Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಪಮೌಲ್ಯದಿಂದ ಜನ ಸಾಮಾನ್ಯರಿಗೆ...

ನೋಟು ಅಪಮೌಲ್ಯದಿಂದ ಜನ ಸಾಮಾನ್ಯರಿಗೆ ತೊಂದರೆ: ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ12 Nov 2016 7:52 PM IST
share
ನೋಟು ಅಪಮೌಲ್ಯದಿಂದ ಜನ ಸಾಮಾನ್ಯರಿಗೆ ತೊಂದರೆ: ಚಿದಂಬರಂ

ಚೆನ್ನೈ, ನ.12: ದೊಡ್ಡ ಬೆಲೆಯ ನೋಟುಗಳ ರದ್ದತಿಯಿಂದ ಕಪ್ಪು ಹಣ ನಿಯಂತ್ರಣಕ್ಕೆ ಬರುವುದೆಂಬ ಸರಕಾರದ ವಾದಕ್ಕೆ ತಕರಾರೆತ್ತಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಅದರಿಂದ ಕೇವಲ ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆಂದು ಶನಿವಾರ ಹೇಳಿದ್ದಾರೆ.
ಜನರು ಔಷಧ, ಬಸ್ಸು-ರೈಲುಗಳ ಟಿಕೆಟ್ ಖರೀದಿ ಹಾಗೂ ಆಟೊ ರಿಕ್ಷಾಗಳಿಗೆ ಹಣ ನೀಡಲು ತ್ರಾಸ ಪಡುತ್ತಿದ್ದಾರೆ. ಹೆಚ್ಚಿನವರ ಕೈಯಲ್ಲಿರುವುದು ರೂ. 500 ಹಾಗೂ 1000ದ ನೋಟುಗಳೇ ಆಗಿವೆ. ಹೆಚ್ಚು ಚಲಾವಣೆಯಲ್ಲಿದ್ದ ನೋಟುಗಳ ರದ್ದತಿಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗದೆಂಬ ಸರಕಾರದ ಹೇಳಿಕೆ ತಮಾಷೆಯದಾಗಿದೆಯೆಂದು ಅವರು ಟೀಕಿಸಿದ್ದಾರೆ.
ಇದು ಕಪ್ಪು ಹಣ ನಿವಾರಣೆಗೆ ಕ್ರಮವಲ್ಲ. ಕೇಂದ್ರದ ನಿರ್ಧಾರದಿಂದ ಜನ ಸಾಮಾನ್ಯರಿಗೆ ಬಾಧೆಯಾಗುತ್ತದೆ. ಇದು ತನ್ನ ಅಭಿಪ್ರಾಯವಾಗಿದೆಯೆಂದು ಚಿದಂಬರಂ ಪತ್ರಕರ್ತರಿಗೆ ತಿಳಿಸಿದರು.
ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು ರೂ. 2000ದ ನೋಟುಗಳನ್ನು ಚಲಾವಣೆಗೆ ತರುವುದು ಬೇಡ. ಅದರಿಂದ ಸಾರ್ವಜನಿಕರಿಗೆ ಅನುನೂಲಕ್ಕಿಂತ ಹೆಚ್ಚು ತೊಂದರೆಯೇ ಆಗಲಿದೆಯೆಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿತ್ತು. ಅದನ್ನು ನಿರ್ಲಕ್ಷಿಸಿ ಸರಕಾರವೀಗ ಭಾರೀ ಚಲಾವಣೆಯಲ್ಲಿದ್ದ ರೂ. 500 ಹಾಗೂ 1000ದ ನೋಟುಗಳನ್ನು ನಿಷೇಧಿಸಿದೆಯೆಂದು ಅವರು ಆರೋಪಿಸಿದರು.
ಚಲಾವಣೆಯಲ್ಲಿರುವ ನೋಟುಗಳಲ್ಲಿ ಶೇ.86ರಷ್ಟು ರೂ. 500 ಹಾಗೂ 1000ದ ನೋಟುಗಳೇ ಅಗಿವೆ. ದೇಶಾದ್ಯಂತ ರೂ. 17ಲಕ್ಷ ಕೋಟಿ ವೌಲ್ಯದ ನೋಟುಗಳು ಚಲಾವಣೆಯಲ್ಲಿವೆ. ಅವುಗಳಲ್ಲಿ ರೂ. 400 ಕೋಟಿಯಷ್ಟು ನಕಲಿ ನೋಟುಗಳಿವೆಯೆಂದು ನಂಬಲಾಗಿದೆ. ಕೇವಲ ರೂ. 400 ಕೋಟಿಯ ನಕಲಿ ನೋಟು ನಾಶ ಮಾಡಲು ರೂ. 17 ಲಕ್ಷ ಕೋಟಿಯ ಚಲಾವಣೆಯನ್ನು ತಡೆಯುವ ಅಗತ್ಯವೇನಿತ್ತು ಎಂದು ಚಿದಂಬರಂ ಪ್ರಶ್ನಿಸಿದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇವಲ ‘ಛಾಯಾಚಿತ್ರದ ಅವಕಾಶಕ್ಕೆ’ ಮಾತ್ರ ನೋಟು ಬದಲಾವಣೆಗಾಗಿ ಸರತಿಯ ಸಾಲಿನಲ್ಲಿ ನಿಂತಿದ್ದರೆಂಬ ಬಿಜೆಪಿಯ ಟೀಕೆಯ ಕುರಿತು ಮಾತನಾಡಿದ ಅವರು, ಅದರ ಹೊರತು ಅವರೇನು ಮಾಡಬೇಕಿತ್ತು? ಅವೌಲ್ಯವಾದ ನೋಟುಗಳೊಂದಿಗೆ ಒಬ್ಬನು ಬದುಕಲು ಸಾಧ್ಯವಿದೆಯೇ? ಅದಕ್ಕಾಗಿ ರಾಹುಲ್ ರೂ. 4000 ಬದಲಾಯಿಸಿಕೊಳ್ಳಲು ಹೋಗಿದ್ದರು. ಸಂಬಂಧಿತ ಸಚಿವರ ಮನೆಯಲ್ಲಿ ಹೊಸ ನೋಟುಗಳ ಬದಲಾವಣೆ ಆಗುತ್ತದೆಯೇ ಎಂಬುದು ತನಗೆ ತಿಳಿದಿಲ್ಲ. ಉಳಿದವರು ಅದಕ್ಕಾಗಿ ಬ್ಯಾಂಕ್‌ಗಳಿಗೇ ಹೋಗಬೇಕಾಗುತ್ತದೆಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X