Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500, 1000 ರೂ. ನೋಟು ರದ್ದು : 6 ತಿಂಗಳು...

500, 1000 ರೂ. ನೋಟು ರದ್ದು : 6 ತಿಂಗಳು ಈ ಚಿದಂಬರ ರಹಸ್ಯವನ್ನು ಕಾಪಾಡಿದ್ದು ಹೇಗೆ ?

ವಾರ್ತಾಭಾರತಿವಾರ್ತಾಭಾರತಿ9 Nov 2016 2:48 PM IST
share
500, 1000 ರೂ. ನೋಟು ರದ್ದು : 6 ತಿಂಗಳು ಈ ಚಿದಂಬರ ರಹಸ್ಯವನ್ನು ಕಾಪಾಡಿದ್ದು ಹೇಗೆ ?

ಹೊಸದಿಲ್ಲಿ,ನ.9 : ಐನೂರು ಹಾಗೂ ಒಂದು ಸಾವಿರ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವ ಚಿದಂಬರ ರಹಸ್ಯವನ್ನು ಪ್ರಧಾನಿ ಆರು ತಿಂಗಳ ಕಾಲ ಹೇಗೆ ಕಾಪಾಡಿಕೊಂಡು ಬಂದಿದ್ದಾರೆಂಬುದೇ ಈಗ ಪ್ರಶ್ನೆಯಾಗಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಆರು ತಿಂಗಳ ಹಿಂದೆಯೇ ಇಡಲಾಗಿತ್ತು ಹಾಗೂ ಇಡೀ ಕಾರ್ಯಾಚರಣೆಯನ್ನು ಭಾರೀ ಗೌಪ್ಯವಾಗಿಡಲಾಗಿತ್ತು. ದೇಶದಲ್ಲಿ ಚಲಾವಣೆಯಲ್ಲಿರುವ 2300 ಕೋಟಿ ಮೌಲ್ಯದ ಈ ಕರೆನ್ಸಿ ನೋಟುಗಳನ್ನು ಹಿಂದಕ್ಕೆ ಪಡೆಯುವುದು ಅಷ್ಟೊಂದು ಸುಲಭದ ಮಾತಲ್ಲ.

ತಮ್ಮ ಈ ಕಾರ್ಯಯೋಜನೆ ಬಗ್ಗೆ ತಮ್ಮ ಸಚಿವ ಸಂಪುಟಕ್ಕೂ ಮೋದಿ ಮಾಹಿತಿ ನೀಡಿರಲಿಲ್ಲ. ಮೋದಿ ಮಂಗಳವಾರ ದೇಶವನ್ನುದ್ದೇಶಿಸಿ ಭಾಷಣ ಮಾಡುವುದಕ್ಕೆ ಸ್ವಲ್ಪ ಹೊತ್ತು ಮುಂಚಿತವಾಗಿಯಷ್ಟೇ ಅವರ ಸಚಿವ ಸಂಪುಟಕ್ಕೆ ಈ ಬಗ್ಗೆ ತಿಳಿಸಲಾಗಿತ್ತು.

ದೇಶದಲ್ಲಿರುವ ಕಪ್ಪು ಹಣವನ್ನು ನಿಯಂತ್ರಿಸುವುದೇ ಪ್ರಧಾನಿಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆ ಸಫಲವಾಗಿದ್ದೇ ಆದರೆ ಜನರು ಸಕ್ರಮವಾಗಿಯೇ ಹಣಕಾಸು ವ್ಯವಹಾರ ನಡೆಸುತ್ತಾರೆಂಬ ವಿಶ್ವಾಸ ಅವರದ್ದು.

ಈ ಬೃಹತ್ ಯೋಜನೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಪ್ರತ್ಯೇಕವಾಗಿಡಲಾಗಿತ್ತು ಹಾಗೂ ಈ ಬಗೆಗಿನ ಅಧಿಸೂಚನೆಯನ್ನು ಕೂಡ ಬಜೆಟ್ ಕಾಗದಗಳನ್ನು ಮುದ್ರಿಸುವ ಮುದ್ರಣಾಲಯದಲ್ಲೇ ಗೌಪ್ಯವಾಗಿ ಮುದ್ರಿಸಲಾಗಿತ್ತು. ಮಂಗಳವಾರ ಪ್ರಧಾನಿ ತಮ್ಮ ಭಾಷಣ ಮುಗಿಸುವವರೆಗೆ ಮೋದಿಯವರ ಸಚಿವ ಸಹೋದ್ಯೋಗಿಗಳನ್ನು ಕೊಠಡಿಯಿಂದ ಹೊರ ಹೋಗಲೂ ಅನುಮತಿಸಿರಲಾಗಿರಲಿಲ್ಲ.

ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕ್ರಮ ಮೋದಿ ಸರಕಾರಕ್ಕೆ ಜನಬೆಂಬಲವನ್ನು ಗಳಿಸಲು ಬಹಳಷ್ಟು ಸಹಕಾರಿ ಎಂದು ಬಣ್ಣಿಸಲಾಗುತ್ತದೆ. ಮೇಲಾಗಿ ಈ ಕ್ರಮ ಉತ್ತರ ಪ್ರದೇಶ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಮಾಡುವ ವೆಚ್ಚವನ್ನು ನಿಯಂತ್ರಿಸಲೂ ಸಹಕಾರಿಯೆನ್ನಲಾಗಿದೆ.

ಕಪ್ಪು ಹಣ ಚಲಾವಣೆಯನ್ನು ಬಿಜೆಪಿ ತನ್ನ ಆಶ್ವಾಸನೆಗನುಗುಣವಾಗಿ ನಿಯಂತ್ರಿಸಲು ವಿಫಲವಾಗಿದೆಯೆಂದು ಬೊಬ್ಬೆ ಹೊಡೆಯುತ್ತಿರುವ ವಿಪಕ್ಷಗಳ ಬಾಯ್ಮುಚ್ಚಿಸುವ ತಂತ್ರವೂ ಇದರಲ್ಲಡಗಿದೆಯೆಂದು ಹೇಳಲಾಗುತ್ತಿದೆ.

ಸದ್ಯ ಜನ ತಮಗೆ ಸರಕಾರದ ಈ ಕ್ರಮದಿಂದ ತೊಂದರೆಯಾಗುತ್ತಿದೆ ಎಂದು ಅಲವತ್ತುಕೊಂಡರೂ ಸಮಯ ಕಳೆದ ಹಾಗೆ ಸರಕಾರ ಸರಿಯಾದ ಕ್ರಮವನ್ನೇ ಕೈಗೊಂಡಿದೆ ಎಂದು ಅದನ್ನು ಕೊಂಡಾಡಬಹುದು, ಎಂದು ಕೆಲ ಹಿರಿಯ ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.

ಇತ್ತೀಚೆಗೆ ಗಡಿ ನಿಯಂತ್ರಣ ರೇಖೆಯಾಚೆ ನಡೆಸಲಾದ ಸೀಮಿತ ದಾಳಿ ಹಾಗೂ ಇದೀಗ 500 ಹಾಗೂ 1000 ರೂ ನೋಟುಗಳ ರದ್ದತಿ ಕೇಂದ್ರ ಸರಕಾರಕ್ಕೆ ಜನರ ಬಳಿ ಹೋಗಿ ತನಗೆ ಬೆಂಬಲ ಯಾಚಿಸಲು ಉತ್ತಮ ಅಸ್ತ್ರವೊದಗಿದೆ ಎಂದೂ ಬಣ್ಣಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X