Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 150 ವರ್ಷ ಹಳೆಯ ಕ್ರೈಸ್ತ ವಿಚ್ಛೇದನ...

150 ವರ್ಷ ಹಳೆಯ ಕ್ರೈಸ್ತ ವಿಚ್ಛೇದನ ಕಾಯ್ದೆ ತಿದ್ದುಪಡಿಗೆ ಚಳಿಗಾಲದ ಸಂಸದಧಿವೇಶನದಲ್ಲಿ ಮಸೂದೆ

ವಾರ್ತಾಭಾರತಿವಾರ್ತಾಭಾರತಿ13 Nov 2016 7:50 PM IST
share
150 ವರ್ಷ ಹಳೆಯ ಕ್ರೈಸ್ತ ವಿಚ್ಛೇದನ ಕಾಯ್ದೆ ತಿದ್ದುಪಡಿಗೆ ಚಳಿಗಾಲದ ಸಂಸದಧಿವೇಶನದಲ್ಲಿ ಮಸೂದೆ

ಹೊಸದಿಲ್ಲಿ, ನ.13: ಪರಸ್ಪರ ಸಮ್ಮತಿಯಿಂ ವಿಚ್ಛೇದನ ಪಡೆಯಲು ಕ್ರೈಸ್ತ ದಂಪತಿಗಳಿಗಿರುವ 2 ವರ್ಷಗಳ ಕಾಯುವಿಕೆಯ ಅವಧಿ ಶೀಘ್ರವೇ ಕೊನೆಗೊಳ್ಳುವ ಸಾಧ್ಯತೆಯಿದೆ. ಸರಕಾರವು 150 ವರ್ಷ ಹಳೆಯ ಕ್ರೈಸ್ತ ವಿವಾಹ ಕಾಯ್ದೆಗೆ ತಿದ್ದುಪಡಿ ತಂದು ಕಾಯುವಿಕೆಯ ಅವಧಿಯನ್ನು ಒಂದು ವರ್ಷಕ್ಕೆ ಇಳಿಸುವ ಚಿಂತನೆಯಲ್ಲಿದೆ. ಈ ಕುರಿತು ಕ್ರೈಸ್ತ ಸಮುದಾಯ ಸತತವಾಗಿ ಬೇಡಿಕೆಯಿರಿಸಿತ್ತು.

ಸರಕಾರವು ವಿಚ್ಛೇದನ (ತಿದ್ದುಪಡಿ) ಮಸೂದೆ-2016ನ್ನು ನ.16ರಂದು ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳುವ ನಿರೀಕ್ಷೆಯಿರುವ ‘ಸರಕಾರಿ ಕಾನೂನು ಹಾಗೂ ಆರ್ಥಿಕ ವ್ಯವಹಾರಗಳ ಸಂಭಾವ್ಯ ಪಟ್ಟಿಯಲ್ಲಿ’ ಇರಿಸಿದೆ.

ಆದಾಗ್ಯೂ, ಕ್ರೈಸ್ತರ ವಿವಾಹಕ್ಕೆ ಸಂಬಂಧಿಸಿದ ಪ್ರಸ್ತಾವಗಳ ತಿದ್ದುಪಡಿಗೆ ಕೇಂದ್ರ ಸಂಪುಟವು ಇನ್ನಷ್ಟೇ ಅನುಮೋದನೆ ನೀಡಬೇಕಿದೆ.

ಕಾನೂನು ಸಚಿವಾಲಯದ ಪ್ರಸ್ತಾವದ ಪ್ರಕಾರ, ಕ್ರೈಸ್ತ ದಂಪತಿಯ ಪ್ರತ್ಯೇಕಗೊಳ್ಳುವ ಅವಧಿಯನ್ನು ಈಗಿರುವ 2 ವರ್ಷಗಳಿಂದ ಒಮದು ವರ್ಷಕ್ಕೆ ಇಳಿಸಲಾಗುವುದು. ಆ ಬಳಿಕ ಅವರು ಪರಸ್ಪರ ಸಮ್ಮತಿಯ ವಿಚ್ಛೇದನಕ್ಕೆ ಅರ್ಜಿ ದಾಖಲಿಸಬಹುದು. ಇದರಿಂದಾಗಿ ಇತರ ಸಮುದಾಯಗಳಿಗಿರುವ ಕಾನೂನಿನಂತೆಯೇ ಕ್ರೈಸ್ತರ ವಿಚ್ಛೇದನ ಕಾನೂನು ಮಾರ್ಪಾಟಾಗಲಿದೆ.

ಹಿಂದೂ, ಪಾರ್ಸಿ ವಿವಾಹ ಮತ್ತು ವಿಚ್ಛೇದನ ಕಾಯ್ದೆಗಳಲ್ಲಿ ಹಾಗೂ ವಿಶೇಷ ವಿವಾಹ ಕಾಯ್ದೆಗಳಲ್ಲಿ ಪ್ರತ್ಯೇಕವಾಗಿರಬೇಕಾದ ಅವಧಿ ಒಂದು ವರ್ಷವಾಗಿದೆ.

ವಿಚ್ಛೇದನ ಕೋರುವ ಕ್ರೈಸ್ತ ದಂಪತಿ 2 ಅಥವಾ ಹೆಚ್ಚು ವರ್ಷ ಪ್ರತ್ಯೇಕವಾಗಿ ವಾಸಿಸುತ್ತಿರಬೇಕೆಂದು 2001ರಲ್ಲಿ ತಿದ್ದುಪಡಿಯೊಂದರ ಮೂಲಕ ವಿಚ್ಛೇದನ ಕಾಯ್ದೆಗೆ ಸೇರಿಸಲಾಗಿದ್ದ ಸೆ.10ಎ(1) ಹೇಳುತ್ತಿದೆ.

ಇತರರಿಗಿಲ್ಲದ ಕಾಯುವಿಕೆ ಅವಧಿ ಕ್ರೈಸ್ತರಿಗೆ ಮಾತ್ರ ಯಾಕೆ? ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವಂತೆ ಎಪ್ರಿಲ್‌ನಲ್ಲಿ ಸರಕಾರಕ್ಕೆ ಆದೇಶ ನೀಡಿತ್ತು ಹಾಗೂ ಕ್ರೈಸ್ತ ಸಮುದಾಯದವರೂ ಈ ಬಗ್ಗೆ ಸತತ ಒತ್ತಾಯಿಸುತ್ತಲೇ ಬಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X