Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೋಟ್ ಸಾಗಾಟಕ್ಕೆ ಪೊಲೀಸ್ ಭದ್ರತೆ:...

ನೋಟ್ ಸಾಗಾಟಕ್ಕೆ ಪೊಲೀಸ್ ಭದ್ರತೆ: ಹೆಚ್ಚುವರಿ ಅಧೀಕ್ಷಕ ವೇದಮೂರ್ತಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ10 Nov 2016 8:18 PM IST
share
ನೋಟ್ ಸಾಗಾಟಕ್ಕೆ ಪೊಲೀಸ್ ಭದ್ರತೆ: ಹೆಚ್ಚುವರಿ ಅಧೀಕ್ಷಕ ವೇದಮೂರ್ತಿ ಭರವಸೆ

ಪುತ್ತೂರು, ನ.10: ಹಳೆ ನೋಟು ವಿನಿಮಯ ಮತ್ತು ಹೊಸ ನೋಟು ಚಲಾವಣೆಯ ಹಿನ್ನಲೆಯಲ್ಲಿ ಎಲ್ಲಾ ಕಡೆಗಳಲ್ಲಿ ನೋಟುಗಳ ಸಾಗಾಟ ವ್ಯಾಪಕವಾಗಿ ನಡೆಯುತ್ತಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ನೋಟು ಬದಲಾವಣೆ ವಿನಿಮಯ ನಡೆಸುತ್ತಿರುವುದರಿಂದ ಅಗತ್ಯ ಬಿದ್ದಲ್ಲಿ ನೋಟು ಸಾಗಾಟಕ್ಕೆ ದ್ರತೆ ಒದಗಿಸಲಾಗುವುದು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇದಮೂರ್ತಿ ಭರವಸೆ ನೀಡಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ಗುರುವಾರ ಸಂಜೆ ನಡೆದ ಬ್ಯಾಂಕ್ ಮ್ಯಾನೇಜರ್‌ಗಳ ಸಭೆಯು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇದಮೂರ್ತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಲ್ಲಾ ಕಡೆ ನೋಟ್‌ಗಳ ಸಾಗಾಟ ವ್ಯಾಪಕವಾಗಿ ನಡೆಯುತ್ತಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ನಿತ್ಯವೂ ಹಳೆ ನೋಟುಗಳನ್ನು ಹಿಡಿದುಕೊಂಡು ಬ್ಯಾಂಕುಗಳಿಗೆ ಹೋಗುತ್ತಿದ್ದಾರೆ. ಇಂಥ ಸಂದರ್ಭವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇರುವ ಕಾರಣ ಕಳ್ಳರು, ವಂಚಕರ ವಿರುದ್ಧ ಬಾರೀ ಕಟ್ಟೆಚ್ಚರ ಅಗತ್ಯ. ಇದಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಬ್ಯಾಂಕ್‌ಗಳು ಸಹಕರಿಸಬೇಕು. ಒಂದು ಕಡೆಯಿಂದ ಇನ್ನೊಂದು ಕಡೆಗೆ ನೋಟುಗಳ ಸಾಗಾಟ ಮಾಡುವ ಸಂದರ್ಭ ಅಗತ್ಯ ಬಿದ್ದಲ್ಲಿ ಇಲಾಖೆಗೆ ತಿಳಿಸಿ. ನಾವು ಭದ್ರತೆ ನೀಡುತ್ತೇವೆ ಎಂದು ಅವರು ಹೇಳಿದರು.

