Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಮತಾ ಕರೆಗೆ ಸ್ಪಂದಿಸದ ಸಿಪಿಎಂ

ಮಮತಾ ಕರೆಗೆ ಸ್ಪಂದಿಸದ ಸಿಪಿಎಂ

ವಾರ್ತಾಭಾರತಿವಾರ್ತಾಭಾರತಿ13 Nov 2016 10:35 PM IST
share
ಮಮತಾ ಕರೆಗೆ ಸ್ಪಂದಿಸದ ಸಿಪಿಎಂ

ಕೋಲ್ಕತ್ತಾ, ನ.13: ಅಧಿಕ ವೌಲ್ಯದ ಕರೆನ್ಸಿ ನೋಟುಗನ್ನು ಅಮಾನ್ಯಗೊಳಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ಇದರ ವಿರುದ್ಧ ಹೋರಾಡಲು ಸಿಪಿಎಂ ಸೇರಿದಂತೆ ಪ್ರತಿಪಕ್ಷಗಳ ಜೊತೆ ಕೈಜೋಡಿಸಲು ಸಿದ್ದ ಎಂದು ಹೇಳಿಕೆ ನೀಡಿದ ಮರುದಿನ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರಿಗೆ ದೂರವಾಣಿ ಕರೆ ಮಾಡಿ, ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಒತ್ತಾಯಿಸಿದ್ದಾರೆ.
   ಆದರೆ ಮಮತಾರಿಗೆ ತೀವ್ರ ಮುಖಭಂಗ ಆಗುವ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಪಿಐ(ಎಂ) ಮುಖಂಡರು, ಇದೊಂದು ಹತಾಶೆಯ ಕರೆಯಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎನ್ನಲಾಗಿರುವ ತನ್ನ ಪಕ್ಷದ ಮುಖಂಡರನ್ನು ರಕ್ಷಿಸಿಕೊಳ್ಳಲು ಮಮತಾ ಮಾಡಿರುವ ಹತಾಶೆಯ ಕರೆ ಇದಾಗಿದೆ ಎಂದು ಟೀಕಿಸಿದ್ದಾರೆ.
ಇವತ್ತು ಮಮತಾ ಬ್ಯಾನರ್ಜಿಯವರು ಸೀತಾರಾಂ ಯೆಚೂರಿಯವರಿಗೆ ಫೋನ್ ಕರೆ ಮಾಡಿ, ಬಿಜೆಪಿ ವಿರುದ್ಧ ಸಂಘಟಿತ ಹೋರಾಟಕ್ಕೆ ಎಲ್ಲಾ ಪ್ರತಿಪಕ್ಷದವರೂ ಜೊತೆ ಸೇರಬೇಕು ಎಂದು ಹೇಳಿದ್ದರು. ಇದಕ್ಕೆ ಉತ್ತರಿಸಿದ ಯೆಚೂರಿ, ಈಗ ನಾನು ಪ್ರಯಾಣದಲ್ಲಿದ್ದೇನೆ. ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾಗಿ ಸಿಪಿಐ(ಎಂ) ಪ್ರಧಾನ ಸಮಿತಿ ಸದಸ್ಯ ಮೊಹಮ್ಮದ್ ಸಲೀಂ ಪಿಟಿಐಗೆ ತಿಳಿಸಿದ್ದಾರೆ.
   ಇದೊಂದು ಹತಾಶೆಯ ಕರೆಯಾಗಿದೆ. ತೃಣಮೂಲ ಕಾಂಗ್ರೆಸ್‌ನ ಮುಖಂಡರು ಸರಧ ಚಿಟ್‌ಫಂಡ್ ಹಗರಣ ಮತ್ತು ನಾರದ ಪ್ರಕರಣದಲ್ಲಿ ( ಟಿವಿ ಕುಟುಕು ಕಾರ್ಯಾಚರಣೆ)ಯಲ್ಲಿ ಶಾಮೀಲಾಗಿರುವುದಾಗಿ ಆರೋಪವಿದ್ದು ಬಂಧಿತರಾಗಿದ್ದಾರೆ. ತೃಣಮೂಲ ಕಾಂಗ್ರೆಸ್‌ನ(ಟಿಎಂಸಿ) ವಿಶ್ವಾಸಾರ್ಹತೆಯೇ ಸಂದೇಹಾಸ್ಪದವಾಗಿದೆ. ಹೀಗಿರುವಾಗ ಇವರು ಕಪ್ಪುಹಣದ ವಿರುದ್ಧ ಹೋರಾಟದ ಬಗ್ಗೆ ಹೇಗೆ ಮಾತಾಡುತ್ತಾರೆ? ಎಂದು ಸಲೀಂ ಪ್ರಶ್ನಿಸಿದರು.
ಮಮತಾರದ್ದು ಒಂದು ರಾಜಕೀಯ ಗಿಮಿಕ್ ಅಷ್ಟೇ. ಭ್ರಷ್ಟಾಚಾರದ ಮೂಲಕ ಪಶ್ಚಿಮ ಬಂಗಾಲದಲ್ಲಿ ಆಡಳಿತ ನಡೆಸುತ್ತಿರುವವರು ಕಪ್ಪು ಹಣದ ಬಗ್ಗೆ ಹೆಚ್ಚು ಮಾತಾಡಬಾರದು ಎಂದ ಅವರು, ಟಿಎಂಸಿ ಮತ್ತು ಬಿಜೆಪಿ ಮಧ್ಯೆ ರಾಜಕೀಯ ‘ಮ್ಯಾಚ್ ಫಿಕ್ಸಿಂಗ್’ ನಡೆದಿದೆ. ಆದ್ದರಿಂದಲೇ ಸರಧ ಪ್ರಕರಣದಲ್ಲಿ ಸಿಬಿಐ ತನಿಖೆ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದರು. ಮೊದಲು ಆರೋಪಮುಕ್ತರಾಗಿ ಬನ್ನಿ. ಆ ಬಳಿಕ ಕಪ್ಪು ಹಣದ ಬಗ್ಗೆ ಮಾತನಾಡಿ ಎಂದು ಸಲೀಂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X