Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಸಿಯುತ್ತಿದೆ ಅಂತರ್ಜಲ ಮಟ್ಟ

ಕುಸಿಯುತ್ತಿದೆ ಅಂತರ್ಜಲ ಮಟ್ಟ

ಮಲೆನಾಡಿನಲ್ಲಿ ಬಿರು ಬಿಸಿಲು

ಬಿ.ರೇಣುಕೇಶ್ಬಿ.ರೇಣುಕೇಶ್4 Nov 2016 10:31 PM IST
share
ಕುಸಿಯುತ್ತಿದೆ ಅಂತರ್ಜಲ ಮಟ್ಟ

ಶಿವಮೊಗ್ಗ, ನ.4: ಸರ್ವೇ ಸಾಮಾನ್ಯವಾಗಿ ಮಲೆನಾಡು ಪ್ರದೇಶದಲ್ಲಿ ಎಪ್ರಿಲ್, ಮೇ ತಿಂಗಳಲ್ಲಿ ಬೇಸಿಗೆಯ ಬಿರು ಬಿಸಿಲು ಕಂಡುಬರುತ್ತದೆ. ತಾಪಮಾನದ ಪ್ರಮಾಣ 35 ರಿಂದ 40 ಡಿಗ್ರಿಯವರೆಗೂ ದಾಖಲಾಗುತ್ತದೆ. ಆದರೆ ಪ್ರಸ್ತುತ ವರ್ಷ ಚಳಿಗಾಲದ ಪ್ರಾರಂಭದ ಹಂತದಲ್ಲಿಯೇ ತೀವ್ರ ಬಿಸಿಲ ಝಳಕ್ಕೆ ಮಲೆನಾಡು ತುತ್ತಾಗುತ್ತಿದ್ದು, ಇದು ನಾಗರಿಕರಲ್ಲಿ ತಳಮಳ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ಒಂದೆಡೆ ಮುಂಗಾರು ಮಳೆ ಕೈಕೊಟ್ಟ ಪರಿಣಾಮದಿಂದ ಪ್ರಮುಖ ಜಲಾಶಯ, ಕೆರೆಕಟ್ಟೆ, ಹಳ್ಳಕೊಳ್ಳಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಮತ್ತೊಂದೆಡೆ ಅಕಾಲಿಕವಾಗಿ ತಾಪಮಾನದ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬರುತ್ತಿದೆ. ಸೂರ್ಯನ ಪ್ರಖರತೆಗೆ ಕೆರೆಕಟ್ಟೆ, ಹಳ್ಳಕೊಳ್ಳಗಳಲ್ಲಿ ಸಂಗ್ರಹವಾಗಿರುವ ನೀರು ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿದೆ. ಅಂತರ್ಜಲದ ಮಟ್ಟ ಕುಸಿಯತೊಡಗಿದೆ. ಇದರ ನೇರ ಪರಿಣಾಮ ರೈತ ಸಮುದಾಯದ ಮೇಲೆ ಬಿದ್ದಿದೆ. ನೀರಿನ ಕೊರತೆಯಿಂದ ಕಷ್ಟಪಟ್ಟು ಬೆಳೆದ ಬೆಳೆ ಒಣಗಿ ಹೋಗುವಂತಹ ದುಃಸ್ಥಿತಿ ನಿರ್ಮಾಣವಾಗಿದೆ. ಜಲಾಶಯ-ಕೆರೆಗಳಿಂದ ನೀರು ಪೂರೈಕೆ ಅಸಾಧ್ಯವಾಗಿರುವ ಕಾರಣದಿಂದ ರೈತರು ಬೋರ್‌ವೆಲ್, ಬಾವಿ, ಹಳ್ಳಕೊಳ್ಳಗಳಿಂದ ಪಂಪ್‌ಸೆಟ್ ಮೂಲಕ ಗದ್ದೆ-ತೋಟಗಳಿಗೆ ನೀರು ಪೂರೈಕೆ ಮಾಡುತ್ತಿದ್ದರು. ಇದೀಗ ಅಂತರ್ಜಲದ ಮಟ್ಟ ಕುಸಿಯುತ್ತಿರುವುದರಿಂದ ಬೋರ್‌ವೆಲ್-ಬಾವಿಗಳಿಂದಲೂ ನೀರು ಪೂರೈಕೆ ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಏರಿಕೆ:

ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣವಾಗಿ ಕಣ್ಮರೆಯಾಗಿದ್ದು, ಅಕ್ಟೋಬರ್ ತಿಂಗಳಿನಿಂದಲೇ ಜಿಲ್ಲೆಯಾದ್ಯಂತ ತಾಪಮಾನದ ಪ್ರಮಾಣದಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ. ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ 30 ರಿಂದ 35 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ನಾಗರಿಕರು ಏದುಸಿರು ಬಿಡುವಂತಾಗಿದೆ. ಶಿವಮೊಗ್ಗ ಜಿಲ್ಲೆಯ ತಾಲೂಕು ಕೇಂದ್ರಗಳು, ಪ್ರಮುಖ ಹೋಬಳಿ ಕೇಂದ್ರಗಳಲ್ಲಿಯೂ ಬಿಸಿಲ ಹೊಡೆತ ತೀವ್ರವಾಗಿದೆ. ಹಿಂಗಾರು ಅನುಮಾನ?: ಮುಂಗಾರು ಮಳೆ ಪೂರ್ಣಗೊಂಡು ಹಿಂಗಾರು ಮಳೆಯ ಅವಧಿ ಪ್ರಾರಂಭಗೊಂಡಿದೆ. ಆದರೆ ಬಹುತೇಕ ಜಿಲ್ಲೆಯಾದ್ಯಂತ ಎಲ್ಲೆಡೆ ವಾಡಿಕೆಯ ಮಳೆಯೂ ಆಗಿಲ್ಲ. ಕೆಲವೆಡೆ ಒಂದೆರೆಡು ದಿನ ತುಂತುರು ಮಳೆ ಹೊರತುಪಡಿಸಿದರೆ ವರ್ಷಧಾರೆ ಅಕ್ಷರಶಃ ಮಾಯವಾಗಿದೆ. ಹವಾಮಾನ ಇಲಾಖೆಯ ಮೂಲಗಳು ಹೇ

ುವ ಪ್ರಕಾರ ಹಿಂಗಾರು ಮಳೆ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಬೀಳುವುದು ಅನುಮಾನವಾಗಿದೆ ಎಂದು ಹೇಳುತ್ತಿವೆ. ಒಟ್ಟಾರೆ ಮಲೆನಾಡು ಬಯಲುಸೀಮೆಯಾಗಿ ಮಾರ್ಪಡುತ್ತಿದ್ದು, ತೀವ್ರ ಸ್ವರೂಪದ ಪ್ರಾಕೃತಿಕ ವೈಪರೀತ್ಯಕ್ಕೆ ಸಾಕ್ಷಿಯಾಗುತ್ತಿದೆ. ಇದಕ್ಕೆ ಮಲೆನಾಡಿನಾದ್ಯಂತ ನಡೆಯುತ್ತಿರುವ ಮರಗಳ ಮಾರಣ ಹೋಮ, ಕಣ್ಮರೆಯಾಗುತ್ತಿರುವ ದಟ್ಟ ಅರಣ್ಯಗಳು, ಪರಿಸರ ಮಾಲಿನ್ಯ ಕಾರಣವಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಡುತ್ತಿದ್ದು, ಮುಂಬರುವ ಬೇಸಿಗೆ ಮಲೆನಾಡಿಗರ ಪಾಲಿಗೆ ಕರಾಳವಾಗಿರುವುದಂತೂ ಸತ್ಯವಾಗಿದೆ.

ಕುಡಿಯುವ ನೀರಿಗೆ ಪರಿತಪಿಸುವ ಸಿ್ಥತಿ ನಿರ್ಮಾಣ

ತಾಪಮಾನದ ದಿಢೀರ್ ಹೆಚ್ಚಳದಿಂದ ಅಂತರ್ಜಲ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಬೋರ್‌ವೆಲ್, ಕೆರೆಕಟ್ಟೆ, ಬಾವಿಗಳಲ್ಲಿ ನೀರಿನ ಕೊರತೆ ಕಂಡುಬರುತ್ತಿದೆ. ಈಗಾಗಲೇ ಜಿಲ್ಲೆಯ ನೂರಾರು

ಕೆರೆಗಳು ನೀರಿಲ್ಲದೆ ಬರಿದಾಗಿವೆ. ಇದೇ ರೀತಿ ಬಿಸಿಲ ಬೇಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಅಂತರ್ಜಲದ ಮಟ್ಟ ಇನ್ನಷ್ಟು ಕುಸಿಯಲಿದೆ. ಇಡೀ ಮಲೆನಾಡು ಕುಡಿಯುವ ನೀರಿಗೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಸೃಷ್ಟಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಈ ರೀತಿಯ ಪರಿಸ್ಥಿತಿ ಕಂಡುಬಂದಿರಲಿಲ್ಲ. ಜಿಲ್ಲೆಯ ಬಯಲು ಪ್ರದೇಶ ಮಾ

ತ್ರವಲ್ಲದೆ ದಟ್ಟ ಅರಣ್ಯ ಪ್ರದೇಶದಿಂದ ಆವೃತವಾಗಿರುವ ಮಲೆನಾಡು ಭಾಗಗಳಲ್ಲಿಯೂ ಚಳಿಗಾಲದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಇನ್ನೊಂದೆಡೆ ತಾಪಮಾನದ ಪ್ರಮಾಣ ಕೂಡ ಏರಿಕೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆ ಮಾತ್ರವಲ್ಲದೆ ಕುಡಿಯಲು ನೀರು ಪೂರೈಕೆ ಮಾಡಲು ಅಸಾಧ್ಯವಾಗುವಂತಾಗಿದೆ ಎಂದು ಜಿಲ್ಲಾ ಪಂಚಾಯತ್ ಹಿರಿಯ ಅಧಿಕಾರಿಯೋರ್ವರು ಹೇಳುತ್ತಾರೆ

share
ಬಿ.ರೇಣುಕೇಶ್
ಬಿ.ರೇಣುಕೇಶ್
Next Story
X