Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾಧಿಕಾರಿಗಳನ್ನು ಬದಲಿಸಲು...

ಉಡುಪಿ ಜಿಲ್ಲಾಧಿಕಾರಿಗಳನ್ನು ಬದಲಿಸಲು ನಂದಿಕೂರು ಜನಜಾಗೃತಿ ಸಮಿತಿ ಅಧ್ಯಕ್ಷರ ಮನವಿ

ವಾರ್ತಾಭಾರತಿವಾರ್ತಾಭಾರತಿ13 Nov 2016 8:49 PM IST
share

ಉಡುಪಿ, ನ.13: ಎಲ್ಲೂರು ಕೇಂದ್ರಿತವಾಗಿ ಕಾರ್ಯಾಚರಿಸುತ್ತಿರುವ ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣವಿದ್ಯುತ್ ಸ್ಥಾವರದ ವಿಸ್ತರಣೆಗಾಗಿ ನ.10ರಂದು ಕೆಂಜೂರು ಶಾಲಾ ಮೈದಾನದಲ್ಲಿ ನಡೆದ ಪರಿಸರ ಸಾರ್ವಜನಿಕ ಸಭೆ, ಉಡುಪಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಅದಾನಿ ಕಂಪೆನಿ ಪೂರ್ವನಿರ್ಧರಿಸಿದ ರೀತಿಯಲ್ಲಿ ನಡೆದಿದ್ದು, ಸಂತ್ರಸ್ಥ ಜನರ ಸಂಕಷ್ಟ ಗಳನ್ನು ಆಲಿಸದೇ ಅನ್ಯಾಯವೆಸಗಲಾಗಿದೆ ಎಂದು ಯೋಜನೆ ವಿರುದ್ಧ ಹೋರಾಟ ನಡೆಸುತ್ತಿರುವ ನಂದಿಕೂರು ಜನಜಾಗೃತಿ ಸಮಿತಿ ಅಧ್ಯಕ್ಷ ಹಾಗೂ ಯೋಜನೆಯ ಸಂತ್ರಸ್ಥರಾಗಿರುವ ಬಾಲಕೃಷ್ಣ ಶೆಟ್ಟಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಯುಪಿಸಿಎಲ್ ವಿಸ್ತರಣೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ಥರಾಗುವ ಜನರ ವಿಶ್ವಾಸವನ್ನು ಕಳೆದು ಕೊಂಡಿದ್ದು, ಅವರನ್ನು ಕೂಡಲೇ ವಾಪಸು ಕರೆಸಿಕೊಂಡು ಅವರ ಸ್ಥಾನಕ್ಕೆ ಬೇರೆಯವರನ್ನು ನೇಮಿಸುವಂತೆ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಇಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇಡೀ ಜಿಲ್ಲೆಯಲ್ಲಿ 144 ಸೆಕ್ಷನ್‌ನಡಿ ನಿಷೇಧಾಜ್ಞೆ ಇರುವಾಗಲೇ ಈ ಸಂತ್ರಸ್ತ ಜನರ ಅಹವಾಲು ಆಲಿಕೆ ಸಭೆಯನ್ನು ನಡೆಸಲಾಗಿದೆ. ಆದುದರಿಂದ ಈ ಸಭೆಯೇ ಅಕ್ರಮವಾಗಿದೆ. ಈ ಕುರಿತು ಕಾಪು ಶಾಸಕ ವಿನಯಕುಮಾರ್ ಸೊರಕೆ ಅವರು ಜಿಲ್ಲಾಧಿಕಾರಿಗಳ ಗಮನ ಸೆಳೆದು ಸಭೆಯನ್ನು ಮುಂದೂಡುವಂತೆ ಕೇಳಿಕೊಂಡರೂ ಆಶ್ಚರ್ಯವೆಂಬಂತೆ ಜಿಲ್ಲಾಧಿಕಾರಿಗಳು ಈ ಮನವಿಯನ್ನು ತಳ್ಳಿಹಾಕಿದ್ದರು ಎಂದು ಬಾಲಕೃಷ್ಣ ಶೆಟ್ಟಿ ಪತ್ರದಲ್ಲಿ ವಿವರಿಸಿದ್ದಾರೆ.

