿ ಉಡುಪಿ ಬಸ್ ನಿಲ್ದಾಣಕ್ಕೆ 6.61ಕೋಟಿ ರೂ. ಹಾಗೂ ಮಣಿಪಾಲ ಬಸ್ ನಿಲ್ದಾಣಕ್ಕೆ 2.61ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮಲ್ಪೆ ಸಿಟಿಜನ್ ಸರ್ಕಲ್‌ನಿಂದ ಸಚಿವರ ಮನೆವರೆಗಿನ ರಸ್ತೆಯನ್ನು ಚತುಷ್ಪಥ ಗೊಳಿಸುವ ಕಾಮಗಾರಿಗೆ 5ಕೋಟಿ ರೂ. ಮತ್ತು ಮಿಷನ್ ಕಂಪೌಂಡ್‌ನಿಂದ ಕೊರಂಗ್ರಪಾಡಿವರೆಗಿನ ರಸ್ತೆ ಅಭಿವೃದ್ಧಿಗೆ 7.9ಕೋಟಿ ರೂ. ಮೊತ್ತವನ್ನು ಅಂದಾಜಿಸಲಾಗಿದೆ ಎಂದು ನಗರ ಸಭೆ ಇಂಜಿನಿಯರ್ ತಿಳಿಸಿದರು.

ಮಲ್ಪೆಯಿಂದ ಪರ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲು ಈಗಾಗಲೇ 114ಕೋಟಿ ರೂ. ಮೊತ್ತದ ಯೋಜನೆಯನ್ನು ತಯಾರಿಸಿ 15ದಿನಗಳೊಳಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಇಲಾಖೆಯ ಇಂಜಿನಿಯರ್ ತಿಳಿಸಿದರು. ಈ ಯೋಜನೆಯಲ್ಲಿ ಮಣಿಪಾಲ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟಿಕರಣಗೊಳಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಪಂಚಾಯತ್‌ರಾಜ್ ಇಂಜಿನಿಯರ್ ವಿಭಾಗದ ಕಾರ್ಯನಿ ರ್ವಾಹಕ ಅಭಿಯಂತರ ವಿ.ರಾಜ, ಸಣ್ಣ ನೀರಾವರಿ ವಿಭಾಗದ ಕಾರ್ಯನಿ ರ್ವಾಹಕ ಅಭಿಯಂತರ ಎಂ.ವಿ.ಪ್ರಕಾಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಶರಣ ಬಸಪ್ಪ, ಪೌರಾಯುಕ್ತ ಡಿ.ಮಂಜುನಾಥಯ್ಯ ಉಪಸ್ಥಿತರಿದ್ದರು.

ಬೋರ್ಡ್‌ನಲ್ಲಿ ಹೆಸರು ಹಾಕಲು ತಾಕೀತು

‘ನಾನು ಇತರ ಇಲಾಖೆಯ ಸಚಿವರು, ಅಧಿಕಾರಿಗಳಲ್ಲಿ ಕಾಡಿಬೇಡಿ ಮಂಜೂರು ಮಾಡಿಸಿ ಹಣ ಬಿಡುಗಡೆಗೊಳಿಸಿದ ಕಾಮಗಾರಿಗಳಲ್ಲಿ ಬೋರ್ಡ್ ನಿರ್ಮಿಸಿ ನನ್ನ ಹೆಸರು ಹಾಕಬೇಕು’ ಎಂದು ಸಚಿವ ಪ್ರಮೋದ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕೆಲವು ಕಾಮಗಾರಿಗಳಿಗೆ ಬೋರ್ಡ್ ಹಾಕದ ಆಯಾ ಇಲಾಖೆಯ ಇಂಜಿನಿಯರ್‌ಗಳನ್ನು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು. ಒಂದು ವಾರದೊಳಗೆ ಪೂರ್ಣಗೊಂಡ ಕಾಮಗಾರಿಯಲ್ಲಿ ಬೋರ್ಡ್ ನಿರ್ಮಿಸಿ ನನ್ನ ಹೆಸರು ಹಾಕುವಂತೆ ಸೂಚನೆ ನೀಡಿದ ಅವರು, ಸದ್ಯವೇ ಕಾಮಗಾರಿ ಹಾಗೂ ಬೋರ್ಡ್ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X