Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೇಂದ್ರದ ನಿರ್ಧಾರದಿಂದ ದೈನಂದಿನ...

ಉಡುಪಿ: ಕೇಂದ್ರದ ನಿರ್ಧಾರದಿಂದ ದೈನಂದಿನ ವ್ಯವಹಾರ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ9 Nov 2016 11:39 PM IST
share
ಉಡುಪಿ: ಕೇಂದ್ರದ ನಿರ್ಧಾರದಿಂದ ದೈನಂದಿನ ವ್ಯವಹಾರ ಅಸ್ತವ್ಯಸ್ತ

ಉಡುಪಿ, ನ.9: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ಹಠಾತ್ ಷೋಘಣೆಯೊಂದರಲ್ಲಿ 500ರೂ. ಹಾಗೂ 1,000ರೂ.ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿರುವುದರ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜನರ ದೈನಂದಿನ ವ್ಯವಹಾರಗಳು ಅಸ್ತವ್ಯಸ್ತಗೊಂಡವು.

ಎಲ್ಲಾ ಬ್ಯಾಂಕುಗಳೊಂದಿಗೆ ಎಟಿಎಂಗಳನ್ನು ಎರಡು ದಿನಗಳ ಮಟ್ಟಿಗೆ ಮುಚ್ಚಿರುವುದರಿಂದ ಜನರು ತಮ್ಮ ದಿನದ ಆವಶ್ಯಕತೆಗಳಿಗೆ ಸಹ ಪರದಾಡುವ ಸ್ಥಿತಿ ಉಂಟಾಯಿತು. ಬಿಗ್ ಬಜಾರ್, ಚಿನ್ನದಂಗಡಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲೂ 500-1000ರೂ.ಗಳನ್ನು ನೋಡಿದರೆ ಕೆಂಡ ಮುಟ್ಟಿದವರಂತೆ ಹಿಂದೆ ಸರಿಯುತಿದ್ದರು. ಹೆಚ್ಚಿನ ಕಡೆಗಳಲ್ಲಿ ಈ ನೋಟುಗಳನ್ನು ಸ್ವೀಕರಿಸುವುದಿಲ್ಲ ಎಂಬ ಬೋರ್ಡ್‌ಗಳನ್ನು ಸಹ ತೂಗು ಹಾಕಿದ್ದರು.

ನಗರದ ಹೆಚ್ಚಿನ ಚಿನ್ನದಂಗಡಿಗಳು ಬಾಗಿಲು ಹಾಕಿದ್ದವು. ಆಭರಣ, ಭೀಮಾ ಜುವೆಲ್ಲರ್ಸ್‌ಗಳಂಥ ಕೆಲವು ಪ್ರಮುಖ ಚಿನ್ನದಂಗಡಿ ಬಾಗಿಲು ತೆರೆದಿದ್ದರೂ ನಗದು ವ್ಯವಹಾರಕ್ಕೆ, ಚಿನ್ನ ಖರೀದಿಗೆ ಅವಕಾಶವಿರಲಿಲ್ಲ. ಕಾರ್ಡ್ ಸ್ಪೈಪ್ ಮೂಲಕ ಮಾತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗುತ್ತಿತ್ತು. ಇದರೊಂದಿಗೆ ಸ್ಕೀಮ್‌ಗಳಲ್ಲಿ ಹಣ ತೊಡಗಿಸಿದವರಿಗೆ ಮಾತ್ರ ಖರೀದಿ ಸಾಧ್ಯವಿತ್ತು. ಹೀಗಾಗಿ ಗ್ರಾಹಕರು ಅಂಗಡಿ ಪ್ರವೇಶಿಸುವ ಮುನ್ನವೇ ಅವರನ್ನು ವಿಚಾರಿಸಿ ಬಿಡಲಾಗುತ್ತಿತ್ತು.

ಪೆಟ್ರೋಲ್ ಬಂಕ್‌ಗಳಲ್ಲೂ ಸಹ ಗ್ರಾಹಕರಿಗೆ ಚಿಲ್ಲರೆ ಖರೀದಿಗೆ ಅವಕಾಶವಿರಲಿಲ್ಲ. ಚಿಲ್ಲರೆಯನ್ನು ನೀಡುತ್ತಿರಲಿಲ್ಲ. 500 ಅಥವಾ 1000ರೂ. ಪೂರ್ಣ ಮೊತ್ತಕ್ಕೆ ಪೆಟ್ರೋಲ್ ಇಲ್ಲವೇ ಡೀಸೆಲ್ ಖರೀದಿಸಬೇಕಿತ್ತು. ಹೊಟೇಲ್‌ಗಳಲ್ಲೂ ಬಿಲ್‌ನಷ್ಟು ಹಣ ಇದ್ದವರಿಗೆ ಮಾತ್ರ ಊಟ-ತಿಂಡಿ. 500ರೂ. ಇದ್ದರೆ ಪೂರ್ಣ ಮೊತ್ತದ ಬಿಲ್ ಮಾಡಬೇಕಿತ್ತು.

ಹೆಚ್ಚಿನೆಲ್ಲಾ ದೊಡ್ಡ ಅಂಗಡಿ ಹಾಗೂ ಹೊಟೇಲ್‌ಗಳ ಎದುರು 500-1000ರೂ. ನೋಟು ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಲಾಗಿತ್ತು. ಬಸ್‌ಗಳಲ್ಲೂ ಚಿಲ್ಲರೆ ವಿಷಯಕ್ಕೆ ಸಾಕಷ್ಟು ಜಗಳ ನಡೆದ ಬಗ್ಗೆ ವರದಿಯಾಗಿದೆ. ನಗರದಲ್ಲಿ ಬಿಗ್‌ಬಜಾರ್ ನಿನ್ನೆ ರಾತ್ರಿ 12:00 ಗಂಟೆಯವರೆಗೂ ತೆರೆದಿದ್ದು ವ್ಯಾಪಾರ ನಡೆಸಿದೆ.

ಒಟ್ಟಾರೆಯಾಗಿ ಕಿಸೆಯಲ್ಲಿ ದುಡ್ಡಿದ್ದರೂ, ಊಟ-ತಿಂಡಿ ಮಾಡಲಾಗದ, ತಮಗೆ ಬೇಕಾದುದನ್ನು ಖರೀದಿಸಲಾಗದ ಪರಿಸ್ಥಿತಿಗೆ ಜನ ಸಿಕ್ಕಿಹಾಕಿಕೊಂಡರು. ಸರಕಾರದ ನಿರ್ಧಾರದ ಕುರಿತು ತಿಳಿಯದ ಜನಸಾಮಾನ್ಯರು, ವಿಶೇಷವಾಗಿ ಹಳ್ಳಿಗರು ಇದರಿಂದ ತುಂಬಾ ತೊಂದರೆ ಅನುಭವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X