Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾಶ್ಮೀರಿ ಬಾಲೆ ತಜಮುಲ್ ಇಸ್ಲಾಮ್‌ಗೆ...

ಕಾಶ್ಮೀರಿ ಬಾಲೆ ತಜಮುಲ್ ಇಸ್ಲಾಮ್‌ಗೆ ವಿಶ್ವ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

ವಾರ್ತಾಭಾರತಿವಾರ್ತಾಭಾರತಿ12 Nov 2016 8:05 PM IST
share
ಕಾಶ್ಮೀರಿ ಬಾಲೆ ತಜಮುಲ್ ಇಸ್ಲಾಮ್‌ಗೆ ವಿಶ್ವ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

ಶ್ರೀನಗರ, ನ.12: ಕಾಶ್ಮೀರ ಕಣಿವೆಯ ಹಿಂದುಳಿದ ಪ್ರದೇಶದ 8ರ ಹರೆಯದ ಬಾಲಕಿ ಇಟಲಿಯಲ್ಲಿ ನಡೆದ ವಿಶ್ವ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಬಂದಿಪೊರ ಜಿಲ್ಲೆಯ ಹಳ್ಳಿಯೊಂದರ ಬಾಲಕಿ ತಜಮುಲ್ ಇಸ್ಲಾಮ್ ಸಬ್-ಜೂನಿಯರ್ ಮಟ್ಟದ ಸ್ಪರ್ಧೆಯಲ್ಲಿ ಎದುರಾಳಿ ಅಮೆರಿಕದ ಬಾಲಕಿಯನ್ನು ಮಣಿಸಿ ಚಿನ್ನದ ಪದಕವನ್ನು ಜಯಿಸಿದರು.

ತಜಮುಲ್ ಕಿಕ್ ಬಾಕ್ಸಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಜಯಿಸಿದ ವಿಶ್ವದ ಮೊದಲ ಕಿರಿಯ ಬಾಕ್ಸರ್ ಆಗಿದ್ದಾರೆ. ಸಬ್-ಜೂನಿಯರ್ ಮಟ್ಟದಲ್ಲಿ 14 ವರ್ಷದವರೆಗಿನ ಸ್ಪರ್ಧಿಗಳು ಭಾಗವಹಿಸಬಹುದು. ಈ ವಿಭಾಗದಲ್ಲಿ ತಜಮುಲ್ ಕಿರಿಯ ಸ್ಪರ್ಧಿಯಾಗಿದ್ದರು ಎಂದು ತಜಮುಲ್ ಕೋಚ್ ಫಸಿಲ್ ಅಲಿ ಹೇಳಿದ್ದಾರೆ. ತಜಮುಲ್ ಸಾಧನೆಯು ಶುಕ್ರವಾರ ವೈರಲ್‌ನಂತೆ ಹರಿದಾಡುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಬಾಲಕಿಗೆ ಟ್ವಿಟರ್‌ನ ಮೂಲಕ ಅಭಿನಂದನೆ ಸಲ್ಲಿಸಿದರು.

 ತರ್ಕಪೊರ ಹಳ್ಳಿಯ ಅಲಿ ಕಳೆದ ಎರಡು ವರ್ಷಗಳಿಂದ ತಜಮುಲ್‌ಗೆ ಕೋಚಿಂಗ್ ನೀಡುತ್ತಿದ್ದಾರೆ. ಬಾಲಕಿ ನನ್ನ ಬಳಿ ಕೋಚಿಂಗ್‌ಗೆ ಬರುವಾಗ ಯುಕೆಜಿಯಲ್ಲಿ ಪಾಸಾಗಿದ್ದಳು. ಹಿಂಸಾತ್ಮಕ ಪರಿಸ್ಥಿತಿಯಿಂದ ಕೂಡಿರುವ ಕಾಶ್ಮೀರದಲ್ಲಿ ಮೂಲಭೂತ ಸೌಕರ್ಯದ ಕೊರತೆಯಿದ್ದರೂ ತಜಮುಲ್ ಚಿನ್ನದ ಪದಕವನ್ನು ಜಯಿಸಿ ಇಡೀ ದೇಶದ ಗಮನ ಸೆಳೆದಿದ್ದಾರೆ.

ಕಳೆದೆ ವರ್ಷ ದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಬ್-ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕವನ್ನು ಜಯಿಸುವುದರೊಂದಿಗೆ ತಜಮುಲ್ ಪ್ರತಿಭೆ ಮೊದಲ ಬಾರಿ ಬೆಳಕಿಗೆ ಬಂದಿತ್ತು. ಇಲ್ಲಿ ನೀಡಿರುವ ಪ್ರದರ್ಶನದ ಆಧಾರದಲ್ಲಿ ಈ ತಿಂಗಳಾಂತ್ಯದಲ್ಲಿ ಇಟಲಿಯ ಆ್ಯಂಡ್ರಿಯದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದರು.

ಐದು ದಿನಗಳ ಕಾಲ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನ.10 ರಂದು ಕೊನೆಗೊಂಡಿತ್ತು. ತಜಮುಲ್ ಆರು ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಮಕ್ಕಳ ದಿನಾಚರಣೆಯಂದು(ನ.14) ತಜಮುಲ್ ಸ್ವದೇಶಕ್ಕೆ ವಾಪಸಾಗಲಿದ್ದಾರೆ ಎಂದು ಕೋಚ್ ಅಲಿ ಹೆಮ್ಮೆಯಿಂದ ಹೇಳಿಕೊಂಡರು.

ಶ್ರೀನಗರದಿಂದ 65 ಕಿ.ಮೀ. ದೂರದಲ್ಲಿರುವ ತರ್ಕ್‌ಪೊರ ಹಳ್ಳಿಯಲ್ಲಿ ತಜಮುಲ್ ಮನೆ ಮಾತಾಗಿದ್ದಾರೆ. ತಜಮುಲ್ ಬಂದಿಪೊರದ ಆರ್ಮಿ ಗುಡ್‌ವಿಲ್ ಸ್ಕೂಲ್‌ನಲ್ಲಿ ಓದುತ್ತಿದ್ದು ಬಾಲಕಿಯ ತಂದೆ ಚಾಲಕ ವೃತ್ತಿಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X