ಮಂಗಳೂರಿನಲ್ಲಿ ರಾಜ್ಯ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ವಕೀಲರ ಧರಣಿ
![ಮಂಗಳೂರಿನಲ್ಲಿ ರಾಜ್ಯ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ವಕೀಲರ ಧರಣಿ ಮಂಗಳೂರಿನಲ್ಲಿ ರಾಜ್ಯ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ವಕೀಲರ ಧರಣಿ](https://www.varthabharati.in/sites/default/files/images/articles/2016/11/11/DSC_5156.jpg)
ಮಂಗಳೂರು, ನ.11: ರಾಜ್ಯ ಹೈಕೋರ್ಟ್ನ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಮಂಗಳೂರು ವಕೀಲರ ಸಂಘವು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿತು.
ಅದಕ್ಕೂ ಮೊದಲು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಿಂದ ಜಿಲ್ಲಾಧಿಕಾರಿ ಕಚೇರಿಗೆ ವಕೀಲರು ಜಾಥಾ ನಡೆಸಿದರು. ಸಂಘದ ಅಧ್ಯಕ್ಷ ಎಸ್.ಪಿ. ಚೆಂಗಪ್ಪ ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಯಶೋಧರ ಪಿ. ಕರ್ಕೇರಾ, ಕಾರ್ಯದರ್ಶಿ ರಾಘವೇಂದ್ರ ಎಚ್.ವಿ., ಕೋಶಾಧಿಕಾರಿ ಯತೀಶ್ ಹಾಗು ಎಸ್ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದರು.
Next Story