Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್‌ಪಿಯ ಬೆಳ್ಳಿಹಬ್ಬದಲ್ಲೂ...

ಎಸ್‌ಪಿಯ ಬೆಳ್ಳಿಹಬ್ಬದಲ್ಲೂ ಅಖಿಲೇಶ-ಶಿವಪಾಲ್ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ5 Nov 2016 8:28 PM IST
share
ಎಸ್‌ಪಿಯ ಬೆಳ್ಳಿಹಬ್ಬದಲ್ಲೂ ಅಖಿಲೇಶ-ಶಿವಪಾಲ್ ವಾಕ್ಸಮರ

ಲಕ್ನೋ,ನ.5: ಗುರುವಾರವಷ್ಟೇ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದ ಸಮಾಜವಾದಿ ಪಕ್ಷದಲ್ಲಿಯ ಕಚ್ಚಾಟಕ್ಕೆ ಬಹುಶಃ ಕೊನೆಯೇ ಇಲ್ಲವೇನೋ? ಇಂದು ಇಲ್ಲಿ ನಡೆದ ಪಕ್ಷದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿಯೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ ಯಾದವ ಮತ್ತು ಅವರ ಚಿಕ್ಕಪ್ಪ, ಎಸ್‌ಪಿ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ ಅವರ ನಡುವೆ ವಾಕ್ಸಮರ ಮುಂದುವರಿದಿದ್ದು, ಅವರೊಳಗಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಬಹಿರಂಗಗೊಂಡಿದೆ.

 ಕೆಲವರು ಅದೃಷ್ಟದಿಂದ ಅಧಿಕಾರ ಪಡೆಯುತ್ತಾರೆ,ಕೆಲವರು ಪರಿಶ್ರಮದಿಂದ ಮತ್ತು ಕೆಲವರು ಪಿತ್ರಾರ್ಜಿತವಾಗಿ ಅಧಿಕಾರಕ್ಕೆ ಹಕ್ಕುದಾರರಾಗುತ್ತಾರೆ. ಆದರೆ ಕೆಲವರು ತಮ್ಮ ಬದುಕಿನುದ್ದಕ್ಕೂ ಪರಿಶ್ರಮ ಪಡುತ್ತಲೇ ಇರುತ್ತಾರೆ, ಆದರೆ ಅವರಿಗೆ ಏನೂ ದೊರೆಯುವುದಿಲ್ಲ ಎಂದು ತನ್ನ ಭಾಷಣದಲ್ಲಿ ಹೇಳಿದ ಶಿವಪಾಲ್, ಅಖಿಲೇಶ ಅವರು ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ ಅವರ ಪುತ್ರರಾಗಿದ್ದರಿಂದಲೇ ಮುಖ್ಯಮಂತ್ರಿಯ ಗದ್ದುಗೆಯನ್ನೇರಿದ್ದಾರ ಎಂದು ಪರೋಕ್ಷವಾಗಿ ಸೂಚಿಸುವ ಮೂಲಕ ಮೊದಲ ಬಾಣವನ್ನು ಬಿಟ್ಟರು.

  ತಾನು ಒಳ್ಳೆಯ ಕೆಲಸ ಮಾಡಿದ್ದೇನೆ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಅಖಿಲೇಶ ಜೊತೆ ಸಹಕರಿಸಿದ್ದೇನೆ ಎಂದು ನುಡಿದ ಅವರು, ಅಖಿಲೇಶ ತನ್ನಿಂದ ಯಾವ ತ್ಯಾಗ ಬಯಸುತ್ತಾರೋ ಅದಕ್ಕೆ ತಾನು ಸಿದ್ಧನಿದ್ದೇನೆ. ತನಗೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ. ಅಖಿಲೇಶ ತನ್ನನ್ನು ಅವಮಾನಿಸಲಿ, ಸಚಿವ ಸ್ಥಾನದಿಂದ ಎಷ್ಟು ಸಲ ಬೇಕಾದರೂ ವಜಾ ಮಾಡಲಿ...ಆದರೆ ತಾನು ಪಕ್ಷಕ್ಕಾಗಿ ತನ್ನ ರಕ್ತವನ್ನು ನೀಡಲೂ ಸಿದ್ಧನಿದ್ದೇನೆ ಎಂದು ಭಾವಪೂರ್ಣವಾಗಿ ಹೇಳಿದರು.

 ತನ್ನ ಭಾಷಣದ ಸರದಿ ಬಂದಾಗ ಶಿವಪಾಲ್‌ಗೆ ತಿರುಗೇಟು ನೀಡಲು ಕಾಯುತ್ತಿದ್ದ ಅಖಿಲೇಶ ಅಲ್ಲಿ ಉಪಸ್ಥಿತರಿದ್ದ ಸಚಿವ ಗಾಯತ್ರಿಪ್ರಸಾದ್ ಪ್ರಜಾಪತಿಯತ್ತ ಬೆಟ್ಟು ಮಾಡಿ, ನೀವು ನನಗೆ ಖಡ್ಗವನ್ನು ಕೊಟ್ಟಿದ್ದೀರಿ ಮತ್ತು ಅದನ್ನು ನಾನು ಬಳಸಬೇಕೆಂದು ನೀವು ಬಯಸುವುದಿಲ್ಲ ಎಂದರು. ಅವರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಚಿವರ ವಜಾಕ್ಕೆ ಶಿವಪಾಲ್ ಪಾಳಯದಿಂದ ಎದುರಾಗಿದ್ದ ವಿರೋಧವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದರು. ಭ್ರಷ್ಟಾಚಾರದ ಆರೋಪದಲ್ಲಿ ಪ್ರಜಾಪತಿಯವರನ್ನು ಅಖಿಲೇಶ ಹುದ್ದೆಯಿಂದ ವಜಾಗೊಳಿಸಿದ್ದರಾದರೂ ಬಳಿಕ ಮುಲಾಯಂ ಸೂಚನೆಯ ಮೇರೆಗೆ ಮರಳಿ ಸಂಪುಟಕ್ಕೆ ಸೇರಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X