Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಣ ಬಿಡುಗಡೆ ಅಡ್ಡಿ ನಿವಾರಿಸಲು ಕೋರಿ...

ಹಣ ಬಿಡುಗಡೆ ಅಡ್ಡಿ ನಿವಾರಿಸಲು ಕೋರಿ ಸುಪ್ರೀಂಗೆ ಬಿಸಿಸಿಐ ಮೊರೆ

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ8 Nov 2016 12:33 PM IST
share
ಹಣ ಬಿಡುಗಡೆ ಅಡ್ಡಿ ನಿವಾರಿಸಲು ಕೋರಿ ಸುಪ್ರೀಂಗೆ ಬಿಸಿಸಿಐ ಮೊರೆ

ಹೊಸದಿಲ್ಲಿ, ನ.8: ಭಾರತ ಹಾಗೂ ಇಂಗ್ಲೆಂಡ್‌ನ ನಡುವೆ ಬುಧವಾರ ರಾಜ್‌ಕೋಟ್‌ನಲ್ಲಿ ಆರಂಭವಾಗಲಿರುವ ಪ್ರಥಮ ಟೆಸ್ಟ್‌ಗೆ ಹಣ ಬಿಡುಗಡೆಗೆ ಸಂಬಂಧಿಸಿ ಉಂಟಾಗಿರುವ ಅಡೆ-ತಡೆ ನಿವಾರಿಸುವಂತೆ ಕೋರಿ ಬಿಸಿಸಿಐ ಮಂಗಳವಾರ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.

‘‘ಪ್ರಥಮ ಟೆಸ್ಟ್ ನಡೆಯಬೇಕಾದರೆ ಹಣ ಬಿಡುಗಡೆ ಮಾಡಬೇಕಾದ ಅಗತ್ಯವಿದೆ. ನಮ್ಮ ಹಣಕಾಸು ವ್ಯವಹಾರದಲ್ಲಿ ಸುಪ್ರೀಂಕೋರ್ಟಿನಿಂದ ನೇಮಕಗೊಂಡಿರುವ ಲೋಧಾ ಸಮಿತಿ ತೊಂದರೆ ನೀಡಿದರೆ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ರದ್ದು ಪಡಿಸಬೇಕಾಗಬಹುದು’’ ಎಂದು ಬಿಸಿಸಿಐನ ಹಿರಿಯ ವಕೀಲ ಕಪಿಲ್ ಸಿಬಾಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

 ಲೋಧಾ ಸಮಿತಿಯ ಅನುಮಿತಿಯಿಲ್ಲದೆ ಯಾವುದೇ ಹೊಸ ಒಪ್ಪಂದಕ್ಕೆ ಸಹಿ ಹಾಕುವಂತಿಲ್ಲ ಎಂದು ಸುಪ್ರೀಂಕೋರ್ಟ್ ತನ್ನ ಮಧ್ಯಂತರ ತೀರ್ಪಿನಲ್ಲಿ ಬಿಸಿಸಿಐಗೆ ತಾಕೀತು ಮಾಡಿತ್ತು. ಲೋಧಾ ಸಮಿತಿ ಲೆಕ್ಕ ಪರೀಕ್ಷಕರನ್ನು ನೇಮಕ ಮಾಡಿದ್ದು, ಬಿಸಿಸಿಐಗೆ ಖರ್ಚು-ವೆಚ್ಚದ ಮೇಲೆ ಮಿತಿ ಹೇರಿದೆ.

 ಸುಪ್ರೀಂಕೋರ್ಟ್‌ನ ಈ ಆದೇಶ ಬಿಸಿಸಿಐಗೆ ಸರಣಿ ಆಯೋಜಿಸಲು ಅಡ್ಡಿಯಾಗದು. ಕ್ರಿಕೆಟ್ ಮಂಡಳಿಯು ತನ್ನ ಸಮೃದ್ಧ ಭಂಡಾರದಿಂದ ಪ್ರವಾಸಿ ತಂಡಕ್ಕೆ ವೇತನ ನೀಡಬಹುದಾಗಿದೆ ಎಂದು ಕೋರ್ಟ್ ತಿಳಿಸಿತ್ತು.

 ‘‘ಇದೀಗ ನಮ್ಮ ಕೈ ಕಟ್ಟಿಹಾಕಲಾಗಿದೆ. ಹೊಸ ಒಪ್ಪಂದಕ್ಕೆ ಸಹಿ ಹಾಕದಂತೆ ನಿರ್ಬಂಧ, ನಿಧಿ ಬಳಕೆಯ ಮೇಲೆ ಮಿತಿ ಹೇರಿಕೆ, ಸ್ವತಂತ್ರ ಲೆಕ್ಕ ಪರೀಕ್ಷಕರನ್ನು ನೇಮಕ ಮಾಡದಂತೆ ಅ.21 ರಂದು ಸುಪ್ರೀಂಕೋರ್ಟ್ ನೀಡಿರುವ ತನ್ನ ಮಧ್ಯಂತರ ತೀರ್ಪಿನಲ್ಲಿ ಆದೇಶಿಸಿದೆ. ನಾನು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಲೋಧಾ ಸಮಿತಿ ಮಿತಿ ಹೇರಿರುವ ಕಾರಣ ಯಾವ ನಿರ್ದಿಷ್ಟ ಮಾರಾಟಗಾರರೊಂದಿಗೆ ಒಪ್ಪಂದಕ್ಕೆ ಸಹಿ ಹಾಕದಂತಹ ಪರಿಸ್ಥಿತಿಯಿದೆ’’ಎಂದು ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X