Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದಿಗೆ ಮುನ್ನ 3 ಕೋಟಿ ಬ್ಯಾಂಕಿಗೆ...

ನೋಟು ರದ್ದಿಗೆ ಮುನ್ನ 3 ಕೋಟಿ ಬ್ಯಾಂಕಿಗೆ ಹಾಕಿದ ಪಶ್ಚಿಮ ಬಂಗಾಳ ಬಿಜೆಪಿ!

ಭುಗಿಲೆದ್ದ ವಿವಾದ

ವಾರ್ತಾಭಾರತಿವಾರ್ತಾಭಾರತಿ12 Nov 2016 9:13 AM IST
share
ನೋಟು ರದ್ದಿಗೆ ಮುನ್ನ 3 ಕೋಟಿ ಬ್ಯಾಂಕಿಗೆ ಹಾಕಿದ ಪಶ್ಚಿಮ ಬಂಗಾಳ ಬಿಜೆಪಿ!

ಕೊಲ್ಕತ್ತಾ, ನ.12 : ಪ್ರಧಾನಿ ನರೇಂದ್ರ ಮೋದಿಯವರು, 500 ಹಾಗೂ 1000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ರದ್ದುಪಡಿಸುವ ನಿರ್ಧಾರ ಪ್ರಕಟಿಸುವ ಎಂಟು ದಿನ ಮುನ್ನ ಬಿಜೆಪಿ ಪಶ್ಚಿಮ ಬಂಗಾಳ ಘಟಕ 3 ಕೋಟಿ ರೂಪಾಯಿಗಳನ್ನು ಬ್ಯಾಂಕಿಗೆ ಪಾವತಿ ಮಾಡಿರುವುದು ವಿವಾದ ಎಬ್ಬಿಸಿದೆ. ಪ್ರಧಾನಿ ಭಾಷಣದ ಕೆಲವೇ ಕ್ಷಣಗಳ ಮುನ್ನ 40 ಲಕ್ಷ ರೂಪಾಯಿಗಳನ್ನು ಬಿಜೆಪಿ ರಾಜ್ಯ ಘಟಕದ ಬ್ಯಾಂಕಿಗೆ ಜಮಾ ಮಾಡಿರುವ ಅಂಶ ಇದೀಗ ಬಹಿರಂಗವಾಗಿದೆ.

ಆದರೆ ಇವೆರಡರ ನಡುವೆ ಸಂಬಂಧ ಕಲ್ಪಿಸುವುದು ಬೇಡ ಎಂದು ಬಿಜೆಪಿ ಹೇಳಿಕೊಂಡಿದೆ. ನವೆಂಬರ್ 19ರಂದು ಒಂದು ವಿಧಾನಸಭಾ ಕ್ಷೇತ್ರ ಹಾಗೂ ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ತಯಾರಿ ಮಾಡಿಕೊಂಡಿತ್ತು ಎನ್ನುವುದು ವಿರೋಧ ಪಕ್ಷಗಳ ಆರೋಪ. ಇಂಡಿಯನ್ ಬ್ಯಾಂಕಿನ ಸೆಂಟ್ರಲ್ ಅವೆನ್ಯೂ ಶಾಖೆಯಲ್ಲಿ ಈ ಠೇವಣಿ ಮಾಡಿರುವುದನ್ನು ಬ್ಯಾಂಕ್ ಶಾಖೆ ದೃಢಪಡಿಸಿದೆ. ಸಿಪಿಎಂ ಮುಖವಾಣಿ ಗಣಶಕ್ತಿಯಲ್ಲಿ ಪ್ರಕಟವಾದ ವರದಿಯ ಪ್ರಕಾರ, ಬಿಜೆಪಿ ನವೆಂಬರ್ 8ರಂದು 60 ಲಕ್ಷ ಮತ್ತು 40 ಲಕ್ಷ ರೂಪಾಯಿಗಳನ್ನು ಬ್ಯಾಂಕಿಗೆ ಪಾವತಿಸಿದೆ. ಮೊದಲ ಪಾವತಿಯನ್ನು ಉಳಿತಾಯ ಖಾತೆಗೆ ಮಾಡಿದ್ದು, ಎರಡನೇ ಬಾರಿ ರಾತ್ರಿ 8 ಗಂಟೆಗೆ ಜಮಾ ಮಾಡಲಾಗಿದೆ. ಎಲ್ಲವೂ 500 ಹಾಗೂ 1000 ರೂಪಾಯಿ ನೋಟುಗಳು ಎಂದು ವರದಿ ಹೇಳಿದೆ.

ಬಿಜೆಪಿ ಘಟಕ ಹೊಂದಿರುವ ಇತರ ಖಾತೆಗಳಿಗೆ 75 ಲಕ್ಷ ಹಾಗೂ 1.25 ಕೋಟಿ ರೂಪಾಯಿಯನ್ನು ನವೆಂಬರ್ 1 ಹಾಗೂ 5ರಂದು ಜಮಾ ಮಾಡಲಾಗಿದೆ. ಬಿಜೆಪಿ ಪದಾಧಿಕಾರಿಗಳಿಗೆ ಈ ಸುದ್ದಿ ಮೊದಲೇ ಗೊತ್ತಾಗಿರುವ ಸಾಧ್ಯತೆ ಇದ್ದು, ದೇಶಾದ್ಯಂಥ ಇಂಥ ತಂತ್ರ ಹೂಡಿ ಕಪ್ಪು ಹಣವನ್ನು ಪರಿವರ್ತಿ ಸಿಕೊಂಡಿರಬೇಕು ಎಂಬ ಶಂಕೆಯನ್ನು ಸಿಪಿಎಂ ರಾಜ್ಯ ಕಾರ್ಯದರ್ಶಿ ಸೂರ್ಯಕಾಂತ ಮಿಶ್ರ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಇದನ್ನು ನಿರಾಕರಿಸಿದ್ದಾರೆ.

ಈ ಮಧ್ಯೆ ಪ್ರಧಾನಿ, ಆಯ್ದ ವ್ಯಕ್ತಿಗಳಿಗೆ ಈ ಮಾಹಿತಿಯನ್ನು ಮೊದಲೇ ಸೋರಿಕೆ ಮಾಡಿದ್ದರು ಎಂದು ಕಾಂಗ್ರೆಸ್ ಪಕ್ಷ ಆಪಾದಿಸಿದೆ. ಹೀಗೆ ದುರ್ಲಾಭ ಪಡೆದಿರುವ ವ್ಯಕ್ತಿಗಳ ಹೆಸರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಆನಂದ ಶರ್ಮಾ ದೂರಿದ್ದಾರೆ. ಅಕ್ಟೋಬರ್ 20ರ ಬಳಿಕ 5 ಲಕ್ಷಕ್ಕಿಂತ ಅಧಿಕ ಮೌಲ್ಯದ ಚಿನ್ನ ಖರೀದಿಸಿದ ಹಾಗೂ ವಿದೇಶಿ ವಿನಿಮಯ ಮತ್ತು ಷೇರುಗಳಲ್ಲಿ ತೊಡಗಿಸಿದವರ ವಿವರ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X