Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿಲ್ಲೆಯ 77 ಎಪಿಎಂಸಿ...

ಶಿವಮೊಗ್ಗ ಜಿಲ್ಲೆಯ 77 ಎಪಿಎಂಸಿ ಸ್ಥಾನಗಳಿಗೆ ನ.27ರಂದು ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ4 Nov 2016 10:28 PM IST
share
ಶಿವಮೊಗ್ಗ ಜಿಲ್ಲೆಯ 77 ಎಪಿಎಂಸಿ ಸ್ಥಾನಗಳಿಗೆ  ನ.27ರಂದು ಚುನಾವಣೆ

ಶಿವಮೊಗ್ಗ, ನ.4: ಜಿಲ್ಲೆಯ ಏಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 77 ಸ್ಥಾನಗಳಿಗೆ ನ.27ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಈಗಾಗಲೇ ಜಿಲ್ಲಾ ಚುನಾವಣಾಧಿ ಕಾರಿಯಾಗಿರುವ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಅಧಿಸೂಚನೆ ಹೊರಡಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ತೀರ್ಥಹಳ್ಳಿ, ಸೊರಬ, ಹೊಸನಗರ ಎಪಿಎಂಸಿಗಳಿಗೆ ಚುನಾವಣೆ ನಡೆಯ ಲಿದೆ. ಈ ಎಲ್ಲ ಎಪಿಎಂಸಿಗಳಲ್ಲಿ ತಲಾ 11 ಸ್ಥಾನಗಳು ಇವೆ. ಅವುಗಳನ್ನು ಮೀಸಲಾತಿ ಅನ್ವಯ ಸಾಮಾನ್ಯ ಮಹಿಳೆ, ಎಸ್ಸಿ, ಎಸ್ಟಿ, ಬಿಸಿಎ ಮತ್ತು ಬಿಸಿಬಿ ವರ್ಗಕ್ಕೆ ಮೀಸಲಿಡಲಾಗಿದೆ. ಪ್ರತೀ ಎಪಿಎಂಸಿಯಲ್ಲಿ ಇಬ್ಬರು ಮಹಿಳಾ ಸದಸ್ಯರು ಕಡ್ಡಾಯವಾಗಿ ಇರತಕ್ಕದ್ದು ಎಂದು ಈ ಬಾರಿ ಸೂಚಿಸಲಾಗಿದೆ. ಈ ಕ್ಷೇತ್ರಗಳು ಕೃಷಿಕರ ವಲಯದಿಂದ ಮತ ಚಲಾ ಯಿಸಲ್ಪಡುವಂತಹವು. ಇದರ ಹೊರತಾಗಿ ಚಿಲ್ಲರೆ ವ್ಯಾಪಾರಿಗಳಾಗಿದ್ದರೆ, ಕಮಿಷನ್ ಏಜೆಂಟರು ಮತ್ತು ವ್ಯಾಪಾರಿಗಳು ಚುನಾಯಿಸಿದ ಒಬ್ಬ ಸದಸ್ಯ, ಎಪಿಎಂಸಿ ಮಾರುಕಟ್ಟೆ ಪ್ರದೇಶದೊಳಗೆ ವ್ಯವಹಾರ ನಡೆಸುವ ಸಂಘಗಳ ಪ್ರತಿನಿಧಿಯೊಬ್ಬ ಅಂತಹ ಸಂಘಗಳ ಆಡಳಿತ ಸಮಿತಿಗಳಿಂದ ಚುನಾಯಿಸಲ್ಪಡಬೇಕು. ಮಾರುಕಟ್ಟೆ ಪ್ರದೇಶದೊಳಗೆ ಅಧಿಸೂಚಿತ ಕೃಷಿ ಉತ್ಪನ್ನ ವ್ಯವಹಾರ ನಡೆಸುವ ಕೃಷಿ ಸಹಕಾರಿ ಸಂಸ್ಕರಣ ಸಂಘಗಳ ಪ್ರತಿನಿಧಿಯಾಗಿರುವ ಸಂಘಗಳ ಆಡಳಿತ ಸಮಿತಿಗಳಿಂದ ಚುನಾಯಿತನಾದ ಒಬ್ಬ ಸದಸ್ಯ ಇದರಲ್ಲಿ ಇರುತ್ತಾರೆ.

ಚುನಾವಣೆಗೆ ಆಯಾಯ ತಾಲೂಕಿನ ತಹಶೀಲ್ದಾರ್‌ಗ ಳ ನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಿಸ ಲಾಗಿದೆ. ತಹಶೀಲ್ದಾರ್ ಗ್ರೇಡ್-2 ಸಹಾಯಕ ಚುನಾವ ಣಾಧಿಕಾರಿ ಯಾಗಿರುತ್ತಾರೆ. ನೋಡಲ್ ಅಧಿಕಾರಿಗಳನ್ನಾಗಿ ಆಯಾಯ ಉಪವಿಭಾಗಗಳ ಉಪವಿಭಾಗಾಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2,53,036 ಮತದಾರರು ಇದ್ದು, ಈ ಪೈಕಿ ಶಿಕಾರಿಪುರದಲ್ಲಿ ಅತ್ಯಧಿಕ ಎಂದರೆ 46,217 ಮತದಾರರು, ಹೊಸನಗರದಲ್ಲಿ ಅತಿಕಡಿಮೆ ಎಂದರೆ 19,425, ಸೊರಬ 42,073, ಸಾಗರ 31,657, ತೀರ್ಥಹಳ್ಳಿ 28,577, ಭದ್ರಾವತಿ 42,487 ಮತ್ತು ಶಿವಮೊಗ್ಗ 42,600 ಮತದಾರರು ಇದ್ದಾರೆ.

ಜಿಲ್ಲೆಯಲ್ಲಿ ಒಟ್ಟು 395 ಮತಗಟ್ಟೆಗಳನ್ನು ತೆರೆಯಲಾಗಿದೆ. ಶಿವಮೊಗ್ಗದಲ್ಲಿ 50, ಭದ್ರಾವತಿಯಲ್ಲಿ 68, ತೀರ್ಥಹಳ್ಳಿಯಲ್ಲಿ 51, ಸಾಗರದಲ್ಲಿ 60, ಹೊಸನಗರದಲ್ಲಿ 30, ಸೊರಬದಲ್ಲಿ 79, ಶಿಕಾರಿಪುರದಲ್ಲಿ 57 ಮತಗಟ್ಟೆಗಳು ಇವೆ. ಚುನಾವಣೆಗೆ ಒಟ್ಟು 435 ಮತಪೆಟ್ಟಿಗಳನ್ನು ಬಳಸಲಾಗುವುದು. ಸುಮಾರು 22 ಬಸ್, 69 ಜೀಪ್ ಬೇಕಾಗಬಹುದು ಎಂದು ನಿರ್ಧರಿಸಲಾಗಿದೆ. 1,740 ಮತಗಟ್ಟೆ ಸಿಬ್ಬಂದಿ ಈ ಚುನಾವಣೆಯಲ್ಲಿ ಕೆಲಸ ನಿರ್ವಹಿಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X