Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚಿಲ್ಲರೆ’ ಇದ್ದರೆ ಮಾತ್ರ ಊಟ.....!

‘ಚಿಲ್ಲರೆ’ ಇದ್ದರೆ ಮಾತ್ರ ಊಟ.....!

ವಾರ್ತಾಭಾರತಿವಾರ್ತಾಭಾರತಿ9 Nov 2016 8:47 PM IST
share
‘ಚಿಲ್ಲರೆ’ ಇದ್ದರೆ ಮಾತ್ರ ಊಟ.....!

ಮಂಗಳೂರು,ನ.9: ದೇಶದಲ್ಲಿ ಚಲಾವಣೆಯಲ್ಲಿದ್ದ 500-1000 ರೂ ಮುಖ ಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಪರಿಣಾಮವಾಗಿ ನಗರದ ವಿವಿಧ ಕಡೆಗಳಲ್ಲಿ ವ್ಯಾಪಾರ ವಹಿವಾಟು ಅಸ್ತವ್ಯಸ್ತಗೊಂಡಿದ್ದು ಸರಿಪಡಿಸಲು ಇನ್ನೂ ಕೆಲವು ದಿನಗಳು ಬೇಕಾಗಬಹುದು. ತುರ್ತಾಗಿ ತೆಗೆದುಕೊಂಡ ಕ್ರಮದಿಂದ ಹಾಗೂ ಕೆಲವು ಗೊಂದಲದಿಂದ ಮತ್ತು ದಿಢೀರಾಗಿ 100 ರೂ. ಮುಖ ಬೆಲೆಯ ನೋಟಿನ ಕೊರತೆಯೂ ಉಂಟಾದ ಪರಿಣಾಮವಾಗಿ ಜನ ಸಾಮಾನ್ಯರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಚಿಲ್ಲರೆ ಇದ್ದರೆ ಮಾತ್ರ ಊಟ..!

ಕೆಲವರು 500ರೂ ಮುಖಬೆಲೆಯ ನೋಟು ಹಿಡಿದು ಹೊಟೇಲಿಗೆ ಊಟ ಮಾಡಲು ಹೊರಟರೆ ಅಲ್ಲಿಯೂ ಚಿಲ್ಲರೆ ಇದ್ದರೆ ಮಾತ್ರ ಊಟ !ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ಸೆಂಟ್ರಲ್ ಮಾರುಕಟ್ಟೆ ಬಳಿಯ ಕೂಲಿ ಕಾರ್ಮಿಕರೊಬ್ಬರ ಬಳಿ ಕೂಲಿಯಾಗಿ ದೊರೆತ 500 ರೂ. ಬಿಟ್ಟರೆ ಬೇರೇನೂ ಇರಲಿಲ್ಲ. ಅವರು ಬೆಳಗ್ಗಿನ ಉಪಹಾರ ಸೇವಿಸಲು ಎಲ್ಲಿ ಹೋದರೂ ಚಿಲ್ಲರೆ ಇದ್ದರೆ ಮಾತ್ರ ಉಪಹಾರ, ಊಟ ಎನ್ನುತ್ತಿದ್ದರು. ಸುಮಾರು 3 ಗಂಟೆಗಳ ಕಾಲ ನಗರದಲ್ಲಿ ಸುತ್ತಾಡಿದರೂ ಯಾರೂ 500 ನೋಟನ್ನು ಸ್ವೀಕರಿಸಿ ಅವರಿಗೆ ಉಪಹಾರ ನೀಡಲು ಹಿಂದೇಟು ಹಾಕಿದಾಗ ಸೆಂಟ್ರಲ್ ಮಾರ್ಕೆಟ್‌ನ ಸಹ ಕಾರ್ಮಿಕನೊರ್ವ ತಾನು ತಂದಿದ್ದ ಉಪಹಾರವನ್ನು ಆತನಿಗೆ ನೀಡಿದ ಬಗ್ಗೆ ಪತ್ರಿಕೆಗೆ ತಿಳಿಸಿದ್ದಾರೆ.