ಈ ಸಭೆಗಾಗಿಯೇ ಯುಪಿಸಿಎಲ್ ಕಂಪೆನಿ ಮಂಗಳೂರು ಹಾಗೂ ದೂರದ ಇತರ ಕಡೆಗಳಿಂದ ಬಾಡಿಗೆ ಜನರನ್ನು ಹಾಗೂ ಗೂಂಡಾಗಳನ್ನು ಬಸ್ಸುಗಳಲ್ಲಿ ಕರೆದುಕೊಂಡು ಬಂದಿತ್ತು. ಇದರಿಂದ ಯೋಜನೆಯಿಂದ ಸಂತ್ರಸ್ತರಾಗುವವರು ಹಾಗೂ ಈಗಾಗಲೇ ಸಂತ್ರಸ್ಥರಾಗಿ ನಾನಾ ತೊಂದರೆಗಳಿಂದ ಬಳಲುತ್ತಿರು ವವರಿಗೆ ಸಭೆಯ ಸಮೀಪ ಬರಲು ಅವಕಾಶ ಸಿಗಲಿಲ್ಲ.

ಯೋಜನೆಯಿಂದ ಪ್ರದೇಶದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ನೇರಿ ತಯಾರಿಸಿದ ವರದಿಯನ್ನು ಅಂದಿನ ಸಭೆಯಲ್ಲಿ ಮಂಡಿಸಲಾಗಿಲ್ಲ. ಕಂಪೆನಿಯ ಬಾಡಿಗೆ ಜನರು ಸಭೆಯಲ್ಲಿ ಮಾತನಾಡಲು ಹೆಚ್ಚಿನ ಅವಕಾಶ ಪಡೆದು ಸಿಎಸ್‌ಆರ್ ನಿಧಿಗಾಗಿ ಯುಪಿಸಿಎಲ್ ಕಂಪೆನಿ, ಹಾಗೂ ಅದಾನಿ ಕಂಪೆನಿಯನ್ನು ಹೊಗಳಲು ಅವಕಾಶವನ್ನು ದುರುಪಯೋಗ ಪಡಿಸಿಕೊಂಡರು. ಅಲ್ಲಿ ಯೋಜನೆಯ, ಅದರ ವಿಸ್ತರಣೆಯ ಸಾಧಕ-ಬಾಧಕಗಳ ಕುರಿತು ಯಾವುದೇ ಚರ್ಚೆ ನಡೆಯಲೂ ಇಲ್ಲ ಹಾಗೂ ಅದನ್ನು ಪ್ರಸ್ತಾಪಿಸಲೂ ಹೋಗಲಿಲ್ಲ ಎಂದವರು ದೂರಿದರು.

ಅಂದು ಯೋಜನೆಯ ವಿರುದ್ಧ ದಾಖಲೆಗಳ ಸಹಿತ ಮಾತನಾಡಲು ಮುಂದಾದ ಮೂರ್ನಾಲ್ಕು ಮಂದಿಗೆ ಕಂಪೆನಿಯ ಬಾಡಿಗೆ ಗೂಂಡಾಗಳು ಮಾತನಾಡಲು ಅವಕಾಶವನ್ನು ನೀಡಲಿಲ್ಲ. ಆಶ್ಚರ್ಯದ ಸಂಗತಿ ಎಂದರೆ ಜಿಲ್ಲಾಧಿಕಾರಿಗಳೂ ಇವರೊಂದಿಗೆ ಸೇರಿ ಇವರು ಮಾತನಾಡಲು ವಿರೋಧ ಸೂಚಿಸಿದರು. ಈ ಮೂಲಕ ಜಿಲ್ಲಾಧಿಕಾರಿಗಳು ಈ ಯೋಜನೆಯಲ್ಲಿ ವೈಯಕ್ತಿಕ ಆಸಕ್ತಿಯನ್ನು ತೋರ್ಪಡಿಸಿದರು. ಈ ಬಗ್ಗೆ ತನ್ನ ಬಳಿ ಸ್ಪಷ್ಟ ವಿಡಿಯೋ ಪುರಾವೆ ಇದೆ ಎಂದು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಈ ಎಲ್ಲಾ ಕಾರಣಗಳಿಗಾಗಿ ಜನತೆಯನ್ನು ವಿಶ್ವಾಸವನ್ನೇ ಕಳೆದುಕೊಂಡಿರುವ ಹಾಗೂ ತನ್ನ ಸ್ಥಾನದಲ್ಲಿ ಮುಂದುವರಿಯಲು ಅಸಮರ್ಥರಾದ ಉಡುಪಿಯ ಈಗಿನ ಜಿಲ್ಲಾಧಿಕಾರಿಗಳನ್ನು ತಕ್ಷಣವೇ ಬದಲಿಸಿ, ಅವರ ಸ್ಥಾನಕ್ಕೆ ಜವಾಬ್ದಾರಿ ಯುತ, ಪ್ರಾಮಾಣಿಕ ಹಾಗೂ ಬದ್ಧತೆಯುಳ್ಳ ಜಿಲ್ಲಾಧಿಕಾರಿಯೊಬ್ಬರನ್ನು ನೇಮಿಸುವಂತೆ ಬಾಲಕೃಷ್ಣ ಶೆಟ್ಟಿ ಅವರು ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X