Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿಯ ವೈಫಲ್ಯ ಮುಚ್ಚಲು ನೋಟು ರದ್ದತಿ:...

ಮೋದಿಯ ವೈಫಲ್ಯ ಮುಚ್ಚಲು ನೋಟು ರದ್ದತಿ: ಕೇರಳ ಸಿಪಿಐ

ವಾರ್ತಾಭಾರತಿವಾರ್ತಾಭಾರತಿ12 Nov 2016 11:59 PM IST
share

ತಿರುವನಂತಪುರ, ನ.12: ಕಪ್ಪು ಹಣವನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ‘ವೈಫಲ್ಯವನ್ನು’ ಮುಚ್ಚಿ ಹಾಕುವುದಕ್ಕಾಗಿ ರೂ. 500 ಹಾಗೂ ರೂ. 1000ದ ನೋಟುಗಳನ್ನು ರದ್ದುಪಡಿಸಲಾಗಿದೆಯೆಂದು ಸಿಪಿಐಯ ಕೇರಳ ಘಟಕ ಆರೋಪಿಸಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಈ ಕ್ರಮ ಕಪ್ಪು ಹಣವನ್ನು ಮಟ್ಟ ಹಾಕಲಾರದು. ಕಪ್ಪು ಹಣವು ಬಂಗಾರ ಹಾಗೂ ಸ್ಟಾಕ್ ಎಕ್ಸ್‌ಚೇಂಜ್ ಠೇವಣಿಗಳ ರೂಪದಲ್ಲಿ ಅಸ್ತಿತ್ವವನ್ನು ಮುಂದುವರಿಸಲಿದೆಯೆಂದು ಸಿಪಿಐ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ್ ಪ್ರತಿಪಾದಿಸಿದ್ದಾರೆ.
ಕೇರಳ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸಂಘಟಿಸಿದ್ದ ‘ಮಾಧ್ಯಮ ಭೇಟಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇರಳದ ಸಹಕಾರಿ ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣವನ್ನು ರಾಶಿ ಹಾಕಲಾಗಿದೆಯೆಂಬ ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದರು.
ನೋಟು ರದ್ದತಿಯಿಂದ ಕಪ್ಪು ಹಣ ಅಂತ್ಯವಾಗುವುದೇ? ಹಾಗಾದರೆ ಚಿನ್ನ ಹಾಗೂ ಸ್ಟಾಕ್ ಎಕ್ಸ್‌ಚೇಂಜ್ ಠೇವಣಿಗಳ ರೂಪದಲ್ಲಿ ಅನಧಿಕೃತ ಹಣದ ನಿಯಂತ್ರಣಕ್ಕೆ ಮಾರ್ಗವೇನು? ಎಂದು ರಾಜೇಂದ್ರನ್ ಪ್ರಶ್ನಿಸಿದರು.
ವಿದೇಶಗಳಲ್ಲಿ ಠೇವಣಿಯಿರಿಸಿರುವ ಕಪ್ಪು ಹಣ ಮರಳಿ ತರುತ್ತೇವೆಂದು ಮೋದಿ 2 ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ, ಅದನ್ನು ಮಾಡಲು ಅವರು ವಿಫಲರಾಗಿದ್ದಾರೆ. ಈ ವೈಫಲ್ಯವನ್ನು ಮುಚ್ಚಲು ಇದೀಗ ನೋಟು ರದ್ದತಿ ಮಾಡಲಾಗಿದೆಯೆಂದು ಅವರು ಆರೋಪಿಸಿದರು.
ರಾಜ್ಯದಲ್ಲಿರುವ ಸಹಕಾರಿ ಬ್ಯಾಂಕ್‌ಗಳಲ್ಲಿರುವ ಠೇವಣಿಗಳ ಬಗ್ಗೆ ತನಿಖೆ ನಡೆಸಬೇಕೆಂಬ ಬಿಜೆಪಿಯ ಆಗ್ರಹವು, ಸಹಕಾರಿ ವಲಯವನ್ನು ನಾಶಗೊಳಿಸುವ ಲೆಕ್ಕಾಚಾರದ ನಡೆಯ ಒಂದು ಭಾಗವಾಗಿದೆ. ಸಹಕಾರಿ ಬ್ಯಾಂಕ್‌ಗಳು ರಿಸರ್ವ್ ಬ್ಯಾಂಕ್‌ನ ಪರವಾನಿಗೆಯನ್ವಯ ಕಾರ್ಯಾಚರಿಸುತ್ತಿವೆ. ಅವು ರಾಜ್ಯದ ಕೃಷಿ ವಲಯದ ಬೆನ್ನೆಲುಬಾಗಿವೆ ಹಾಗೂ ಆರ್ಥಿಕತೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಕೇರಳದಂತೆಯೇ ಗುಜರಾತ್‌ನಲ್ಲೂ ಸಹಕಾರಿ ಬ್ಯಾಂಕ್‌ಗಳು ಮಹತ್ವದ ಪಾತ್ರ ವಹಿಸುತ್ತಿವೆಯೆಂದು ರಾಜೇಂದ್ರನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X