Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಜಾತ ಶಿಶುವಿಗೆ ಹಾಲುಣಿಸಲು ತಡೆ ಇಬ್ಬರ...

ನವಜಾತ ಶಿಶುವಿಗೆ ಹಾಲುಣಿಸಲು ತಡೆ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Nov 2016 7:53 PM IST
share
ನವಜಾತ ಶಿಶುವಿಗೆ ಹಾಲುಣಿಸಲು ತಡೆ ಇಬ್ಬರ ಬಂಧನ

ಕೊಯಿಕ್ಕೋಡ್, ನ.5: ಮತೀಯ ಬೋಧಕನ ಸಲಹೆಯನ್ನು ನಂಬಿ ತನ್ನ ನವಜಾತ ಶಿಶುವಿಗೆ ಒಂದು ದಿನ ಮೊಲೆಹಾಲೂಡಿಸಲು ಅವಕಾಶ ನೀಡದ ವ್ಯಕ್ತಿಯೊಬ್ಬನನ್ನು ಹಾಗೂ ಬೋಧಕನನ್ನು ಮುಕ್ಕಂನಿಂದ ಬಂಧಿಸಲಾಗಿದೆ.

ಒಮಸ್ಸೇರಿಯ ಅಬೂಬಕರ್ ಸಿದ್ದೀಕಿ ಎಂಬಾತನ ಪತ್ನಿ ಬುಧವಾರ ರಾತ್ರಿ 2ರ ವೇಳೆ ಮುಕ್ಕಂನ ಇಎಂಎಸ್ ಸಹಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಮಗುವಿಗೆ ಹಾಲೂಡಿಸುವಂತೆ ಆಸ್ಪತ್ರೆಯ ಅಧಿಕಾರಿಗಳು ತಾಯಿಗೆ ಸೂಚಿಸಿದಾಗ, ಅದು ಹುಟ್ಟಿದ ಬಳಿಕ 5 ಬಾರಿ ಪ್ರಾರ್ಥನಾ ಕರೆಗಳು ಆಗದೆ ಮಗುವಿಗೆ ಮೊಲೆಯುಣಿಸಬಾರದೆಂದು ತಂದೆ ಅಬೂಬಕ್ಕರ್ ತಡೆದನು.

ವೈದ್ಯರ ಬೇಡಿಕೆಗೂ ಅತ ಜಗ್ಗದಿದ್ದುದರಿಂದ ಕೇವಲ ಮರುದಿನ ಮಧ್ಯಾಹ್ನವಷ್ಟೇ ಶಿಶುವಿಗೆ ಮೊಲೆಯುಣಿಸಲಾಯಿತು.

ಆಸ್ಪತ್ರೆಯ ನಸ್‌ೊಬ್ಬಳು ನಿನ್ನೆ ದಾಖಲಿಸಿದ ದೂರಿನ ಆಧಾರದಲ್ಲಿ ಅಬೂಬಕರ್(31) ಹಾಗೂ ಬೋಧಕ ಹೈದ್ರೋಸ್ ತಂಗಳ್(75) ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಾಲನ್ಯಾಯ ಕಾಯ್ದೆಯ ಸೆ.75 (ಶಿಶುವು ಅನಗತ್ಯವಾಗಿ ಮಾನಸಿಕ ಹಾಗೂ ಭೌತಿಕವಾಗಿ ನರಳುವಂತೆ ಮಾಡುವುದು) ಹಾಗೂ ಸೆ.87ರನ್ವಯ (ಅಪರಾಧಕ್ಕೆ ಪ್ರಚೋದನೆ) ಅವರಿಬ್ಬರನ್ನೂ ಬಂಧಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಮಕ್ಕಳ ಹಕ್ಕು ರಕ್ಷಣಾ ಆಯೋಗವು, ಮಗುವಿಗೆ ಮೊಲೆಹಾಲು ನೀಡದಂತೆ ತಡೆದ ತಂದೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠ ಹಾಗೂ ಮುಕ್ಕಂ ಪೊಲೀಸರಿಗೆ ಆದೇಶ ನೀಡಿದೆ.

ಈ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಖಂಡಿಸಿರುವ ಕೊಯಿಕ್ಕೋಡ್ ಜಿಲ್ಲಾ ಕಲೆಕ್ಟರ್, ಎನ್.ಪ್ರಶಾಂತ್, ನವಜಾತ ಶಿಶುವನ್ನು ಉಪವಾಸ ಕೆಡಹುವಂತೆ ಯಾವ ಮತವೂ ಬೋಧಿಸುವುದಿಲ್ಲ. ಇಂತಹ ಕ್ರೂರತ್ವ ತೊರಿದ ವ್ಯಕ್ತಿ ಹಾಗೂ ಆತನಿಗೆ ಪ್ರಚೋದನೆ ನೀಡಿದವರಿಗೆ ‘ಸೂಕ್ತ ಚಿಕಿತ್ಸೆ’ ಅಗತ್ಯವೆಂದು ಹೇಳಿದ್ದು, ತಂದೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X