ಪ್ರತೀ ಬ್ಯಾಂಕ್‌ಗಳಲ್ಲಿ ಈಗ ಗ್ರಾಹಕರ ದಟ್ಟಣೆ ವಿಪರೀತವಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕ್‌ಗಳು ಗ್ರಾಹಕರಿಗೆ ನೆರವಾಗಲು ಪ್ರತ್ಯೇಕ ಕೌಂಟರ್ ತೆರೆಯಬೇಕು. ಗ್ರಾಹಕರು ನೋಟಿನ ಕೊರತೆ ಬಗ್ಗೆ ಭಯಭೀತರಾಗಿರುವ ಕಾರಣ ಆತಂಕಭರಿತರಾಗಿ ವರ್ತಿಸಬಹುದು. ಆಗ ಸಿಬ್ಬಂದಿ ತಾಳ್ಮೆಯಿಂದ ವ್ಯವಹರಿಸಿ ಮನವರಿಕೆ ಮಾಡಬೇಕು. ಗ್ರಾಹಕರು ತಾಳ್ಮೆ ಕೆಟ್ಟು ವರ್ತಿಸದಂತೆ ಮುಂಜಾಗರೂಕತೆ ವಹಿಸಬೇಕು. ಪ್ರತೀ ಬ್ಯಾಂಕ್‌ಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಕಟ್ಟೆಚ್ಚರ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಪುತ್ತೂರು ಎಎಸ್ಪಿ ರಿಷ್ಯಂತ್ ಸಿ.ಬಿ.ಮಾತನಾಡಿ, ಪ್ರತೀ ಶಾಖೆಗಳಿಗೆ ತಮ್ಮಲ್ಲಿನ ದೊಡ್ಡ ಗ್ರಾಹಕರ ಬಗ್ಗೆ ಗೊತ್ತಿರುವ ಕಾರಣ, ಅವರು ಹಣದೊಂದಿಗೆ ಬರುವ ಸಂದರ್ಭ ಮೊದಲೇ ತಿಳಿಸಿ. ಆಗ ಅಗತ್ಯ ಭದ್ರತೆ ಒದಗಿಸಲು ಸಾಧ್ಯವಾಗುತ್ತದೆ. ಅದೇ ರೀತಿ ಬ್ಯಾಂಕ್‌ನ ಒಳಗೆ ಎಲ್ಲ ಗ್ರಾಹಕರ ಚಲವಲನಗಳನ್ನು ಚಿತ್ರೀಕರಿಸಿಕೊಳ್ಳಿ ಎಂದು ಮ್ಯಾನೇಜರ್‌ಗಳಿಗೆ ಸೂಚನೆ ನೀಡಿದರು.

ಎಲ್ಲ ಕಡೆ ಪೊಲೀಸ್ ಹಾಕಲು ಸಾಧ್ಯವಿಲ್ಲದಿದ್ದರೂ ನಗರ ಪ್ರದೇಶದಲ್ಲಿ ನಾವು ಕಟ್ಟೆಚ್ಚರದಲ್ಲಿ ಇರುತ್ತೇವೆ. ತುರ್ತು ಸಂದರ್ಭದಲ್ಲಿ ತಕ್ಷಣ ಮಾಹಿತಿ ನೀಡಿ ಎಂದವರು ಸಲಹೆ ನೀಡಿದರು. ನಗರ ಠಾಣೆ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾತನಾಡಿ, ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ಗ್ರಾಹಕರ ಒತ್ತಡ ನಿಭಾಯಿಸಲು ಸಮಸ್ಯೆ ಆಗಬಹುದು. ಇದನ್ನು ಸರಿದೂಗಿಸಲು ಸಾಧ್ಯವಾದರೆ ಉನ್ನತ ಅಧಿಕಾರಿಗಳಿಗೆ ತಿಳಿಸಿ ಸಿಬ್ಬಂದಿಯ ಹಂಚಿಕೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ನಾನಾ ರೀತಿಯ ಆಮಿಷ ನೀಡಿ ಆನ್‌ಲೈನ್ ವಂಚನೆ ಮೂಲಕ ಹಣ ನುಂಗುವ ಜಾಲವನ್ನು ನಿಗ್ರಹಿಸಲು ಬ್ಯಾಂಕ್‌ಗಳು ಇಲಾಖೆಗೆ ಸಹಕಾರ ನೀಡಬೇಕು ಎಂದು ಎಎಸ್ಪಿ ರಿಷ್ಯಂತ್ ಸಿ.ಬಿ. ಮನವಿ ಮಾಡಿದರು. ಇದಕ್ಕೆ ಬ್ಯಾಂಕ್ ಮ್ಯಾನೇಜರ್‌ಗಳು ಪ್ರತಿಕ್ರಿಯಿಸಿ ವಂಚಕರು ನೇರವಾಗಿ ಗ್ರಾಹಕರಿಗೆ ಕರೆ ಮಾಡುವ ಕಾರಣ ಅವರು ಮೋಸ ಹೋಗುತ್ತಿರುವುದು ನಮಗೆ ಗೊತ್ತಾಗುವುದಿಲ್ಲ. ಮೋಸ ಹೋದ ಬಳಿಕವೇ ಗೊತ್ತಾಗುತ್ತದೆ. ಈ ಬಗ್ಗೆ ಗ್ರಾಹಕರಲ್ಲೇ ಜಾಗೃತಿ ಮೂಡಬೇಕಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ತಮ್ಮ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಬ್ಯಾಂಕ್‌ಗಳು ಮಾಡಬೇಕು ಎಂದರು.

ನಗರ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಎಸ್ಸೈ ಓಮನ, ಟ್ರಾಫಿಕ್ ಎಸ್ಸೈ ನಾಗರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X