Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೀವು ಸರ್ವಾಧಿಕಾರಿಯೇ? ರುವಾಂಡ...

ನೀವು ಸರ್ವಾಧಿಕಾರಿಯೇ? ರುವಾಂಡ ಅಧ್ಯಕ್ಷರಿಗೆ ಪ್ರವಾಸಿ ಮಹಿಳೆಯ ಪ್ರಶ್ನೆ!

ವಾರ್ತಾಭಾರತಿವಾರ್ತಾಭಾರತಿ8 Nov 2016 7:27 PM IST
share
ನೀವು ಸರ್ವಾಧಿಕಾರಿಯೇ? ರುವಾಂಡ ಅಧ್ಯಕ್ಷರಿಗೆ ಪ್ರವಾಸಿ ಮಹಿಳೆಯ ಪ್ರಶ್ನೆ!

ಲಂಡನ್, ನ. 8: ಆಫ್ರಿಕ ಖಂಡದ ಪುಟ್ಟ ದೇಶ ರುವಾಂಡ ಎರಡು ದಶಕಗಳ ಹಿಂದೆ ನಡೆದ ಬೃಹತ್ ಮಾನವ ಮಾರಣ ಹೋಮಕ್ಕೆ ಕುಪ್ರಸಿದ್ಧ. ಅಲ್ಲಿ 1994ರಲ್ಲಿ ನಡೆದ ಆಂತರಿಕ ಸಂಘರ್ಷದಲ್ಲಿ, ಕೇವಲ 100 ದಿನಗಳಲ್ಲಿ ಸುಮಾರು 8 ಲಕ್ಷ ಟುಟ್ಸಿ ಜನಾಂಗೀಯರನ್ನು ಹತ್ಯೆ ಮಾಡಲಾಗಿತ್ತು. ಆದರೆ, ಆ ಬಳಿಕ ಆ ದೇಶ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ.

ಇಂಥ ದೇಶವೊಂದಕ್ಕೆ ಇತ್ತೀಚೆಗೆ ಕುಟುಂಬ ಸಮೇತ ಪ್ರವಾಸ ಹೋದ ಬ್ರಿಟನ್‌ನ ಮಹಿಳೆಯೊಬ್ಬರು, ನೇರವಾಗಿ ದೇಶದ ಅಧ್ಯಕ್ಷರಿಗೆ ಟ್ವಿಟರ್‌ನಲ್ಲಿ ಒಂದು ಅಪ್ರಿಯ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ಅಧ್ಯಕ್ಷ ಪೌಲ್ ಕಗಮೆ ಉತ್ತರಿಸಿದ ರೀತಿಯೂ ವಿಶಿಷ್ಟವಾಗಿತ್ತು.

‘‘ನಿಮ್ಮ ದೇಶವನ್ನು ನೋಡಿ ನಮಗೆ ಸಂತೋಷವಾಗಿದೆ. ಆದರೆ, ನೀವು ಸರ್ವಾಧಿಕಾರಿ ಎಂದು ಹೇಳುವವರಿಗೆ ಏನು ಹೇಳುತ್ತೀರಿ?’’ ಎಂಬ ಪ್ರಶ್ನೆಯನ್ನು 56 ವರ್ಷ ವಯಸ್ಸಿನ ವೆಂಡಿ ಮರ್ಫಿ ರುವಾಂಡ ಅಧ್ಯಕ್ಷರ ಖಾಸಗಿ ಟ್ವಿಟರ್‌ನಲ್ಲಿ ಕೇಳಿದರು.

 ವೆಂಡಿ ತನ್ನ ಗಂಡ ಟಿಮ್ ಮತ್ತು ಮಗಳು ಎಲ್ ಜೊತೆ ಕಳೆದ ತಿಂಗಳ ಕೊನೆಯಲ್ಲಿ ರುವಾಂಡಕ್ಕೆ ಭೇಟಿ ನೀಡಿದ್ದರು. ಪ್ರಶ್ನೆ ಕೇಳಿ ಕೆಲವು ಗಂಟೆಗಳು ಕಳೆದವು. ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಈ ವಿಷಯ ಅಲ್ಲಿಗೇ ಮುಗಿಯಿತು ಎಂಬುದಾಗಿ ಅವರು ಭಾವಿಸಿದರು.
ಆದರೆ, ಅದಕ್ಕೆ ಅಧ್ಯಕ್ಷರು ಉತ್ತರಿಸಿದರು: ‘‘ಇದೇ ಪ್ರಶ್ನೆಯನ್ನು ಕೇಳುತ್ತಾ ದೇಶದೆಲ್ಲೆಡೆ ಸಂಚರಿಸಿ ಹಾಗೂ ಬಳಿಕ ನಿರ್ಧಾರಕ್ಕೆ ಬನ್ನಿ. ನಿಮ್ಮ ಅಭಿಪ್ರಾಯಕ್ಕೆ ವಿರುದ್ಧವಾದ ಅಭಿಪ್ರಾಯ ಹೊಂದಿರುವವರ ಬಗ್ಗೆ ನಿಮ್ಮ ಅಭಿಪ್ರಾಯ ಏನು?’’
‘‘ನಮಗೆ ದಂಗು ಬಡಿದಂತಾಯಿತು. ತಕ್ಷಣವೇ ಇತರ ರುವಾಂಡನ್ ವ್ಯಕ್ತಿಗಳಿಂದ ನಮಗೆ ಟ್ವೀಟ್‌ಗಳು ಬಂದವು. ಈಗಲೂ ಬರುತ್ತಾ ಇದೆ’’ ಎಂದು ವೆಂಡಿ ‘ದಿ ಇಂಡಿಪೆಂಡೆಂಟ್’ಗೆ ಹೇಳಿದ್ದಾರೆ.
ಬಳಿಕ ಓರ್ವ ಸಂಸದ ಹಾಗೂ ಓರ್ವ ಸರಕಾರಿ ಅಧಿಕಾರಿ ವೆಂಡಿ ಕುಟುಂಬವನ್ನು ಭೇಟಿಯಾದರು. ಎರಡು ಗಂಟೆಗಳ ಕಾಲ ಅವರು ಕುಟುಂಬದೊಂದಿಗೆ ಕಳೆದರು. ‘‘ಕೊಂಚ ತನಿಖಾ ರೀತಿಯಲ್ಲಿ ಆರಂಭವಾದ ಭೇಟಿ ಬಳಿಕ ಅತ್ಯಂತ ಉಲ್ಲಾಸಭರಿತ ಹಾಗೂ ಸಕಾರಾತ್ಮಕವಾಯಿತು. ಅಧ್ಯಕ್ಷ ಕಗಮೆಯ ಆಡಳಿತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ವೆಂಡಿ ಕುಟುಂಬಕ್ಕೆ ಮಾಹಿತಿ ನೀಡಲಾಯಿತು’’.
ಕಗಮೆ ಕಳೆದ 22 ವರ್ಷಗಳಿಂದ ದೇಶದ ಪ್ರಭಾವಿ ಆಡಳಿತಗಾರನಾಗಿದ್ದಾರೆ. ಅವರ ವಿರುದ್ಧ ಹಲವು ಟೀಕೆಗಳು ಕೇಳಿ ಬಂದರೂ, ಅವರನ್ನು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಬಾನ್ ಕಿ ಮೂನ್, ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಿ ಟೋನಿ ಬ್ಲೇರ್ ಮುಂತಾದವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X