Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದಡಿ ಪ್ರಜಾಪ್ರಭುತ್ವಕ್ಕೆ...

ಮೋದಿ ಸರಕಾರದಡಿ ಪ್ರಜಾಪ್ರಭುತ್ವಕ್ಕೆ ಕರಾಳದಿನಗಳು: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ7 Nov 2016 6:17 PM IST
share
ಮೋದಿ ಸರಕಾರದಡಿ ಪ್ರಜಾಪ್ರಭುತ್ವಕ್ಕೆ ಕರಾಳದಿನಗಳು: ರಾಹುಲ್ ಗಾಂಧಿ

ಹೊಸದಿಲ್ಲಿ,ನ.7: ಮೋದಿ ಸರಕಾರದ ವಿರುದ್ಧ ಸೋಮವಾರ ತೀವ್ರ ದಾಳಿ ನಡೆಸಿದ ಕಾಂಗ್ರೆಸ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಅಧಿಕಾರದ ಮದದಲ್ಲಿರುವ ಆಡಳಿತವು ತನ್ನನ್ನು ಪ್ರಶ್ನಿಸುವವರ ಧ್ವನಿಯನ್ನಡಗಿಸಲು ಬಯಸುತ್ತಿದ್ದು, ಇವು ಪ್ರಜಾಪ್ರಭುತ್ವಕ್ಕೆ ಅತ್ಯಂತ ಕರಾಳ ದಿನಗಳಾಗಿವೆ ಎಂದು ಹೇಳಿದರು.

 ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಯವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು,ರಾಷ್ಟ್ರೀಯ ಭದ್ರತೆಯ ಸೋಗಿನಲ್ಲಿ ಪ್ರಶ್ನೆಗಳನ್ನು ಕೇಳುವ ನಾಗರಿಕ ಸಮಾಜಕ್ಕೆ ಭಯ ಹುಟ್ಟಿಸಲಾಗುತ್ತಿದೆ ಎಂದರು.

ಎನ್‌ಡಿಟಿವಿ ಇಂಡಿಯಾ ಹಿಂದಿ ಸುದ್ದಿವಾಹಿನಿಯ ಮೇಲೆ ಹೇರಲಾಗಿರುವ ಒಂದು ದಿನದ ನಿಷೇಧವನ್ನು ಪ್ರಸ್ತಾಪಿಸಿದ ಅವರು, ಟಿವಿ ವಾಹಿನಿಗಳನ್ನು ದಂಡಿಸಲಾಗುತ್ತಿದೆ ಮತ್ತು ಮುಚ್ಚುವಂತೆ ಅವುಗಳಿಗೆ ಸೂಚಿಲಾಗುತ್ತಿದೆ. ಸರಕಾರವನ್ನು ಪ್ರಶ್ನಿಸುವ ಪ್ರತಿಪಕ್ಷ ನಾಯಕರನ್ನು ಬಂಧಿಸಲಾಗುತ್ತಿದೆ ಎಂದರು.

 ಪ್ರಜಾಪ್ರಭುತ್ವಕ್ಕೆ ಅತ್ಯಂತ ಕರಾಳ ದಿನಗಳು ಎದುರಾಗಿವೆ ಎಂದ ಅವರು,ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮೂಲಭೂತ ಸ್ವಾತಂತ್ರವನ್ನು ದಮನಿಸುವ ಸರಕಾರದ ಎಲ್ಲ ಪ್ರಯತ್ನಗಳು ಇಂತಹ ಅಪಾಯಕಾರಿ ಕುತಂತ್ರಗಳನ್ನು ವಿಫಲಗೊಳಿಸುವ ಕಾಂಗ್ರೆಸ್‌ನ ನಿರ್ಣಯವನ್ನು ಇನ್ನಷ್ಟು ಬಲಗೊಳಿಸುತ್ತವೆಯಷ್ಟೇ ಎಂದು ಹೇಳಿದರು.

ಪ್ರಶ್ನೆಗಳನ್ನು ಕೇಳಿದರೆ ಈ ಸರಕಾರಕ್ಕೆ ತುಂಬ ಕಿರಿಕಿರಿಯಾಗುತ್ತದೆ,ಏಕೆಂದರೆ ಅದರ ಬಳಿ ಉತ್ತರಗಳೇ ಇಲ್ಲ. ಪ್ರತಿಯೊಂದು ವೇದಿಕೆಯಲ್ಲಿ,ವಿಶೇಷವಾಗಿ ಮುಂಬರುವ ಸಂಸತ್ ಅಧಿವೇಶನದಲ್ಲಿ ಸರಕಾರದ ವೈಫಲ್ಯಗಳನ್ನು ನಾವು ಬಹಿರಂಗಗೊಳಿಸಬೇಕು ಎಂದರು.

 ಕಳೆದ ಕೆಲವು ದಿನಗಳಿಂದ ಒಆರ್‌ಒಪಿ ವಿಷಯವನ್ನು ಎತ್ತುತ್ತಲೇ ಇರುವ ರಾಹುಲ್,ಇತ್ತೀಚಿನ ದಿನಗಳಲ್ಲಿ ನಮ್ಮ ಯೋಧರು ದಶಕಗಳಲ್ಲಿಯೇ ಅತ್ಯಂತ ಹೆಚ್ಚಿನ ಸಾವುನೋವುಗಳನ್ನು ಅನುಭವಿಸಿದ್ದಾರೆ. ಒಆರ್‌ಒಪಿ ನಿರಾಕರಣೆ ಮತ್ತು ಅಂಗವಿಕಲತೆ ಪಿಂಚಣಿಯಲ್ಲಿ ಕಡಿತದ ಮೂಲಕ ಈ ನಿಷ್ಕರುಣಿ ಸರಕಾರವು ಅವರನ್ನು ಕ್ರೂರವಾಗಿ ಪುರಸ್ಕರಿಸುತ್ತಿದೆ ಎಂದು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X