Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಆಂಧ್ರಪ್ರದೇಶ ರಾಜಧಾನಿಯಲ್ಲಿ...

ನೂತನ ಆಂಧ್ರಪ್ರದೇಶ ರಾಜಧಾನಿಯಲ್ಲಿ ಪ್ರತಿಯೊಂದೂ ‘ಅಮರಾವತಿ’

ವಾರ್ತಾಭಾರತಿವಾರ್ತಾಭಾರತಿ5 Nov 2016 4:50 PM IST
share
ನೂತನ ಆಂಧ್ರಪ್ರದೇಶ ರಾಜಧಾನಿಯಲ್ಲಿ ಪ್ರತಿಯೊಂದೂ ‘ಅಮರಾವತಿ’

ಅಮರಾವತಿ,ನ.5: ಇಂದಿನ ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ ನೂತನ ಉದ್ಯಮ ಸಂಸ್ಥೆಗಳಿಗೆೆ ಹೆಸರನ್ನಿಡುವ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಮರಾವತಿ ಎಲ್ಲರ ಏಕೈಕ ಆಯ್ಕೆಯಾಗಿರುವಂತಿದೆ.19 ತಿಂಗಳ ಹಿಂದೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜಧಾನಿ ನಗರಕ್ಕೆ ಅಧಿಕೃತವಾಗಿ ನಾಮಕರಣ ಮಾಡಿದಾಗಿನಿಂದ ಪ್ರತಿಯೊಬ್ಬರಿಗೂ ಸುಲಭವಾಗಿ ಹೊಳೆಯುತ್ತಿರುವ ಹೆಸರೇ ಅಮರಾವತಿ.

ಸರಕಾರಿ ಯೋಜನೆಗಳಿಂದ ಹಿಡಿದು ಹೋಟೆಲ್‌ಗಳು, ರೆಸ್ಟೋರಂಟ್‌ಗಳು, ಔಷಧಿ ಅಂಗಡಿಗಳು, ರಿಯಲ್ ಎಸ್ಟೇಟ್ ಯೋಜನೆಗಳು, ಟ್ಯಾಕ್ಸಿ ಸೇವೆ, ಸೆಕ್ಯೂರಿಟಿ ಏಜನ್ಸಿಯಿಂದ ಅಂಗಡಿ-ಮುಂಗಟ್ಟುಗಳವರೆಗೆ ಪ್ರತಿಯೊಂದೂ ಅಮರಾವತಿ ಹೆಸರನ್ನಿಟ್ಟುಕೊಂಡಿವೆ. ವಿಜಯವಾಡಾ ಮತ್ತು ಗುಂಟೂರುಗಳಲ್ಲಿ ಕಳೆದೆರಡು ತಿಂಗಳುಗಳಲ್ಲಿ ದೊಡ್ಡದು ಮತು ಸಣ್ಣದು ಸೇರಿದಂತೆ ಸುಮಾರು 200 ಅಂಗಡಿ-ಮುಂಗಟ್ಟುಗಳು ಅಮರಾವತಿ ಎಂದು ನಾಮಕರಣಗೊಂಡಿವೆ.

 ಇದು ನೂತನ ರಾಜಧಾನಿಗೆ ಬೆಂಬಲವನ್ನು ವ್ಯಕ್ತಪಡಿಸುವ ನಮ್ಮ ರೀತಿಯಾಗಿದೆ. ಜಾಗತಿಕ ಗುಣಮಟ್ಟದ ರಾಜಧಾನಿ ನಗರವೊಂದು ನಿರ್ಮಾಣಗೊಳ್ಳುತ್ತಿರುವಾಗ ಇದು ನಾವು ಮಾಡಬಹುದಾದ ಕನಿಷ್ಠ ಕಾರ್ಯವಾಗಿದೆ ಎಂದು ಗುಂಟೂರಿನ ಅಮರಾವತಿ ಚೆಸ್ ಅಕಾಡಮಿಯ ರವೀಂದ್ರ ರಾಜು ಹೇಳಿದರು.

ಕೆಲವರು ಸ್ಥಳೀಯ ಹೆಮ್ಮೆಯ ಭಾವನೆಯೊಂದಿಗೆ ತಮ್ಮ ವ್ಯವಹಾರಗಳಿಗೆ ಅಮರಾವತಿಯ ಹೆಸರನ್ನಿಟ್ಟುಕೊಂಡರೆ, ಇತರರು ಈ ಹೊಸಹುಚ್ಚಿನ ಲಾಭ ಪಡೆದು ಕೊಳ್ಳುತ್ತಿದ್ದಾರೆ. ಅಂದ ಹಾಗೆ ಈ ಪ್ರವೃತ್ತಿ ವಿಜಯವಾಡಾ ಮತ್ತು ಗುಂಟೂರು ನಗರಗಳಿಗಷ್ಟೇ ಸೀಮಿತವಾಗಿಲ್ಲ. ಮಛಲಿಪಟ್ಣಂ,ನಂದಿಗಾಮ ಮತ್ತು ಆಸುಪಾಸಿನ ಗ್ರಾಮಗಳು ಸಹ ತಮ್ಮ ಲಾಭಕ್ಕಾಗಿ ಅಮರಾವತಿ ಹೆಸರನ್ನು ಬಳಸಿಕೊಳ್ಳುತ್ತಿವೆ.

ನಾವು ಸಣ್ಣ ಪ್ರಮಾಣದಲ್ಲಿ ವ್ಯಾಪಾರವನ್ನು ಆರಂಭಿಸಿದ್ದೇವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಗ್ರಾಹಕರನ್ನು ಆಕರ್ಷಿಸುವಲ್ಲಿ ಅಮರಾವತಿ ಹೆಸರು ತುಂಬ ನೆರವಾಗುತ್ತಿದೆ ಮತ್ತು ಇದೇ ಕಾರಣಕ್ಕಾಗಿ ನಾವು ಈ ಹೆಸರನ್ನಿಟ್ಟಿದ್ದೇವೆ ಎಂದು ಮಛಲಿಪಟ್ಣಂ ಬಳಿ ಅಮರಾವತಿ ಕರಿ ಪಾಯಿಂಟ್ ನಡೆಸುತ್ತಿರುವ ಎಂ.ಸೂರ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X