Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.12: ಎನ್‌ಐಟಿಕೆ ಕ್ಯಾಂಪಸ್‌ನ...

ನ.12: ಎನ್‌ಐಟಿಕೆ ಕ್ಯಾಂಪಸ್‌ನ ಮೇಲ್ಛಾವಣಿ ಸೋಲಾರ್ ಪ್ಲಾಂಟ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Nov 2016 7:00 PM IST
share
ನ.12: ಎನ್‌ಐಟಿಕೆ ಕ್ಯಾಂಪಸ್‌ನ ಮೇಲ್ಛಾವಣಿ ಸೋಲಾರ್ ಪ್ಲಾಂಟ್ ಉದ್ಘಾಟನೆ

ಮಂಗಳೂರು, ನ.10: ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆ್ ಟೆಕ್ನಾಲಜಿ (ಎನ್‌ಐಟಿಕೆ) ತನ್ನ ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೋಲಾರ್ ಪವರ್ ಪ್ಲಾಂಟ್ ಅಳವಡಿಸಿಕೊಂಡ ಕೀರ್ತಿಗೆ ಪಾತ್ರವಾಗಿದ್ದು, ಈ ಘಟಕವನ್ನು ನ.12ರಂದು ಎನ್‌ಐಟಿಕೆಯ ಬೋರ್ಡ್ ಗವರ್ನರ್ಸ್‌ನ ಅಧ್ಯಕ್ಷ ವನಿತಾ ನಾರಾಯಣ್ ಉದ್ಘಾಟಿಸಲಿದ್ದಾರೆ ಎಂದು ಎನ್‌ಐಟಿಕೆ ನಿರ್ದೇಶಕ ಪ್ರೊ.ಕೆ.ಎನ್.ಲೋಕೇಶ್ ಗುರುವಾರ ಕ್ಯಾಂಪಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಥಮ ಹಂತದಲ್ಲಿ 11 ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲಾಗಿದೆ. ಉಳಿದ ಕಟ್ಟಡದಲ್ಲೂ ಹಂತ ಹಂತವಾಗಿ ಈ ಯೋಜನೆ ರೂಪಿಸಲಾಗಿದೆ. ರಾಷ್ಟ್ರೀಯ ಸೋಲಾರ್ ಮಿಷನ್ ಯೋಜನೆಯಡಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಸೂಚನೆ ಮೇರೆಗೆ ಎಲ್ಲ ಅತ್ಯುನ್ನತ ಶಿಕ್ಷಣ ಕೇಂದ್ರಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ಇದೀಗ ಎನ್‌ಐಟಿಕೆಯ 4 ಕಟ್ಟಡಗಳ ಮೇಲಿನ ಸೋಲಾರ್ ಘಟಕಕ್ಕೆ ಅಧಿಕೃತ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ವಿದ್ಯುತ್ ಉತ್ಪಾದನೆ ಆರಂಭಿಸಿದೆ. ಹಸಿರೀಕರಣಕ್ಕೆ ಈ ಯೋಜನೆ ಅತ್ಯುತ್ತಮವಾಗಿದ್ದು, ಎಲ್ಲೆಡೆ ಅಳವಡಿಕೆಗೆ ಕೇಂದ್ರ ಸರಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಹೇಳಿದರು.

ಕ್ಲೀನ್ ಮ್ಯಾಕ್ಸ್ ಸೋಲಾರ್ ಅಭಿವೃದ್ಧಿ ಸಂಸ್ಥೆಯು ಈ ಸೋಲಾರ್ ಪ್ಲಾಂಟ್‌ನ್ನು ನಿರ್ವಹಿಸುತ್ತಿದೆ. ಎನ್‌ಐಟಿಕೆ ಇದಕ್ಕೆ ಸಹಯೋಗ ನೀಡಿದೆ. 25 ವರ್ಷಗಳ ಒಪ್ಪಂದದಂತೆ ಸಂಸ್ಥೆ ಎನ್‌ಐಟಿಕೆಗೆ ವಿದ್ಯುತ್ ನೀಡಲಿದ್ದು, ಮೆಸ್ಕಾಂಗಿಂತ ಕಡಿಮೆ ದರದಲ್ಲಿ ವಿದ್ಯುತ್ ಬಳಸಬಹುದಾಗಿದೆ. ಸಮುದ್ರದ ಬದಿ ಇರುವುದರಿಂದ ಸೋಲಾರ್ ಪ್ಲಾಂಟನ್ನು ವಿಶೇಷವಾಗಿ ದೀರ್ಘ ಬಾಳಿಕೆ, ಸುರಕ್ಷತೆಯನ್ನು ಗಮನದಲ್ಲಿರಿಸಿ ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ಡಿ.ಎನ್.ಗಾಂವ್ಕ್‌ರ್ ಮಾಹಿತಿ ನೀಡಿದರು.

ಇದೀಗ ಪ್ರತೀ ತಿಂಗಳು ಎನ್‌ಐಟಿಕೆ 40 ಲಕ್ಷ ರೂ. ವಿದ್ಯುತ್ ಬಿಲ್ ನಿಭಾಯಿಸಲಿದ್ದು, 2 ಮೆ.ವ್ಯಾ ವಿದ್ಯುತ್ ಬಳಕೆಯಾಗುತ್ತಿದೆ. ಸೋಲಾರ್ ಪ್ಲಾಂಟ್ ಕಾರ್ಯಾಚರಿಸಲು ಆರಂಭಿಸಿದಲ್ಲಿ ಪ್ರತೀ ತಿಂಗಳು 5 ಲಕ್ಷ ರೂ. ಉಳಿಸಬಹುದಾಗಿದೆ ಎಂದು ಗಾಂವ್ಕರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡೀನ್ ಪ್ರೊ. ಅಶೋಕ್ ಬಾಬು, ರಿಜಿಸ್ಟ್ರಾರ್ ಪ್ರೊ. ರವೀಂದ್ರನಾಥ್, ಡಾ. ಅರುಣ್ ಇಸ್ಲೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X