Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಗಡಿಯೊಳಗೆ ಚೀನಿ ಪಡೆಗಳು...

ಭಾರತದ ಗಡಿಯೊಳಗೆ ಚೀನಿ ಪಡೆಗಳು ನುಗ್ಗಿಲ್ಲ: ಚೀನಾ

ನಿಯಂತ್ರಣ ರೇಖೆಯ ಸ್ಥಿತಿಗತಿ ಬದಲಾಯಿಸುವ ಕ್ರಮಗಳು ಬೇಡ

ವಾರ್ತಾಭಾರತಿವಾರ್ತಾಭಾರತಿ4 Nov 2016 11:24 PM IST
share
ಭಾರತದ ಗಡಿಯೊಳಗೆ ಚೀನಿ ಪಡೆಗಳು ನುಗ್ಗಿಲ್ಲ: ಚೀನಾ

ಬೀಜಿಂಗ್, ನ. 4: ಕಾಲುವೆಯ ಕೆಲಸವನ್ನು ನಿಲ್ಲಿಸಲು ತನ್ನ ಪಡೆಗಳು ಲಡಾಖ್ ವಲಯದ ಡೆಮ್‌ಚೋಕ್ ಪ್ರದೇಶದಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಗ್ಗಿವೆ ಎಂಬ ವರದಿಗಳನ್ನು ಚೀನಾ ಇಂದು ನಿರಾಕರಿಸಿದೆ. ಅದೇ ವೇಳೆ, ವಾಸ್ತವಿಕ ನಿಯಂತ್ರಣ ರೇಖೆಯ ಕುರಿತ ನಿಲುವನ್ನು ‘‘ಏಕಪಕ್ಷೀಯವಾಗಿ ಬದಲಾಯಿಸಬಲ್ಲ’’ ಯಾವುದೇ ಕ್ರಮಗಳನ್ನು ಉಭಯ ದೇಶಗಳು ತೆಗೆದುಕೊಳ್ಳಬಾರದು ಎಂದು ಅದು ಹೇಳಿದೆ.

 ‘‘ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಭಾಗದಲ್ಲಿ ಚೀನಾದ ಗಡಿ ಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂಬುದಾಗಿ ನಾನು ನಿಮಗೆ ಹೇಳಬಲ್ಲೆ. ಭಾರತ-ಚೀನಾ ಗಡಿಯನ್ನು ಇನ್ನಷ್ಟೇ ಗುರುತಿಸಬೇಕಾದರೂ, ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಂಡು ಬರಲು ಉಭಯ ದೇಶಗಳು ಹಲವು ಒಪ್ಪಂದಗಳು ಮತ್ತು ಒಮ್ಮತಗಳ ಮೂಲಕ ನಿರ್ಧರಿಸಿವೆ’’ ಎಂದು ಬೀಜಿಂಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚೀನಾ ವಿದೇಶ ಸಚಿವಾಲಯದ ವಕ್ತಾರೆ ಹುವಾ ಚುನ್‌ಯಿಂಗ್ ಹೇಳಿದರು.

ಲಡಾಖ್ ವಲಯದ ಎತ್ತರದ ಶೀತಲ ಪ್ರದೇಶದಲ್ಲಿ ‘ಮನರೇಗ’ ಯೋಜನೆಯನ್ವಯ ನೀರಾವರಿ ಕಾಲುವೆಯೊಂದನ್ನು ನಿರ್ಮಿಸಲಾಗುತ್ತಿದೆ. ಅಲ್ಲಿಗೆ ಪ್ರವೇಶಿಸಿದ ಚೀನಾದ ಸೈನಿಕರು ಪೌರ ಯೋಜನೆಯನ್ನು ನಿಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಲಡಾಖ್ ವಲಯದಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಬಿಕ್ಕಟ್ಟು ನೆಲೆಸಿದೆ ಎಂದು ವರದಿಯಾಗಿದೆ.

‘‘ಈ ವಿಷಯವನ್ನು ಭಾರತೀಯ ಮಾಧ್ಯಮಗಳು ಮತ್ತೊಮ್ಮೆ ಪ್ರಸಾರ ಮಾಡಿವೆ’’ ಎಂದು ಡೆಮ್‌ಚಾಕ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಬಿಕ್ಕಟ್ಟು ನೆಲೆಸಿರುವ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದದ ಹುವಾ ನುಡಿದರು.

 ‘‘ವಾಸ್ತವಿಕ ನಿಯಂತ್ರಣ ರೇಖೆಯ ಸ್ಥಿತಿಗತಿಯನ್ನು ಬದಲಾಯಿಸಬಲ್ಲ ಯಾವುದೇ ಕ್ರಮಗಳನ್ನು ಉಭಯ ಬಣಗಳು ತೆಗೆದುಕೊಳ್ಳಬಾರದು’’ ಎಂದು ಕಾಲುವೆ ಕಾಮಗಾರಿಯನ್ನು ಗಮನದಲ್ಲಿರಿಸಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X