ಜನರಲ್ಲಿ ಉಂಟಾದ ಗೊಂದಲದಿಂದ 500, 1000 ನೋಟನ್ನು ಪಡೆಯಲು ಹಿಂದೇಟು ಹಾಕಿದ ಪರಿಸ್ಥಿತಿ ನಗರದಾದ್ಯಂತ ಇಂದು ನಿರ್ಮಾಣವಾಗಿದೆ. ‘‘ನನ್ನ ಬಳಿ 500,1000 ನೋಟಿನ ಚಿಲ್ಲರೆ ನೀಡಲು ಹಣ ಇಲ್ಲದೆ ಇದ್ದ ಕಾರಣ ನಾನು ನನ್ನ ಬಳಿ ಬಂದ ಗಿರಾಕಿಗಳನ್ನು ಬಿಡಬೇಕಾಯಿತು.ಇದರಿಂದ ನನಗೆ ನಷ್ಟವಾಗಿದೆ. ಸರಕಾರ ನೋಟನ್ನು ಹಿಂದಕ್ಕೆ ಪಡೆದು ಚಿಲ್ಲರೆ ಸಮಸ್ಯೆ ನಿವಾರಣೆ ಬಗ್ಗೆ ಗಮನಹರಿಸುತ್ತಿದ್ದರೆ ಈ ರೀತಿಯ ಗೊಂದಲ ಉಂಟಾಗುತ್ತಿರಲಿಲ್ಲ’’ ಎಂದು ತೊಕ್ಕೊಟ್ಟಿನ ವ್ಯಾಪಾರಿಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡರು.

ಪೆಟ್ರೋಲ್ ಬಂಕ್‌ನಲ್ಲಿ ನಿರ್ಬಂಧ ಪೆಟ್ರೋಲ್ ಬಂಕ್‌ಗಳಲ್ಲಿ 500 ಅಥವಾ 1000ದ ನೋಟು ನೀಡಿ 100 ರೂಪಾಯಿಯ ಪೆಟ್ರೋಲ್ ಕೇಳಿದರೆ ಚಿಲ್ಲರೆ ಇದ್ದರೆ ಮಾತ್ರ. ಇಲ್ಲವಾದಲ್ಲಿ 500ರೂ ಅಥವಾ 1000ದ ಪೆಟ್ರೋಲ್ ಪಡೆಯಬೇಕು ಎನ್ನುವ ನಿರ್ಬಂಧ ಉಂಟಾಗಿದ್ದ ಕಾರಣ ಇಂದು ನಗರದಲ್ಲಿ ಕೆಲವು ವಾಹನಗಳು ರಸ್ತೆಗಿಳಿಯದ ಪರಿಸ್ಥಿತಿ ಉಂಟಾಗಿತ್ತು. ಈ ಬಗ್ಗೆ ನಗರದ ಬಲ್ಮಠ ಜಂಕ್ಷನ್ ಹಾಗೂ ಇತರ ಕೆಲವು ಬಂಕ್‌ಗಳಲ್ಲಿ ಗ್ರಾಹಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.

‘‘ಈ ಪರಿಸ್ಥಿತಿ ಹೀಗೆ ಮುಂದುವರಿದರೆ ನಮ್ಮ ಗತಿಯೇನು?, ನಮ್ಮ ಬಳಿ ಯಾವ ಕಪ್ಪುಹಣವೂ ಇಲ್ಲ. ಬಿಳಿ ಹಣವೂ ಇಲ್ಲ. ದಿನ ನಿತ್ಯ ದುಡಿಯುತ್ತೇವೆ.ಇವತ್ತು ಬೆಳಗ್ಗೆ ಸ್ವಲ್ಪ ಜನ ಇದ್ದರು. ಮಧ್ಯಾಹ್ನ ನಂತರ ವ್ಯಾಪಾರಕ್ಕೆ ಜನವೂ ಇಲ್ಲ’’ ಎಂದು ಸ್ಟೇಟ್‌ಬ್ಯಾಂಕ್, ವೆಲೆನ್ಸಿಯಾದ ತರಕಾರಿ, ಹಣ್ಣು ಹಂಪಲು ವ್ಯಾಪಾರಿಗಳು ತಮ್ಮ ಅಳಲನ್ನು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X